<p>ಉಡುಪಿ: ಜಿಲ್ಲೆಯಲ್ಲಿ ಮಳೆಗಾಲ ಎದುರಿಸಲು ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಚರಂಡಿಗಳನ್ನು ಸ್ವಚ್ಛಗೊಳಿಸುವ ಕಾರ್ಯ ಈಗಾಗಲೇ ನಡೆಸಲಾಗಿದೆ ಎಂದು ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ. ತಿಳಿಸಿದ್ದಾರೆ.</p>.<p>ಸುದ್ದಿಗಾರರೊಂದಿಗೆ ಮಂಗಳವಾರ ಮಾತನಾಡಿದ ಅವರು, ಮರಗಳ ಅಪಾಯಕಾರಿ ಕೊಂಬೆಗಳನ್ನು ಕತ್ತರಿಸಲು ಮೆಸ್ಕಾಂನವರಿಗೆ ಸೂಚಿಸಲಾಗಿದೆ. ಜಿಲ್ಲೆಯಲ್ಲಿ ಶಿಥಿಲಗೊಂಡಿರುವ ಶಾಲಾ ಕಟ್ಟಡಗಳನ್ನು ಗುರುತಿಸಲಾಗಿದೆ ಮತ್ತು ಅದನ್ನು ದುರಸ್ತಿ ಮಾಡಲು ಈಗಾಗಲೇ ಸೂಚಿಸಲಾಗಿದೆ ಎಂದರು.</p>.<p>ಕಡಲ್ಕೊರೆತಕ್ಕೆ ಸಂಬಂಧಿಸಿದಂತೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಜಿಲ್ಲಾಡಳಿತ ಸಲ್ಲಿಸಿರುವ ಪ್ರಸ್ತಾವನೆಯನ್ನು ಸರ್ಕಾರವು ಪರಿಶೀಲನೆಗಾಗಿ ಚೆನ್ನೈನ ಸಂಸ್ಥೆಯೊಂದಕ್ಕೆ ಕಳುಹಿಸಿದೆ ಎಂದು ಹೇಳಿದರು.</p>.<p>ಮಳೆ ವಿಳಂಬವಾದರೂ ಜಿಲ್ಲೆಯ ಹೆಚ್ಚಿನ ಭಾಗದಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗಿಲ್ಲ. ಪೆರ್ಡೂರು ಭಾಗದಲ್ಲಿ ನೀರಿನ ಸಮಸ್ಯೆ ಕಾಡಿದ್ದು, ಅಲ್ಲಿನ ಗ್ರಾಮ ಪಂಚಾಯಿತಿಯವರು ನೀರು ಸರಬರಾಜಿಗೆ ಕ್ರಮ ಕೈಗೊಂಡಿದ್ದಾರೆ ಎಂದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260603-28-1571093220</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಉಡುಪಿ: ಜಿಲ್ಲೆಯಲ್ಲಿ ಮಳೆಗಾಲ ಎದುರಿಸಲು ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಚರಂಡಿಗಳನ್ನು ಸ್ವಚ್ಛಗೊಳಿಸುವ ಕಾರ್ಯ ಈಗಾಗಲೇ ನಡೆಸಲಾಗಿದೆ ಎಂದು ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ. ತಿಳಿಸಿದ್ದಾರೆ.</p>.<p>ಸುದ್ದಿಗಾರರೊಂದಿಗೆ ಮಂಗಳವಾರ ಮಾತನಾಡಿದ ಅವರು, ಮರಗಳ ಅಪಾಯಕಾರಿ ಕೊಂಬೆಗಳನ್ನು ಕತ್ತರಿಸಲು ಮೆಸ್ಕಾಂನವರಿಗೆ ಸೂಚಿಸಲಾಗಿದೆ. ಜಿಲ್ಲೆಯಲ್ಲಿ ಶಿಥಿಲಗೊಂಡಿರುವ ಶಾಲಾ ಕಟ್ಟಡಗಳನ್ನು ಗುರುತಿಸಲಾಗಿದೆ ಮತ್ತು ಅದನ್ನು ದುರಸ್ತಿ ಮಾಡಲು ಈಗಾಗಲೇ ಸೂಚಿಸಲಾಗಿದೆ ಎಂದರು.</p>.<p>ಕಡಲ್ಕೊರೆತಕ್ಕೆ ಸಂಬಂಧಿಸಿದಂತೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಜಿಲ್ಲಾಡಳಿತ ಸಲ್ಲಿಸಿರುವ ಪ್ರಸ್ತಾವನೆಯನ್ನು ಸರ್ಕಾರವು ಪರಿಶೀಲನೆಗಾಗಿ ಚೆನ್ನೈನ ಸಂಸ್ಥೆಯೊಂದಕ್ಕೆ ಕಳುಹಿಸಿದೆ ಎಂದು ಹೇಳಿದರು.</p>.<p>ಮಳೆ ವಿಳಂಬವಾದರೂ ಜಿಲ್ಲೆಯ ಹೆಚ್ಚಿನ ಭಾಗದಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗಿಲ್ಲ. ಪೆರ್ಡೂರು ಭಾಗದಲ್ಲಿ ನೀರಿನ ಸಮಸ್ಯೆ ಕಾಡಿದ್ದು, ಅಲ್ಲಿನ ಗ್ರಾಮ ಪಂಚಾಯಿತಿಯವರು ನೀರು ಸರಬರಾಜಿಗೆ ಕ್ರಮ ಕೈಗೊಂಡಿದ್ದಾರೆ ಎಂದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260603-28-1571093220</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>