ಉಡುಪಿ: ಜಿಲ್ಲೆಯಾದ್ಯಂತ ಸುರಿಯುತ್ತಿರುವ ಭಾರಿಮಳೆಗೆ ಕೃಷ್ಣಮಠದ ಪಾರ್ಕಿಂಗ್ ಆಸುಪಾಸಿನಲ್ಲಿರುವ ಬೈಲಕರೆ ಹಾಗೂ ಕಲ್ಸಂಕ ಪ್ರದೇಶದಲ್ಲಿರುವ ಮನೆಗಳು ಮುಳುಗಡೆಯಾಗಿದ್ದು ಅಗ್ನಿಶಾಮಕ ಸಿಬ್ಬಂದಿ ಬೋಟ್ಗಳ ಮೂಲಕ ನಿವಾಸಿಗಳನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಿದರು.
ಜಿಲ್ಲಾ ಅಗ್ನಿಶಾಮಕ ಅಧಿಕಾರಿ ವಸಂತ್ ಕುಮಾರ್, ಸಹಾಯಕ ಅಗ್ನಿಶಾಮಕ ದಳ ಅಧಿಕಾರಿ ಮೀರ್ ಮೊಹ್ಮದ್ ಗೌಸ್ ಹಾಗೂ ಸಿಬ್ಬಂದಿಗಳು ಉಡುಪಿ ಅಗ್ನಿಶಾಮಕ ಠಾಣೆ ಇವರ ನೇತೃತ್ವದಲ್ಲಿ ಅಲ್ಲಿನ ನಿವಾಸಿಗಳನ್ನು ಸ್ಥಳಾಂತರ ಮಾಡುವ ಕಾರ್ಯ ನಡೆಸಲಾಯಿತು.