<p>ಉಡುಪಿ: ‘ನಮ್ಮ ಬದುಕು ಸುಂದರವಾಗಬೇಕಾದರೆ ಧರ್ಮ ಸಹಿಷ್ಣುತೆ ಮುಖ್ಯವಾಗುತ್ತಿದೆ. ಕರಾವಳಿ ಭಾಗದ ಜನರು ಧಾರ್ಮಿಕತೆಯ ಜೊತೆಗೆ ಧರ್ಮ ಸಹಿಷ್ಣತೆಗೂ ಹೆಚ್ಚು ಒತ್ತು ನೀಡುತ್ತಾರೆ’ ಎಂದು ಕರಾವಳಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಎಂ.ಎ. ಗಫೂರ್ ಹೇಳಿದರು.</p>.<p>ಉಡುಪಿಯ ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವದ ಅಂಗವಾಗಿ ಶುಕ್ರವಾರ ಹಮ್ಮಿಕೊಂಡಿದ್ದ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ನಮ್ಮ ಬದುಕು ಶಾಶ್ವತವಲ್ಲ. ಯಾವಾಗ ಬೇಕಾದರೂ ಜಗತ್ತನ್ನು ಬಿಟ್ಟು ಹೋಗಬೇಕಾದೀತು. ಆದರೆ ನಾವು ಮಾಡುವ ಕಾರ್ಯಗಳು, ಸೇವೆಗಳು ಶಾಶ್ವತವಾಗಿ ಉಳಿಯುತ್ತವೆ’ ಎಂದರು.</p>.<p>‘ಅವಿಭಜಿತ ದಕ್ಷಿಣ ಕನ್ನಡದವರು ಪ್ರತಿಯೊಬ್ಬರನ್ನೂ ಗೌರವದಿಂದ ನೋಡುತ್ತಾರೆ. ಅದಕ್ಕೆ ಇಲ್ಲಿನ ಧಾರ್ಮಿಕ ನೆಲೆಗಟ್ಟೇ ಕಾರಣ’ ಎಂದು ಹೇಳಿದರು.</p>.<p>‘ನಾರಾಯಣ ಗುರುಗಳು ಧಾರ್ಮಿಕ ಸ್ವಾತಂತ್ರ್ಯಕ್ಕಾಗಿ ಹೋರಾಟ ಮಾಡಿದ್ದನ್ನು ನಾವು ಇತಿಹಾಸದಿಂದ ತಿಳಿದುಕೊಂಡಿದ್ದೇವೆ. ಡಾ. ಬಿ.ಆರ್. ಅಂಬೇಡ್ಕರ್ ಅವರು ನೀಡಿರುವ ಸಂವಿಧಾನದ ಮೂಲಕ ನಮಗೆ ಧಾರ್ಮಿಕ ಸ್ವಾತಂತ್ರ್ಯ ಲಭಿಸಿದೆ’ ಎಂದರು.</p>.<p>ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ಮಾತನಾಡಿ, ‘ದೇವರನ್ನು ಆರಾಧಿಸುವುದರಿಂದ ನಮಗೆ ಮನಃಶಾಂತಿ ಲಭಿಸುತ್ತದೆ. ಸಾರ್ವತ್ರಿಕವಾಗಿ ದೇವರನ್ನು ಆರಾಧಿಸುವುದರಿಂದ ಸಮಾಜದಲ್ಲಿ ಪ್ರಸನ್ನತೆ ಮೂಡುತ್ತದೆ’ ಎಂದು ಅಭಿಪ್ರಾಯಪಟ್ಟರು.</p>.<p>ಆದರ್ಶ ಆಸ್ಪತ್ರೆ ಮುಖ್ಯಸ್ಥ ಡಾ. ಜಿ. ಎಸ್. ಚಂದ್ರಶೇಖರ್ ಮಾತನಾಡಿ, ‘ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಸಾಕಷ್ಟು ಬ್ರಹ್ಮಕಲಶೋತ್ಸವ ಕಾರ್ಯಕ್ರಮಗಳು ಜರುಗುತ್ತವೆ. ಅಂತಹ ಕಾರ್ಯಕ್ರಮಗಳು ನಮ್ಮ ಸಂಸ್ಕೃತಿಯನ್ನು ಪ್ರತಿಬಿಂಬಿಸುತ್ತವೆ’ ಎಂದರು.</p>.<p>‘ಪಾಶ್ಚಾತ್ಯ ಸಂಸ್ಕೃತಿಗೆ ಮಾರು ಹೋಗಿರುವ ಇಂದಿನ ದಿನಮಾನದಲ್ಲಿ, ನಮ್ಮ ಸಂಸ್ಕೃತಿಯನ್ನು ಮುಂದಿನ ಪೀಳಿಗೆಗೂ ತಲುಪಿಸುವ ಜವಾಬ್ದಾರಿ ನಮ್ಮ ಮೇಲಿದೆ. ಅದಕ್ಕೆ ಇಂತಹ ಕಾರ್ಯಕ್ರಮಗಳು ಸಹಕಾರಿ’ ಎಂದರು.</p>.<p>‘ಇಂದು ಸ್ವ ಪ್ರತಿಷ್ಠೆಗಾಗಿ ಜಗತ್ತಿನ ವಿವಿಧೆಡೆ ಯುದ್ಧಗಳು ನಡೆಯುತ್ತಿವೆ. ಇಂತಹ ಸಂದರ್ಭದಲ್ಲಿ ಭಾರತವೇ ಹೆಚ್ಚು ಸುರಕ್ಷಿತ ದೇಶವಾಗಿದೆ. ಉತ್ತಮ ಸಂಸ್ಕೃತಿಯಿಂದ ಅದು ಸಾಧ್ಯವಾಗಿದೆ’ ಎಂದು ಹೇಳಿದರು.</p>.<p>ಪ್ರಮುಖರಾದ ರಮೇಶ್ ಕಾಂಚನ್, ಮಹೇಶ್ ಠಾಕೂರ್, ಶ್ರೀಕಾಂತ್ ಉಪಾಧ್ಯ, ಆನಂದ ಸುವರ್ಣ ಮತ್ತಿತರರು ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260418-28-2087833887</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಉಡುಪಿ: ‘ನಮ್ಮ ಬದುಕು ಸುಂದರವಾಗಬೇಕಾದರೆ ಧರ್ಮ ಸಹಿಷ್ಣುತೆ ಮುಖ್ಯವಾಗುತ್ತಿದೆ. ಕರಾವಳಿ ಭಾಗದ ಜನರು ಧಾರ್ಮಿಕತೆಯ ಜೊತೆಗೆ ಧರ್ಮ ಸಹಿಷ್ಣತೆಗೂ ಹೆಚ್ಚು ಒತ್ತು ನೀಡುತ್ತಾರೆ’ ಎಂದು ಕರಾವಳಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಎಂ.ಎ. ಗಫೂರ್ ಹೇಳಿದರು.</p>.<p>ಉಡುಪಿಯ ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವದ ಅಂಗವಾಗಿ ಶುಕ್ರವಾರ ಹಮ್ಮಿಕೊಂಡಿದ್ದ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ನಮ್ಮ ಬದುಕು ಶಾಶ್ವತವಲ್ಲ. ಯಾವಾಗ ಬೇಕಾದರೂ ಜಗತ್ತನ್ನು ಬಿಟ್ಟು ಹೋಗಬೇಕಾದೀತು. ಆದರೆ ನಾವು ಮಾಡುವ ಕಾರ್ಯಗಳು, ಸೇವೆಗಳು ಶಾಶ್ವತವಾಗಿ ಉಳಿಯುತ್ತವೆ’ ಎಂದರು.</p>.<p>‘ಅವಿಭಜಿತ ದಕ್ಷಿಣ ಕನ್ನಡದವರು ಪ್ರತಿಯೊಬ್ಬರನ್ನೂ ಗೌರವದಿಂದ ನೋಡುತ್ತಾರೆ. ಅದಕ್ಕೆ ಇಲ್ಲಿನ ಧಾರ್ಮಿಕ ನೆಲೆಗಟ್ಟೇ ಕಾರಣ’ ಎಂದು ಹೇಳಿದರು.</p>.<p>‘ನಾರಾಯಣ ಗುರುಗಳು ಧಾರ್ಮಿಕ ಸ್ವಾತಂತ್ರ್ಯಕ್ಕಾಗಿ ಹೋರಾಟ ಮಾಡಿದ್ದನ್ನು ನಾವು ಇತಿಹಾಸದಿಂದ ತಿಳಿದುಕೊಂಡಿದ್ದೇವೆ. ಡಾ. ಬಿ.ಆರ್. ಅಂಬೇಡ್ಕರ್ ಅವರು ನೀಡಿರುವ ಸಂವಿಧಾನದ ಮೂಲಕ ನಮಗೆ ಧಾರ್ಮಿಕ ಸ್ವಾತಂತ್ರ್ಯ ಲಭಿಸಿದೆ’ ಎಂದರು.</p>.<p>ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ಮಾತನಾಡಿ, ‘ದೇವರನ್ನು ಆರಾಧಿಸುವುದರಿಂದ ನಮಗೆ ಮನಃಶಾಂತಿ ಲಭಿಸುತ್ತದೆ. ಸಾರ್ವತ್ರಿಕವಾಗಿ ದೇವರನ್ನು ಆರಾಧಿಸುವುದರಿಂದ ಸಮಾಜದಲ್ಲಿ ಪ್ರಸನ್ನತೆ ಮೂಡುತ್ತದೆ’ ಎಂದು ಅಭಿಪ್ರಾಯಪಟ್ಟರು.</p>.<p>ಆದರ್ಶ ಆಸ್ಪತ್ರೆ ಮುಖ್ಯಸ್ಥ ಡಾ. ಜಿ. ಎಸ್. ಚಂದ್ರಶೇಖರ್ ಮಾತನಾಡಿ, ‘ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಸಾಕಷ್ಟು ಬ್ರಹ್ಮಕಲಶೋತ್ಸವ ಕಾರ್ಯಕ್ರಮಗಳು ಜರುಗುತ್ತವೆ. ಅಂತಹ ಕಾರ್ಯಕ್ರಮಗಳು ನಮ್ಮ ಸಂಸ್ಕೃತಿಯನ್ನು ಪ್ರತಿಬಿಂಬಿಸುತ್ತವೆ’ ಎಂದರು.</p>.<p>‘ಪಾಶ್ಚಾತ್ಯ ಸಂಸ್ಕೃತಿಗೆ ಮಾರು ಹೋಗಿರುವ ಇಂದಿನ ದಿನಮಾನದಲ್ಲಿ, ನಮ್ಮ ಸಂಸ್ಕೃತಿಯನ್ನು ಮುಂದಿನ ಪೀಳಿಗೆಗೂ ತಲುಪಿಸುವ ಜವಾಬ್ದಾರಿ ನಮ್ಮ ಮೇಲಿದೆ. ಅದಕ್ಕೆ ಇಂತಹ ಕಾರ್ಯಕ್ರಮಗಳು ಸಹಕಾರಿ’ ಎಂದರು.</p>.<p>‘ಇಂದು ಸ್ವ ಪ್ರತಿಷ್ಠೆಗಾಗಿ ಜಗತ್ತಿನ ವಿವಿಧೆಡೆ ಯುದ್ಧಗಳು ನಡೆಯುತ್ತಿವೆ. ಇಂತಹ ಸಂದರ್ಭದಲ್ಲಿ ಭಾರತವೇ ಹೆಚ್ಚು ಸುರಕ್ಷಿತ ದೇಶವಾಗಿದೆ. ಉತ್ತಮ ಸಂಸ್ಕೃತಿಯಿಂದ ಅದು ಸಾಧ್ಯವಾಗಿದೆ’ ಎಂದು ಹೇಳಿದರು.</p>.<p>ಪ್ರಮುಖರಾದ ರಮೇಶ್ ಕಾಂಚನ್, ಮಹೇಶ್ ಠಾಕೂರ್, ಶ್ರೀಕಾಂತ್ ಉಪಾಧ್ಯ, ಆನಂದ ಸುವರ್ಣ ಮತ್ತಿತರರು ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260418-28-2087833887</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>