<p><strong>ಉಡುಪಿ</strong>: ಉಡುಪಿ ವಿಧಾನಸಭಾ ಕ್ಷೇತ್ರದ ಅಂಬಲಪಾಡಿ, ಕಡೆಕಾರು, ಉದ್ಯಾವರ ಗ್ರಾಮ ಸಂಪರ್ಕಿಸುವ ಬಂಕೇರಕಟ್ಟ ಸೇತುವೆಯಿಂದ ಸಂಪಿಗೆ ನಗರದ ವರೆಗಿನ ಸುಮಾರು ₹4 ಕೋಟಿ ವೆಚ್ಚದಲ್ಲಿ ಅಭಿವೃದ್ಧಿಗೊಂಡ ಮುಖ್ಯ ರಸ್ತೆಯನ್ನು ಶಾಸಕ ಯಶ್ಪಾಲ್ ಸುವರ್ಣ ಉದ್ಘಾಟಿಸಿದರು.</p>.<p>ಬಳಿಕ ಮಾತನಾಡಿದ ಅವರು, ಉದ್ಯಾವರ ಭಾಗದಿಂದ ರಾಷ್ಟ್ರೀಯ ಹೆದ್ದಾರಿಗೆ ಪರ್ಯಾಯವಾಗಿ ಮಲ್ಪೆಯನ್ನು ಸಂಪರ್ಕಿಸುವ ಮುಖ್ಯರಸ್ತೆಯನ್ನು ಅಭಿವೃದ್ಧಿ ಪಡಿಸುವುದರಿಂದ ದಿನಂಪ್ರತಿ ಸಂಚರಿಸುವ ಸಾವಿರಾರು ಜನರಿಗೆ ಅನುಕೂಲವಾಗಲಿದ್ದು, ಮುಂದಿನ ದಿನಗಳಲ್ಲಿ ಇತರ ಪ್ರಮುಖ ರಸ್ತೆಗಳ ಅಭಿವೃದ್ಧಿಗೆ ವಿಶೇಷ ಆದ್ಯತೆ ನೀಡಲಿದ್ದೇವೆ ಎಂದು ಹೇಳಿದರು.</p>.<p>ಮುಖಂಡರಾದ ಉದಯ ಕುಮಾರ್ ಶೆಟ್ಟಿ ಕಿದಿಯೂರು, ಜಗದೀಶ್ ಆಚಾರ್ಯ ಕಪ್ಪೆಟ್ಟು, ವೆಂಕಟರಮಣ ಕಿದಿಯೂರು, ಪ್ರವೀಣ್ ಶೆಟ್ಟಿ ಕಪ್ಪೆಟ್ಟು, ಗಿರೀಶ್ ಅಮೀನ್, ಅಶೋಕ್ ಪಾಲನ್, ಪ್ರಶಾಂತ್ ಸಾಲ್ಯಾನ್, ಜಯಕರ್ ಸನಿಲ್, ರಾಜೇಂದ್ರ ಪಂದುಬೆಟ್ಟು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260520-28-1455704479</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಉಡುಪಿ</strong>: ಉಡುಪಿ ವಿಧಾನಸಭಾ ಕ್ಷೇತ್ರದ ಅಂಬಲಪಾಡಿ, ಕಡೆಕಾರು, ಉದ್ಯಾವರ ಗ್ರಾಮ ಸಂಪರ್ಕಿಸುವ ಬಂಕೇರಕಟ್ಟ ಸೇತುವೆಯಿಂದ ಸಂಪಿಗೆ ನಗರದ ವರೆಗಿನ ಸುಮಾರು ₹4 ಕೋಟಿ ವೆಚ್ಚದಲ್ಲಿ ಅಭಿವೃದ್ಧಿಗೊಂಡ ಮುಖ್ಯ ರಸ್ತೆಯನ್ನು ಶಾಸಕ ಯಶ್ಪಾಲ್ ಸುವರ್ಣ ಉದ್ಘಾಟಿಸಿದರು.</p>.<p>ಬಳಿಕ ಮಾತನಾಡಿದ ಅವರು, ಉದ್ಯಾವರ ಭಾಗದಿಂದ ರಾಷ್ಟ್ರೀಯ ಹೆದ್ದಾರಿಗೆ ಪರ್ಯಾಯವಾಗಿ ಮಲ್ಪೆಯನ್ನು ಸಂಪರ್ಕಿಸುವ ಮುಖ್ಯರಸ್ತೆಯನ್ನು ಅಭಿವೃದ್ಧಿ ಪಡಿಸುವುದರಿಂದ ದಿನಂಪ್ರತಿ ಸಂಚರಿಸುವ ಸಾವಿರಾರು ಜನರಿಗೆ ಅನುಕೂಲವಾಗಲಿದ್ದು, ಮುಂದಿನ ದಿನಗಳಲ್ಲಿ ಇತರ ಪ್ರಮುಖ ರಸ್ತೆಗಳ ಅಭಿವೃದ್ಧಿಗೆ ವಿಶೇಷ ಆದ್ಯತೆ ನೀಡಲಿದ್ದೇವೆ ಎಂದು ಹೇಳಿದರು.</p>.<p>ಮುಖಂಡರಾದ ಉದಯ ಕುಮಾರ್ ಶೆಟ್ಟಿ ಕಿದಿಯೂರು, ಜಗದೀಶ್ ಆಚಾರ್ಯ ಕಪ್ಪೆಟ್ಟು, ವೆಂಕಟರಮಣ ಕಿದಿಯೂರು, ಪ್ರವೀಣ್ ಶೆಟ್ಟಿ ಕಪ್ಪೆಟ್ಟು, ಗಿರೀಶ್ ಅಮೀನ್, ಅಶೋಕ್ ಪಾಲನ್, ಪ್ರಶಾಂತ್ ಸಾಲ್ಯಾನ್, ಜಯಕರ್ ಸನಿಲ್, ರಾಜೇಂದ್ರ ಪಂದುಬೆಟ್ಟು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260520-28-1455704479</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>