ಮಧ್ಯಾಹ್ನ 12.45ಕ್ಕೆ ಹಿರಿಯಡಕದಲ್ಲಿರುವ ಶೀರೂರು ಮೂಲಮಠದಲ್ಲಿ ಪಟ್ಟಾಭಿಷೇಕದ ವಿಧಿವಿಧಾನಗಳು ನಡೆದವು. ದ್ವಂದ್ವ ಮಠವಾದ ಸೋದೆ ವಾದಿರಾಜ ಮಠದ ವಿಶ್ವವಲ್ಲಭ ತೀರ್ಥ ಸ್ವಾಮೀಜಿ ನೂತನ ಯತಿಗೆ ಪಟ್ಟಾಭಿಷೇಕ ಮಾಡಿದರು. ಇದಕ್ಕೂ ಮುನ್ನ ಪುರುಷಸೂಕ್ತ ಹೋಮ, ವಿರಜಾ ಹೋಮ, ವೇದವ್ಯಾಸ ಮಂತ್ರ ಹೋಮ ಸೇರಿದಂತೆ ಹಲವು ಧಾರ್ಮಿಕ ವಿಧಿವಿಧಾನಗಳು ನಡೆದವು.