ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶೀರೂರು ಮಠದ ಉತ್ತರಾಧಿಕಾರಿ ಸನ್ಯಾಸ ದೀಕ್ಷೆ ಸ್ವೀಕಾರ

Last Updated 13 ಮೇ 2021, 12:16 IST
ಅಕ್ಷರ ಗಾತ್ರ

ಹಿರಿಯಡಕ (ಉಡುಪಿ): ಶೀರೂರು ಮಠದ ಉತ್ತರಾಧಿಕಾರಿಯಾಗಿ ನಿಯೋಜನೆಗೊಂಡಿರುವ ಅನಿರುದ್ಧ ಸರಳಾತ್ತಾಯ ಗುರುವಾರ ಹಿರಿಯಡಕದಲ್ಲಿರುವ ಶೀರೂರು ಮೂಲಮಠದಲ್ಲಿ ಸನ್ಯಾಸ ದೀಕ್ಷೆ ಸ್ವೀಕರಿಸಿದರು.

ಸನ್ಯಾಸ ದೀಕ್ಷೆಯ ಅಂಗವಾಗಿ ಶಾಕಲ ಹೋಮ, ವಿರಜಾ ಹೋಮ, ಪ್ರೈಶೋಚ್ಚಾರಣೆ ಸೇರಿದಂತೆ ಹಲವು ಧಾರ್ಮಿಕ ವಿಧಿ ವಿಧಾನಗಳು ನೆರವೇರಿದವು.

ಸೋದೆ ವಾದಿರಾಜ ಮಠಾಧೀಶರಾದ ವಿಶ್ವವಲ್ಲಭ ತೀರ್ಥ ಸ್ವಾಮೀಜಿ ಯತಿಗಳಿಗೆ ಕಲಶಾಭಿಷೇಕ ನೆರವೇರಿಸಿ ಪ್ರಣವ ಮಂತ್ರೋಪದೇಶ ಮಾಡಿದರು.

ಶುಕ್ರವಾರ ಅನಿರುದ್ಧ ಸರಳತ್ತಾಯರ ಪಟ್ಟಾಭಿಷೇಕ ನಡೆಯಲಿದ್ದು, ಶೀರೂರು ಮಠದ ನೂತನ ಉತ್ತರಾಧಿಕಾರಿಯಾಗಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT