<p><strong>ಉಡುಪಿ:</strong> ಶಿರೂರು ಮಠಾಧೀಶ ವೇದವರ್ಧನತೀರ್ಥ ಶ್ರೀಪಾದರ ಪ್ರಥಮ ಪರ್ಯಾಯದ ಮುಹೂರ್ತಗಳಲ್ಲಿ ಮೂರನೆಯದಾದ ಕಟ್ಟಿಗೆ ಮುಹೂರ್ತ ಶ್ರೀಕೃಷ್ಣ ಮಠದಲ್ಲಿ ಪರಿಸರದಲ್ಲಿ ಭಾನುವಾರ ಜರುಗಿತು.</p>.<p>ದಿವಾನ ಉದಯಕುಮಾರ ಸರಳತ್ತಾಯ ನೇತೃತ್ವದಲ್ಲಿ ಪುರೋಹಿತ ಗಿರಿರಾಜ ಉಪಾಧ್ಯಾಯ ಅವರು ವಿಠಲ ದೇವರಿಗೆ ಪ್ರಾರ್ಥನೆ ಸಲ್ಲಿಸಿದರು. ಬಳಿಕ ರಥಬೀದಿಯಲ್ಲಿ ಚಂದ್ರೇಶ್ವರ, ಅನಂತೇಶ್ವರ, ಕೃಷ್ಣಮಠದಲ್ಲಿ ಕೃಷ್ಣ ಮುಖ್ಯಪ್ರಾಣ ದೇವರಿಗೂ ಪ್ರಾರ್ಥನೆ ಸಲ್ಲಿಸಲಾಯಿತು.</p>.<p>ಕಲ್ಸಂಕದ ಬಳಿಯ ಲಕ್ಷ್ಮಿ ತೋಟದಿಂದ ಕಟ್ಟಿಗೆಗಳನ್ನು ಮೂರು ಎತ್ತಿನ ಗಾಡಿಗಳಲ್ಲಿ ಮತ್ತು ಭಕ್ತರು ತಲೆಹೊರೆಯಲ್ಲಿ ರಥಬೀದಿಗೆ ತಂದರು. ಮಧ್ವಸರೋವರದ ಈಶಾನ್ಯ ಭಾಗದ ನಿಗದಿತ ಸ್ಥಳದಲ್ಲಿ ನವಧಾನ್ಯ ದಾನ, ಪೂಜೆ ಸಲ್ಲಿಸಲಾಯಿತು.</p>.<p>ಪರ್ಯಾಯ ಪುತ್ತಿಗೆ ಮಠಾಧೀಶ ಸುಗುಣೇಂದ್ರತೀರ್ಥ ಶ್ರೀಪಾದರು, ಕಿರಿಯ ಶ್ರೀ ಸುಶ್ರೀಂದ್ರತೀರ್ಥ ಶ್ರೀಪಾದರು ಹಾಗೂ ವೇದವರ್ಧನತೀರ್ಥ ಶ್ರೀಪಾದರು ಜೊತೆಯಾಗಿ ಕಟ್ಟಿಗೆ ರಥ ನಿರ್ಮಾಣ ಕಾರ್ಯಕ್ಕೆ ಚಾಲನೆ ನೀಡಿದರು.</p>.<p>ಧಾರ್ಮಿಕ ಸಭೆಯಲ್ಲಿ ಮಾತನಾಡಿದ ವೇದವರ್ಧನತೀರ್ಥ ಶ್ರೀಪಾದರು, ‘ಇದು ನಮ್ಮ ಪರ್ಯಾಯ ಎನ್ನುವುದಕ್ಕಿಂತಲೂ ಕೃಷ್ಣ ಭಕ್ತರ ಪರ್ಯಾಯವಾಗಿದೆ’ ಎಂದು ಹೇಳಿದರು. </p>.<p>‘ಕೃಷ್ಣನಿಗೆ ನೈವೇದ್ಯ ಸಮರ್ಪಿಸಿ, ಅದನ್ನು ಪ್ರಸಾದ ರೂಪದಲ್ಲಿ ವಿತರಿಸಲಾಗುತ್ತದೆ. ಇದನ್ನು ಸಿದ್ಧಪಡಿಸಲು ಕಟ್ಟಿಗೆಗಳನ್ನು ಭಕ್ತರ ಸಹಕಾರದಿಂದಲೇ ಸಂಗ್ರಹಿಸಲಾಗಿದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಉಡುಪಿ:</strong> ಶಿರೂರು ಮಠಾಧೀಶ ವೇದವರ್ಧನತೀರ್ಥ ಶ್ರೀಪಾದರ ಪ್ರಥಮ ಪರ್ಯಾಯದ ಮುಹೂರ್ತಗಳಲ್ಲಿ ಮೂರನೆಯದಾದ ಕಟ್ಟಿಗೆ ಮುಹೂರ್ತ ಶ್ರೀಕೃಷ್ಣ ಮಠದಲ್ಲಿ ಪರಿಸರದಲ್ಲಿ ಭಾನುವಾರ ಜರುಗಿತು.</p>.<p>ದಿವಾನ ಉದಯಕುಮಾರ ಸರಳತ್ತಾಯ ನೇತೃತ್ವದಲ್ಲಿ ಪುರೋಹಿತ ಗಿರಿರಾಜ ಉಪಾಧ್ಯಾಯ ಅವರು ವಿಠಲ ದೇವರಿಗೆ ಪ್ರಾರ್ಥನೆ ಸಲ್ಲಿಸಿದರು. ಬಳಿಕ ರಥಬೀದಿಯಲ್ಲಿ ಚಂದ್ರೇಶ್ವರ, ಅನಂತೇಶ್ವರ, ಕೃಷ್ಣಮಠದಲ್ಲಿ ಕೃಷ್ಣ ಮುಖ್ಯಪ್ರಾಣ ದೇವರಿಗೂ ಪ್ರಾರ್ಥನೆ ಸಲ್ಲಿಸಲಾಯಿತು.</p>.<p>ಕಲ್ಸಂಕದ ಬಳಿಯ ಲಕ್ಷ್ಮಿ ತೋಟದಿಂದ ಕಟ್ಟಿಗೆಗಳನ್ನು ಮೂರು ಎತ್ತಿನ ಗಾಡಿಗಳಲ್ಲಿ ಮತ್ತು ಭಕ್ತರು ತಲೆಹೊರೆಯಲ್ಲಿ ರಥಬೀದಿಗೆ ತಂದರು. ಮಧ್ವಸರೋವರದ ಈಶಾನ್ಯ ಭಾಗದ ನಿಗದಿತ ಸ್ಥಳದಲ್ಲಿ ನವಧಾನ್ಯ ದಾನ, ಪೂಜೆ ಸಲ್ಲಿಸಲಾಯಿತು.</p>.<p>ಪರ್ಯಾಯ ಪುತ್ತಿಗೆ ಮಠಾಧೀಶ ಸುಗುಣೇಂದ್ರತೀರ್ಥ ಶ್ರೀಪಾದರು, ಕಿರಿಯ ಶ್ರೀ ಸುಶ್ರೀಂದ್ರತೀರ್ಥ ಶ್ರೀಪಾದರು ಹಾಗೂ ವೇದವರ್ಧನತೀರ್ಥ ಶ್ರೀಪಾದರು ಜೊತೆಯಾಗಿ ಕಟ್ಟಿಗೆ ರಥ ನಿರ್ಮಾಣ ಕಾರ್ಯಕ್ಕೆ ಚಾಲನೆ ನೀಡಿದರು.</p>.<p>ಧಾರ್ಮಿಕ ಸಭೆಯಲ್ಲಿ ಮಾತನಾಡಿದ ವೇದವರ್ಧನತೀರ್ಥ ಶ್ರೀಪಾದರು, ‘ಇದು ನಮ್ಮ ಪರ್ಯಾಯ ಎನ್ನುವುದಕ್ಕಿಂತಲೂ ಕೃಷ್ಣ ಭಕ್ತರ ಪರ್ಯಾಯವಾಗಿದೆ’ ಎಂದು ಹೇಳಿದರು. </p>.<p>‘ಕೃಷ್ಣನಿಗೆ ನೈವೇದ್ಯ ಸಮರ್ಪಿಸಿ, ಅದನ್ನು ಪ್ರಸಾದ ರೂಪದಲ್ಲಿ ವಿತರಿಸಲಾಗುತ್ತದೆ. ಇದನ್ನು ಸಿದ್ಧಪಡಿಸಲು ಕಟ್ಟಿಗೆಗಳನ್ನು ಭಕ್ತರ ಸಹಕಾರದಿಂದಲೇ ಸಂಗ್ರಹಿಸಲಾಗಿದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>