<p><strong>ಉಡುಪಿ:</strong> ನಾವು ಬರೆಯುವಾಗ ಎಲ್ಲಾ ಇಂದ್ರಿಯಗಳು ಕೆಲಸ ಮಾಡುತ್ತಿರುತ್ತವೆ. ಎಲ್ಲಾ ಇಂದ್ರಿಯಗಳಿಂದ ನಾವು ಕೃಷ್ಣನ ಸ್ಮರಣೆ ಮಾಡಬೇಕೆನ್ನುವ ಉದ್ದೇಶದಿಂದ ಶ್ರೀಕೃಷ್ಣ ಮಂತ್ರ ಲೇಖನ ಯಜ್ಞ ಆರಂಭಿಸಲಾಗಿದೆ ಎಂದು ಪರ್ಯಾಯ ಶೀರೂರು ಮಠಾಧೀಶ ವೇದವರ್ಧನತೀರ್ಥ ಶ್ರೀಪಾದರು ಹೇಳಿದರು.</p>.<p>ಪರ್ಯಾಯ ಶೀರೂರು ಮಠದ ವತಿಯಿಂದ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಶ್ರೀಕೃಷ್ಣ ಮಂತ್ರ ಲೇಖನ ಯಜ್ಞ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>100 ಕೋಟಿ ಕೃಷ್ಣ ಜಪ ನಡೆಯಬೇಕೆಂಬ ಆಶಯವನ್ನು ಈ ಕಾರ್ಯಕ್ರಮ ಹೊಂದಿದೆ. ಕೃಷ್ಣ ಎಂದರೆ ಆಕರ್ಷಣೆ, ಎಲ್ಲರೂ ಈ ಮೂಲಕ ಕೃಷ್ಣನ ಕಡೆಗೆ ಆಕರ್ಷಿತರಾಗಬೇಕು ಎಂದರು.</p>.<p>ಇಸ್ಕಾನ್ ಬೆಂಗಳೂರು ಉಪಾಧ್ಯಕ್ಷ ಚಂಚಲಪತಿ ದಾಸರು ಮಾತನಾಡಿ, ಕೃಷ್ಣನ ನಾಮ ಜಪವು ಜೀವನವನ್ನು ಪರಿಪೂರ್ಣವಾಗಿಸುತ್ತದೆ. ಕೃಷ್ಣನನ್ನು ಸಂಪೂರ್ಣವಾಗಿ ಅರ್ಥೈಸುವುದು ಕಷ್ಟ. ಶ್ರೀಕೃಷ್ಣ ಮಂತ್ರ ಲೇಖನ ಯಜ್ಞದ ಮೂಲಕ ಎಲ್ಲರು ಭಕ್ತಿಯ ಮಾರ್ಗದಲ್ಲಿ ನಡೆಯಬೇಕು ಎಂದು ಹೇಳಿದರು.</p>.<p>ಶಾಸಕರಾದ ಯಶ್ಪಾಲ್ ಸುವರ್ಣ, ಗುರ್ಮೆ ಸುರೇಶ್ ಶೆಟ್ಟಿ, ಎ.ಹರಿದಾಸ ಭಟ್ಟ ಆಚಾರ್ಯ ಉಪಸ್ಥಿತರಿದ್ದರು. ಮಠದ ದಿವಾನ ಉದಯ ಕುಮಾರ್ ಸರಳತ್ತಾಯ ಸ್ವಾಗತಿಸಿದರು. ಆನಂದತೀರ್ಥ ಆಚಾರ್ಯ ನಿರೂಪಿಸಿದರು.</p>.<p>ಚಂಚಲಪತಿದಾಸ್ ಅವರು ಈ ಯೋಜನೆಯ ವೆಬ್ಸೈಟ್ ಉದ್ಘಾಟಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಉಡುಪಿ:</strong> ನಾವು ಬರೆಯುವಾಗ ಎಲ್ಲಾ ಇಂದ್ರಿಯಗಳು ಕೆಲಸ ಮಾಡುತ್ತಿರುತ್ತವೆ. ಎಲ್ಲಾ ಇಂದ್ರಿಯಗಳಿಂದ ನಾವು ಕೃಷ್ಣನ ಸ್ಮರಣೆ ಮಾಡಬೇಕೆನ್ನುವ ಉದ್ದೇಶದಿಂದ ಶ್ರೀಕೃಷ್ಣ ಮಂತ್ರ ಲೇಖನ ಯಜ್ಞ ಆರಂಭಿಸಲಾಗಿದೆ ಎಂದು ಪರ್ಯಾಯ ಶೀರೂರು ಮಠಾಧೀಶ ವೇದವರ್ಧನತೀರ್ಥ ಶ್ರೀಪಾದರು ಹೇಳಿದರು.</p>.<p>ಪರ್ಯಾಯ ಶೀರೂರು ಮಠದ ವತಿಯಿಂದ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಶ್ರೀಕೃಷ್ಣ ಮಂತ್ರ ಲೇಖನ ಯಜ್ಞ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>100 ಕೋಟಿ ಕೃಷ್ಣ ಜಪ ನಡೆಯಬೇಕೆಂಬ ಆಶಯವನ್ನು ಈ ಕಾರ್ಯಕ್ರಮ ಹೊಂದಿದೆ. ಕೃಷ್ಣ ಎಂದರೆ ಆಕರ್ಷಣೆ, ಎಲ್ಲರೂ ಈ ಮೂಲಕ ಕೃಷ್ಣನ ಕಡೆಗೆ ಆಕರ್ಷಿತರಾಗಬೇಕು ಎಂದರು.</p>.<p>ಇಸ್ಕಾನ್ ಬೆಂಗಳೂರು ಉಪಾಧ್ಯಕ್ಷ ಚಂಚಲಪತಿ ದಾಸರು ಮಾತನಾಡಿ, ಕೃಷ್ಣನ ನಾಮ ಜಪವು ಜೀವನವನ್ನು ಪರಿಪೂರ್ಣವಾಗಿಸುತ್ತದೆ. ಕೃಷ್ಣನನ್ನು ಸಂಪೂರ್ಣವಾಗಿ ಅರ್ಥೈಸುವುದು ಕಷ್ಟ. ಶ್ರೀಕೃಷ್ಣ ಮಂತ್ರ ಲೇಖನ ಯಜ್ಞದ ಮೂಲಕ ಎಲ್ಲರು ಭಕ್ತಿಯ ಮಾರ್ಗದಲ್ಲಿ ನಡೆಯಬೇಕು ಎಂದು ಹೇಳಿದರು.</p>.<p>ಶಾಸಕರಾದ ಯಶ್ಪಾಲ್ ಸುವರ್ಣ, ಗುರ್ಮೆ ಸುರೇಶ್ ಶೆಟ್ಟಿ, ಎ.ಹರಿದಾಸ ಭಟ್ಟ ಆಚಾರ್ಯ ಉಪಸ್ಥಿತರಿದ್ದರು. ಮಠದ ದಿವಾನ ಉದಯ ಕುಮಾರ್ ಸರಳತ್ತಾಯ ಸ್ವಾಗತಿಸಿದರು. ಆನಂದತೀರ್ಥ ಆಚಾರ್ಯ ನಿರೂಪಿಸಿದರು.</p>.<p>ಚಂಚಲಪತಿದಾಸ್ ಅವರು ಈ ಯೋಜನೆಯ ವೆಬ್ಸೈಟ್ ಉದ್ಘಾಟಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>