ಉಡುಪಿ:ಜಿಲ್ಲೆಯಲ್ಲಿ ಈಚೆಗೆ ಲ್ಯಾಬ್ ಟೆಕ್ನಿಷನ್ವೊಬ್ಬರಿಗೆ ಕೋವಿಡ್–19 ಸೋಂಕು ಕಾಣಿಸಿಕೊಂಡಿದ್ದು, ಅವರ ಸೋಂಕಿನ ಮೂಲ ಇನ್ನೂ ಪತ್ತೆಯಾಗದಿರುವುದು ಆತಂಕ ಮೂಡಿಸಿದೆ.
ಈ ವಿಚಾರವಾಗಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಜಿಲ್ಲಾಧಿಕಾರಿ ಜಿ.ಜಗದೀಶ್, ಲ್ಯಾಬ್ ಟೆಕ್ನಿಷಿಯನ್ಗೆ ಸೋಂಕು ಯಾರಿಂದ ತಗುಲಿದೆ, ಹೇಗೆ ತಗುಲಿದೆಎಂಬುದನ್ನು ಪತ್ತೆ ಹಚ್ಚಲಾಗುತ್ತಿದೆ. ಆತಂಕ ಪಡುವ ಅಗತ್ಯವಿಲ್ಲ ಎಂದು ತಿಳಿಸಿದರು.
ಬುಧವಾರ ಶೂನ್ಯ ಪ್ರಕರಣ:
ಜಿಲ್ಲೆಯಲ್ಲಿ ಬುಧವಾರ ಯಾವುದೇ ಕೋವಿಡ್–19 ಸೋಂಕಿತ ಪ್ರಕರಣಗಳು ದೃಢಪಟ್ಟಿಲ್ಲ. 2 ದಿನಗಳಿಂದಲೂ ಜಿಲ್ಲೆಯಲ್ಲಿ ಸೋಂಕಿತ ಪ್ರಕರಣಗಳು ಪತ್ತೆಯಾಗದಿರುವುದು ಸ್ವಲ್ಪ ನಿರಾಳ ಮೂಡಿಸಿದೆ.
459ಮಂದಿ ಬಿಡುಗಡೆ:
ಜಿಲ್ಲೆಯಲ್ಲಿ ಸೋಂಕಿತರು ಹೆಚ್ಚಿನ ಸಂಖ್ಯೆಯಲ್ಲಿ ಗುಣಮುಖರಾಗುತ್ತಿದ್ದು ಇದುವರೆಗೂ459 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಸದ್ಯ486 ಸಕ್ರಿಯ ಪ್ರಕರಣಗಳು ಇವೆ.