ರಾಜ್ಯದಲ್ಲಿ 2 ವರ್ಷಗಳಿಂದ ಮಾದಕವಸ್ತು ಜಾಲವನ್ನು ಮಟ್ಟಹಾಕಲು ಆದ್ಯತೆ ನೀಡಲಾಗಿದೆ. ಜಿಲ್ಲೆಯಲ್ಲಿ ಡ್ರಗ್ಸ್ ಮಾಫಿಯ ನಿರ್ಮೂಲನೆಗೆ ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳಲಾಗುವುದು. ಡ್ರಗ್ಸ್ ಮಾಫಿಯಾದಿಂದ ಭಯೋತ್ಪಾದನಾ ಕೃತ್ಯಗಳಿಗೆ ಹಣ ಹರಿಯುತ್ತಿದ್ದು, ದೇಶದ ಯುವ ಸಂಪತ್ತು ನಾಶವಾಗುತ್ತಿದ್ದು, ಮಾದಕ ವಸ್ತುಗಳ ಪೂರೈಕೆ ಹಾಗೂ ಬಳಕೆಗೆ ಕಡಿವಾಣ ಹಾಕಲಾಗುವುದು ಎಂದು ಎಸ್ಪಿ ತಿಳಿಸಿದರು.