ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉಡುಪಿಯ ಕೃಷ್ಣಮಠದಲ್ಲಿ ದೇವರ ದರ್ಶನಕ್ಕೆ ಜು.11ರಿಂದ ಅವಕಾಶ

Last Updated 10 ಜುಲೈ 2021, 15:38 IST
ಅಕ್ಷರ ಗಾತ್ರ

ಉಡುಪಿ: ಜುಲೈ 11ರಿಂದ ಕೃಷ್ಣಮಠದಲ್ಲಿ ದೇವರ ದರ್ಶನಕ್ಕೆ ಭಕ್ತರಿಗೆ ಅವಕಾಶ ನೀಡಲಾಗಿದೆ ಎಂದು ಅದಮಾರು ಮಠದ ವ್ಯವಸ್ಥಾಪಕ ಗೋವಿಂದರಾಜ್‌ ತಿಳಿಸಿದ್ದಾರೆ.

ಪರ್ಯಾಯ ಅದಮಾರು ಮಠದ ಈಶಪ್ರಿಯತೀರ್ಥಶ್ರೀಗಳ ಸೂಚನೆಯಂತೆ ಮಧ್ಯಾಹ್ನ 2 ಗಂಟೆಯಿಂದ ಸಂಜೆ 6 ರವರೆಗೆ ದೇವರ ದರ್ಶನಕ್ಕೆ ಅನುಮತಿ ನೀಡಲಾಗಿದೆ. ಭಕ್ತರು ಮಾಸ್ಕ್ ಧರಿಸಿ, ಅಂತರ ಕಾಯ್ದುಕೊಂಡು ದೇವಸ್ಥಾನ ಪ್ರವೇಶಿಸಬೇಕು ಎಂದು ಮನವಿ ಮಾಡಿದ್ದಾರೆ.

ಈಚೆಗೆ ದೇವಸ್ಥಾನಗಳನ್ನು ತೆರೆಯಲು ಸರ್ಕಾರ ಅನುಮತಿ ನೀಡಿದ್ದರೂ ಕೃಷ್ಣಮಠ ಭಕ್ತರ ಪ್ರವೇಶಕ್ಕೆ ಮುಕ್ತವಾಗಿರಲಿಲ್ಲ. ಪರಿಸ್ಥಿತಿ ನೋಡಿಕೊಂಡು ದೇವಸ್ಥಾನ ತೆರೆಯುವುದಾಗಿ ಅದಮಾರು ಮಠದ ಶ್ರೀಗಳು ತಿಳಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT