<p>ಶಿರ್ವ: ಕಲಿಯುಗದ ಅಧಿದೇವ ಶ್ರೀನಿವಾಸ ಕಲ್ಯಾಣೋತ್ಸವದಲ್ಲಿ ಭಾಗಿಯಾಗುವುದೇ ಪುಣ್ಯದ ಕಾರ್ಯ. ಕೃಷ್ಣ ಬೇರೆಯಲ್ಲ, ಶ್ರೀನಿವಾಸ ಬೇರೆಯಲ್ಲ. ಭಕ್ತಿಯ ಮೇಲೆ ದೇವರ ಅನುಗ್ರಹವಿದೆ ಎಂದು ಉಡುಪಿ ಕೃಷ್ಣಾಪುರ ಮಠದ ವಿದ್ಯಾಸಾಗರ ತೀರ್ಥ ಸ್ವಾಮೀಜಿ ಹೇಳಿದರು.</p>.<p>ಕಟಪಾಡಿ ಎಸ್ವಿಎಸ್ಪದವಿ ಪೂರ್ವ ಕಾಲೇಜಿನ ಕ್ರೀಡಾಂಗಣದಲ್ಲಿ ಶನಿವಾರ ಲೋಕ ಕಲ್ಯಾಣಾರ್ಥವಾಗಿ ಜರುಗಿದ ಶ್ರೀನಿವಾಸ ಕಲ್ಯಾಣೋತ್ಸವದಲ್ಲಿ ಭಾಗವಹಿಸಿ ಆಶೀರ್ವಚನ ನೀಡಿದರು.</p>.<p>ಕಟಪಾಡಿ ಪೇಟೆಯಿಂದ ಮೆರವಣಿಗೆಯ ಮೂಲಕ ಶ್ರೀನಿವಾಸ ದೇವರ ಮೂರ್ತಿಯನ್ನು ಪೂರ್ಣ ಕುಂಭ ಮೆರವಣಿಗೆಯೊಂದಿಗೆ ಸ್ವಾಗತಿಸಲಾಯಿತು. ತಿರುಮಲ ದೇವಸ್ಥಾನ ಸಮಿತಿಯವರ ಪ್ರಧಾನ ಅರ್ಚಕರಿಂದಲೇ ಕಲ್ಯಾಣೋತ್ಸವದ ಧಾರ್ಮಿಕ ಅನುಷ್ಠಾನಗಳು ಜರಗಿತು. ಶ್ರೀದೇವರ ವಿವಾಹ ಮಂಟಪ ಭಕ್ತರ ಕಣ್ಮನ ಸೆಳೆಯಿತು.</p>.<p>ದಕ್ಷಿಣ ಕನ್ನಡ .ಮತ್ತು ಉಡುಪಿ ಜಿಲ್ಲೆಗಳ ಸುಮಾರು ಮೂವತ್ತು ಸಾವಿರ ಭಕ್ತರು ಭಾಗವಹಿಸಿದ್ದರು. ವೃದ್ಧರು ಹಾಗೂ ವಿಶೇಷ ಚೇತನರಿಗೆ ಕಲ್ಯಾಣೋತ್ಸವವನ್ನು ಕಣ್ತುಂಬಿಕೊಳ್ಳಲು ವಿಶೇಷ ಸೌಕರ್ಯ ಕಲ್ಪಿಸಲಾಗಿತ್ತು.</p>.<p>ಈ ಸಂದರ್ಭ ವಿಶೇಷವಾಗಿ ಮುಡಿಪು ಸೇವೆ ಸಲ್ಲಿಸುವವರಿಗೆ ತಿರುಪತಿ ಹುಂಡಿ ವ್ಯವಸ್ಥೆ ಮಾಡಲಾಗಿತ್ತು. ತಿರುಪತಿಯಿಂದ ತರಿಸಲಾದ ವಿಶೇಷ ಲಡ್ಡು ಪ್ರಸಾದ ಸಹಿತ ಪ್ರಸಾದ ವಿತರಣೆ ಪ್ರಸಾದ ಸ್ವೀಕಾರ ಹಾಗೂ ಅನ್ನಸಂತರ್ಪಣೆಯು ನೆರವೇರಿತು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260412-28-1368892611</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಶಿರ್ವ: ಕಲಿಯುಗದ ಅಧಿದೇವ ಶ್ರೀನಿವಾಸ ಕಲ್ಯಾಣೋತ್ಸವದಲ್ಲಿ ಭಾಗಿಯಾಗುವುದೇ ಪುಣ್ಯದ ಕಾರ್ಯ. ಕೃಷ್ಣ ಬೇರೆಯಲ್ಲ, ಶ್ರೀನಿವಾಸ ಬೇರೆಯಲ್ಲ. ಭಕ್ತಿಯ ಮೇಲೆ ದೇವರ ಅನುಗ್ರಹವಿದೆ ಎಂದು ಉಡುಪಿ ಕೃಷ್ಣಾಪುರ ಮಠದ ವಿದ್ಯಾಸಾಗರ ತೀರ್ಥ ಸ್ವಾಮೀಜಿ ಹೇಳಿದರು.</p>.<p>ಕಟಪಾಡಿ ಎಸ್ವಿಎಸ್ಪದವಿ ಪೂರ್ವ ಕಾಲೇಜಿನ ಕ್ರೀಡಾಂಗಣದಲ್ಲಿ ಶನಿವಾರ ಲೋಕ ಕಲ್ಯಾಣಾರ್ಥವಾಗಿ ಜರುಗಿದ ಶ್ರೀನಿವಾಸ ಕಲ್ಯಾಣೋತ್ಸವದಲ್ಲಿ ಭಾಗವಹಿಸಿ ಆಶೀರ್ವಚನ ನೀಡಿದರು.</p>.<p>ಕಟಪಾಡಿ ಪೇಟೆಯಿಂದ ಮೆರವಣಿಗೆಯ ಮೂಲಕ ಶ್ರೀನಿವಾಸ ದೇವರ ಮೂರ್ತಿಯನ್ನು ಪೂರ್ಣ ಕುಂಭ ಮೆರವಣಿಗೆಯೊಂದಿಗೆ ಸ್ವಾಗತಿಸಲಾಯಿತು. ತಿರುಮಲ ದೇವಸ್ಥಾನ ಸಮಿತಿಯವರ ಪ್ರಧಾನ ಅರ್ಚಕರಿಂದಲೇ ಕಲ್ಯಾಣೋತ್ಸವದ ಧಾರ್ಮಿಕ ಅನುಷ್ಠಾನಗಳು ಜರಗಿತು. ಶ್ರೀದೇವರ ವಿವಾಹ ಮಂಟಪ ಭಕ್ತರ ಕಣ್ಮನ ಸೆಳೆಯಿತು.</p>.<p>ದಕ್ಷಿಣ ಕನ್ನಡ .ಮತ್ತು ಉಡುಪಿ ಜಿಲ್ಲೆಗಳ ಸುಮಾರು ಮೂವತ್ತು ಸಾವಿರ ಭಕ್ತರು ಭಾಗವಹಿಸಿದ್ದರು. ವೃದ್ಧರು ಹಾಗೂ ವಿಶೇಷ ಚೇತನರಿಗೆ ಕಲ್ಯಾಣೋತ್ಸವವನ್ನು ಕಣ್ತುಂಬಿಕೊಳ್ಳಲು ವಿಶೇಷ ಸೌಕರ್ಯ ಕಲ್ಪಿಸಲಾಗಿತ್ತು.</p>.<p>ಈ ಸಂದರ್ಭ ವಿಶೇಷವಾಗಿ ಮುಡಿಪು ಸೇವೆ ಸಲ್ಲಿಸುವವರಿಗೆ ತಿರುಪತಿ ಹುಂಡಿ ವ್ಯವಸ್ಥೆ ಮಾಡಲಾಗಿತ್ತು. ತಿರುಪತಿಯಿಂದ ತರಿಸಲಾದ ವಿಶೇಷ ಲಡ್ಡು ಪ್ರಸಾದ ಸಹಿತ ಪ್ರಸಾದ ವಿತರಣೆ ಪ್ರಸಾದ ಸ್ವೀಕಾರ ಹಾಗೂ ಅನ್ನಸಂತರ್ಪಣೆಯು ನೆರವೇರಿತು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260412-28-1368892611</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>