<p><strong>ಉಡುಪಿ:</strong> ಸುಪ್ರೀಂ ಕೋರ್ಟ್ ಸೂಚನೆ ಪ್ರಕಾರ ನಗರಸಭಾ ವ್ಯಾಪ್ತಿಯಲ್ಲಿ ಬೀದಿ ನಾಯಿಗಳಿಗೆ ಎಲ್ಲೆಂದರಲ್ಲಿ ಆಹಾರ ಹಾಕುವುದನ್ನು ನಿಷೇಧಿಸಲಾಗುತ್ತಿದ್ದು, ಆಹಾರವನ್ನು ಹಾಕುವ ಸ್ಥಳವನ್ನು ನಿಗದಿಪಡಿಸಿ ಫಲಕ ಹಾಕಲಾಗುವುದು ಎಂದು ಪೌರಾಯುಕ್ತ ಮಹೇಶ್ ಹಂಗರಗಿ ತಿಳಿಸಿದರು.</p>.<p>ನಗರಸಭೆಯ ಸತ್ಯಮೂರ್ತಿ ಸಭಾಂಗಣದಲ್ಲಿ ಸೋಮವಾರ ನಡೆದ ಸಭೆಯಲ್ಲಿ ಅವರು ಮಾತನಾಡಿದರು.</p>.<p>ಎಬಿಸಿ ಕಾರ್ಯಕ್ರಮವನ್ನು ಸ್ಥಳೀಯ ಎನ್ಜಿಒ ಜೊತೆ ಸೇರಿ ಅನುಷ್ಠಾನಗೊಳಿಸಲಾಗುವುದು ಎಂದರು.</p>.<p>ಪರಿಸರ ಇಂಜಿನಿಯರ್ ರವಿಪ್ರಕಾಶ್ ಮಾತನಾಡಿ, ಮಕ್ಕಳು, ಹಿರಿಯ ನಾಗರಿಕರಿಗೆ ಬೀದಿನಾಯಿಗಳಿಂದ ಬಹಳಷ್ಟು ತೊಂದರೆಯಾಗುತ್ತಿರುವ ಬಗ್ಗೆ ದೂರುಗಳು ಸಲ್ಲಿಕೆಯಾಗಿವೆ ಎಂದರು.</p>.<p>ನಗರಸಭಾ ಸದಸ್ಯ ಗಿರೀಶ್ ಅಂಚನ್ ಮಾತನಾಡಿ, ನಗರಸಭೆ ಸುತ್ತಮುತ್ತ ಎರಡಕ್ಕಿಂತ ಹೆಚ್ಚು ನಾಯಿಗಳನ್ನು ಸಾಕುತ್ತಿರುವವರು ನೋಂದಣಿ ಮಾಡಿಕೊಳ್ಳುವಂತೆ ನಿಯಮ ರೂಪಿಸಬೇಕು ಎಂದು ಸಲಹೆ ನೀಡಿದರು.</p>.<p>ನಗರಸಭಾ ಅಧ್ಯಕ್ಷ ಪ್ರಭಾಕರ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು. ಪಶುಸಂಗೋಪನಾ ಇಲಾಖೆ ಉಪನಿರ್ದೇಶಕ ರೆಡ್ಡಪ್ಪ, ಸ್ಥಾಯಿ ಸಮಿತಿ ಅಧ್ಯಕ್ಷ ವಿಜಯಕೊಡವೂರು, ಜಿ.ಟಿ. ಹೆಗ್ಡೆ, ಮಂಜುನಾಥ್ ಮಣಿಪಾಲ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಉಡುಪಿ:</strong> ಸುಪ್ರೀಂ ಕೋರ್ಟ್ ಸೂಚನೆ ಪ್ರಕಾರ ನಗರಸಭಾ ವ್ಯಾಪ್ತಿಯಲ್ಲಿ ಬೀದಿ ನಾಯಿಗಳಿಗೆ ಎಲ್ಲೆಂದರಲ್ಲಿ ಆಹಾರ ಹಾಕುವುದನ್ನು ನಿಷೇಧಿಸಲಾಗುತ್ತಿದ್ದು, ಆಹಾರವನ್ನು ಹಾಕುವ ಸ್ಥಳವನ್ನು ನಿಗದಿಪಡಿಸಿ ಫಲಕ ಹಾಕಲಾಗುವುದು ಎಂದು ಪೌರಾಯುಕ್ತ ಮಹೇಶ್ ಹಂಗರಗಿ ತಿಳಿಸಿದರು.</p>.<p>ನಗರಸಭೆಯ ಸತ್ಯಮೂರ್ತಿ ಸಭಾಂಗಣದಲ್ಲಿ ಸೋಮವಾರ ನಡೆದ ಸಭೆಯಲ್ಲಿ ಅವರು ಮಾತನಾಡಿದರು.</p>.<p>ಎಬಿಸಿ ಕಾರ್ಯಕ್ರಮವನ್ನು ಸ್ಥಳೀಯ ಎನ್ಜಿಒ ಜೊತೆ ಸೇರಿ ಅನುಷ್ಠಾನಗೊಳಿಸಲಾಗುವುದು ಎಂದರು.</p>.<p>ಪರಿಸರ ಇಂಜಿನಿಯರ್ ರವಿಪ್ರಕಾಶ್ ಮಾತನಾಡಿ, ಮಕ್ಕಳು, ಹಿರಿಯ ನಾಗರಿಕರಿಗೆ ಬೀದಿನಾಯಿಗಳಿಂದ ಬಹಳಷ್ಟು ತೊಂದರೆಯಾಗುತ್ತಿರುವ ಬಗ್ಗೆ ದೂರುಗಳು ಸಲ್ಲಿಕೆಯಾಗಿವೆ ಎಂದರು.</p>.<p>ನಗರಸಭಾ ಸದಸ್ಯ ಗಿರೀಶ್ ಅಂಚನ್ ಮಾತನಾಡಿ, ನಗರಸಭೆ ಸುತ್ತಮುತ್ತ ಎರಡಕ್ಕಿಂತ ಹೆಚ್ಚು ನಾಯಿಗಳನ್ನು ಸಾಕುತ್ತಿರುವವರು ನೋಂದಣಿ ಮಾಡಿಕೊಳ್ಳುವಂತೆ ನಿಯಮ ರೂಪಿಸಬೇಕು ಎಂದು ಸಲಹೆ ನೀಡಿದರು.</p>.<p>ನಗರಸಭಾ ಅಧ್ಯಕ್ಷ ಪ್ರಭಾಕರ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು. ಪಶುಸಂಗೋಪನಾ ಇಲಾಖೆ ಉಪನಿರ್ದೇಶಕ ರೆಡ್ಡಪ್ಪ, ಸ್ಥಾಯಿ ಸಮಿತಿ ಅಧ್ಯಕ್ಷ ವಿಜಯಕೊಡವೂರು, ಜಿ.ಟಿ. ಹೆಗ್ಡೆ, ಮಂಜುನಾಥ್ ಮಣಿಪಾಲ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>