ಹೊರ ರಾಜ್ಯಗಳಿಂದ ಬರುವವರು ಕಾಪು, ಬ್ರಹ್ಮಾವರ, ಬೈಂದೂರು, ಕಾರ್ಕಳ, ಉಡುಪಿ, ಕುಂದಾಪುರದಲ್ಲಿರುವ ಜಿಲ್ಲಾ ಸ್ವೀಕೃತ ಕೇಂದ್ರಗಳಿಗೆ ಮೊದಲು ಬರಬೇಕು. ಅಲ್ಲಿ ತಪಾಸಣೆ ನಡೆಸಿ, ಕೈಗೆ ಸೀಲ್ ಹಾಕಿ ಹೋಂ ಕ್ವಾರಂಟೈನ್ಗೆ ಕಳಿಸಲಾಗುವುದು. ರೋಗದ ಲಕ್ಷಣಗಳಿದ್ದರೆ ಆಸ್ಪತ್ರೆಗೆ ಕರೆದೊಯ್ದು ಪರೀಕ್ಷೆ ನಡೆಸಿ ವರದಿ ನೆಗೆಟಿವ್ ಬಂದರೆ ಹೋಂ ಕ್ವಾರಂಟೈನ್ಗೆ ಕಳಿಸಲಾಗುವುದು ಎಂದು ಮಾಹಿತಿ ನೀಡಿದರು.