<p>ಉಡುಪಿ: ಜಿಲ್ಲೆಯ ವಿವಿಧೆಡೆ ರಾಷ್ಟ್ರೀಯ ಹೆದ್ದಾರಿ ಮತ್ತು ರಾಜ್ಯ ಹೆದ್ದಾರಿಗಳಲ್ಲಿ ಈಚೆಗೆ ಅಳವಡಿಸಿರುವ ಸ್ಪೀಡ್ ರಾಡಾರ್ ಕ್ಯಾಮೆರಾದ ಮೂಲಕ ಸಂಚಾರ ನಿಯಮ ಉಲ್ಲಂಘಿಸುವವರನ್ನು ಪತ್ತೆ ಹಚ್ಚಿ ದಂಡಾಸ್ತ್ರ ಪ್ರಯೋಗಿಸುವ ಕಾರ್ಯ ಆರಂಭವಾಗಿದೆ.</p>.<p>ಸ್ಪೀಡ್ ರಾಡಾರ್ ಕ್ಯಾಮೆರಾ ಕಾರ್ಯಾಚರಣೆ ಆರಂಭಿಸಿ ನಾಲ್ಕು ದಿನದೊಳಗೆ ಜಿಲ್ಲೆಯಲ್ಲಿ ಒಟ್ಟು 46,753 ನಿಯಮ ಉಲ್ಲಂಘನೆ ಪ್ರಕರಣಗಳು ಪತ್ತೆಯಾಗಿವೆ. 235 ಮಂದಿಗೆ ಈಗಾಗಲೇ ದಂಡ ಪಾವತಿಸಲು ಚಲನ್ ಕಳುಹಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.</p>.<p>ಅತಿ ವೇಗ, ಹೆಲ್ಮೆಟ್ ರಹಿತ ದ್ವಿಚಕ್ರ ವಾಹನ ಸವಾರಿ, ಸೀಟ್ ಬೆಲ್ಟ್ ಧರಿಸದೆ ಪ್ರಯಾಣ ಮೊದಲಾದ ಕಾನೂನು ಉಲ್ಲಂಘನೆ ಪತ್ತೆಯಾಗಿದೆ ಎಂದು ನಿಯಂತ್ರಣ ಕೊಠಡಿಯ ಎಸ್ಐ ಅಜ್ಮಲ್ ಇಬ್ರಾಹಿಂ ತಿಳಿಸಿದರು.</p>.<p>ಸಂಚಾರ ನಿಯಮ ಉಲ್ಲಂಘಿಸಿರುವ 50ರಿಂದ 100 ಪ್ರಕರಣಗಳು ಪ್ರತಿದಿನ ಪತ್ತೆಯಾಗುತ್ತಿವೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಯಲ್ಲಿರುವ ನಿಯಂತ್ರಣ ಕೊಠಡಿಯಲ್ಲಿ ಈ ಕ್ಯಾಮೆರಾದ ದೃಶ್ಯಾವಳಿಗಳನ್ನು ವೀಕ್ಷಣೆ ಮಾಡಲಾಗುತ್ತಿದೆ ಎಂದು ಅವರು ತಿಳಿಸಿದರು.</p>.<p>ನಿಯಮ ಉಲ್ಲಂಘಿಸುವವರ ಮನೆಗಳಿಗೆ ಅಂಚೆ ಮೂಲಕ ದಂಡದ ಚಲನ್ ಕಳುಹಿಸಲಾಗುತ್ತಿದೆ. ಈ ಪ್ರಕ್ರಿಯೆ ಈಗಾಗಲೇ ಆರಂಭವಾಗಿದೆ. ಹೆಲ್ಮೆಟ್ ಧರಿಸದೆ ಪ್ರಯಾಣ, ಸೀಟ್ ಬೆಲ್ಟ್ ಧರಿಸದಿರುವುದು, ದ್ವಿಚಕ್ರ ವಾಹನದಲ್ಲಿ ಮೂವರು ಪ್ರಯಾಣಿಸಿದರೆ ₹500 ದಂಡ ವಿಧಿಸಲಾಗುತ್ತಿದೆ. ಮೊಬೈಲ್ನಲ್ಲಿ ಮಾತನಾಡಿಕೊಂಡು ವಾಹನ ಚಾಲನೆ ಮಾಡಿದರೆ ದ್ವಿಚಕ್ರ ವಾಹನಕ್ಕೆ ₹1,200, ಲಘು ವಾಹನಗಳಿಗೆ ₹3,000 ಘನ ವಾಹನಗಳಿಗೆ ₹5,000 ದಂಡ ವಿಧಿಸಲಾಗುತ್ತಿದೆ ಎಂದು ವಿವರಿಸಿದರು.</p>.<p>ಅಂತರರಾಜ್ಯದ ವಾಹನಗಳು ನಿಯಮ ಉಲ್ಲಂಘಿಸಿದರೆ ಅವರಿಗೂ ದಂಡದ ಚಲನ್ ಕಳುಹಿಸಲಾಗುವುದು. ಸದ್ಯ ಅವರು ಉಡುಪಿ ಜಿಲ್ಲೆಗೆ ಬಂದು ದಂಡ ಕಟ್ಟಬೇಕಾಗಿದೆ. ಇತರರು ಸಮೀಪದ ಯಾವುದೇ ಠಾಣೆಗಳಲ್ಲಿ ದಂಡ ಪಾವತಿಸಬಹುದಾಗಿದೆ ಎಂದು ಅವರು ತಿಳಿಸಿದರು.</p>.<p>ಸ್ಪೀಡ್ ರಾಡಾರ್ ಕ್ಯಾಮೆರಾ ಅಳವಡಿಸಿರುವುದರಿಂದ ಸಂಚಾರ ನಿಯಮ ಉಲ್ಲಂಘಿಸುವವರಿಗೆ ದಂಡ ವಿಧಿಸುವುದಷ್ಟೇ ಅಲ್ಲದೆ ಅಪರಾಧ ಕೃತ್ಯ ನಡೆಸಿ ಪರಾರಿಯಾಗುವವರ ವಾಹನಗಳನ್ನು ಪತ್ತೆ ಹಚ್ಚಲು ಕೂಡ ಸಾಧ್ಯವಾಗಲಿದೆ ಎಂದು ಅವರು ವಿವರಿಸಿದರು</p>.<p>ಜಿಲ್ಲೆಯ ಪಡುಬಿದ್ರಿಯ ಉಚ್ಚಿಲ, ಕಾಪುವಿನ ದಂಡತೀರ್ಥ, ಕೋಟದ ತೆಕ್ಕಟ್ಟೆ, ಗಂಗೊಳ್ಳಿಯ ತ್ರಾಸಿ ಮತ್ತು ಬೈಂದೂರಿನ ನಾಯಕನ ಕಟ್ಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಹಾಗೂ ಕಾರ್ಕಳದ ದೂಪದಕಟ್ಟೆ ಬಳಿ ರಾಜ್ಯ ಹೆದ್ದಾರಿಯಲ್ಲಿ ಈ ಕ್ಯಾಮೆರಾ ಅಳವಡಿಸಲಾಗಿದೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260527-28-1532415147</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಉಡುಪಿ: ಜಿಲ್ಲೆಯ ವಿವಿಧೆಡೆ ರಾಷ್ಟ್ರೀಯ ಹೆದ್ದಾರಿ ಮತ್ತು ರಾಜ್ಯ ಹೆದ್ದಾರಿಗಳಲ್ಲಿ ಈಚೆಗೆ ಅಳವಡಿಸಿರುವ ಸ್ಪೀಡ್ ರಾಡಾರ್ ಕ್ಯಾಮೆರಾದ ಮೂಲಕ ಸಂಚಾರ ನಿಯಮ ಉಲ್ಲಂಘಿಸುವವರನ್ನು ಪತ್ತೆ ಹಚ್ಚಿ ದಂಡಾಸ್ತ್ರ ಪ್ರಯೋಗಿಸುವ ಕಾರ್ಯ ಆರಂಭವಾಗಿದೆ.</p>.<p>ಸ್ಪೀಡ್ ರಾಡಾರ್ ಕ್ಯಾಮೆರಾ ಕಾರ್ಯಾಚರಣೆ ಆರಂಭಿಸಿ ನಾಲ್ಕು ದಿನದೊಳಗೆ ಜಿಲ್ಲೆಯಲ್ಲಿ ಒಟ್ಟು 46,753 ನಿಯಮ ಉಲ್ಲಂಘನೆ ಪ್ರಕರಣಗಳು ಪತ್ತೆಯಾಗಿವೆ. 235 ಮಂದಿಗೆ ಈಗಾಗಲೇ ದಂಡ ಪಾವತಿಸಲು ಚಲನ್ ಕಳುಹಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.</p>.<p>ಅತಿ ವೇಗ, ಹೆಲ್ಮೆಟ್ ರಹಿತ ದ್ವಿಚಕ್ರ ವಾಹನ ಸವಾರಿ, ಸೀಟ್ ಬೆಲ್ಟ್ ಧರಿಸದೆ ಪ್ರಯಾಣ ಮೊದಲಾದ ಕಾನೂನು ಉಲ್ಲಂಘನೆ ಪತ್ತೆಯಾಗಿದೆ ಎಂದು ನಿಯಂತ್ರಣ ಕೊಠಡಿಯ ಎಸ್ಐ ಅಜ್ಮಲ್ ಇಬ್ರಾಹಿಂ ತಿಳಿಸಿದರು.</p>.<p>ಸಂಚಾರ ನಿಯಮ ಉಲ್ಲಂಘಿಸಿರುವ 50ರಿಂದ 100 ಪ್ರಕರಣಗಳು ಪ್ರತಿದಿನ ಪತ್ತೆಯಾಗುತ್ತಿವೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಯಲ್ಲಿರುವ ನಿಯಂತ್ರಣ ಕೊಠಡಿಯಲ್ಲಿ ಈ ಕ್ಯಾಮೆರಾದ ದೃಶ್ಯಾವಳಿಗಳನ್ನು ವೀಕ್ಷಣೆ ಮಾಡಲಾಗುತ್ತಿದೆ ಎಂದು ಅವರು ತಿಳಿಸಿದರು.</p>.<p>ನಿಯಮ ಉಲ್ಲಂಘಿಸುವವರ ಮನೆಗಳಿಗೆ ಅಂಚೆ ಮೂಲಕ ದಂಡದ ಚಲನ್ ಕಳುಹಿಸಲಾಗುತ್ತಿದೆ. ಈ ಪ್ರಕ್ರಿಯೆ ಈಗಾಗಲೇ ಆರಂಭವಾಗಿದೆ. ಹೆಲ್ಮೆಟ್ ಧರಿಸದೆ ಪ್ರಯಾಣ, ಸೀಟ್ ಬೆಲ್ಟ್ ಧರಿಸದಿರುವುದು, ದ್ವಿಚಕ್ರ ವಾಹನದಲ್ಲಿ ಮೂವರು ಪ್ರಯಾಣಿಸಿದರೆ ₹500 ದಂಡ ವಿಧಿಸಲಾಗುತ್ತಿದೆ. ಮೊಬೈಲ್ನಲ್ಲಿ ಮಾತನಾಡಿಕೊಂಡು ವಾಹನ ಚಾಲನೆ ಮಾಡಿದರೆ ದ್ವಿಚಕ್ರ ವಾಹನಕ್ಕೆ ₹1,200, ಲಘು ವಾಹನಗಳಿಗೆ ₹3,000 ಘನ ವಾಹನಗಳಿಗೆ ₹5,000 ದಂಡ ವಿಧಿಸಲಾಗುತ್ತಿದೆ ಎಂದು ವಿವರಿಸಿದರು.</p>.<p>ಅಂತರರಾಜ್ಯದ ವಾಹನಗಳು ನಿಯಮ ಉಲ್ಲಂಘಿಸಿದರೆ ಅವರಿಗೂ ದಂಡದ ಚಲನ್ ಕಳುಹಿಸಲಾಗುವುದು. ಸದ್ಯ ಅವರು ಉಡುಪಿ ಜಿಲ್ಲೆಗೆ ಬಂದು ದಂಡ ಕಟ್ಟಬೇಕಾಗಿದೆ. ಇತರರು ಸಮೀಪದ ಯಾವುದೇ ಠಾಣೆಗಳಲ್ಲಿ ದಂಡ ಪಾವತಿಸಬಹುದಾಗಿದೆ ಎಂದು ಅವರು ತಿಳಿಸಿದರು.</p>.<p>ಸ್ಪೀಡ್ ರಾಡಾರ್ ಕ್ಯಾಮೆರಾ ಅಳವಡಿಸಿರುವುದರಿಂದ ಸಂಚಾರ ನಿಯಮ ಉಲ್ಲಂಘಿಸುವವರಿಗೆ ದಂಡ ವಿಧಿಸುವುದಷ್ಟೇ ಅಲ್ಲದೆ ಅಪರಾಧ ಕೃತ್ಯ ನಡೆಸಿ ಪರಾರಿಯಾಗುವವರ ವಾಹನಗಳನ್ನು ಪತ್ತೆ ಹಚ್ಚಲು ಕೂಡ ಸಾಧ್ಯವಾಗಲಿದೆ ಎಂದು ಅವರು ವಿವರಿಸಿದರು</p>.<p>ಜಿಲ್ಲೆಯ ಪಡುಬಿದ್ರಿಯ ಉಚ್ಚಿಲ, ಕಾಪುವಿನ ದಂಡತೀರ್ಥ, ಕೋಟದ ತೆಕ್ಕಟ್ಟೆ, ಗಂಗೊಳ್ಳಿಯ ತ್ರಾಸಿ ಮತ್ತು ಬೈಂದೂರಿನ ನಾಯಕನ ಕಟ್ಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಹಾಗೂ ಕಾರ್ಕಳದ ದೂಪದಕಟ್ಟೆ ಬಳಿ ರಾಜ್ಯ ಹೆದ್ದಾರಿಯಲ್ಲಿ ಈ ಕ್ಯಾಮೆರಾ ಅಳವಡಿಸಲಾಗಿದೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260527-28-1532415147</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>