<p>ಶಿರ್ವ: ಒಂದು ಸಂಸ್ಥೆಯ ವಾರ್ಷಿಕ ಚಟುವಟಿಕೆಗಳ ದಾಖಲಾತಿ ಚರಿತ್ರೆಗೆ ಪ್ರಾಮುಖ್ಯವಾಗುತ್ತದೆ. ಸಂಸ್ಥೆಯ ಸಾಮಾಜಿಕ ಚಟುವಟಿಕೆಗಳನ್ನು ಮುಂದಿನ ತಲೆಮಾರಿಗೆ ದಾಟಿಸಬೇಕಾದ ಅನಿವಾರ್ಯತೆ ಇದೆ. ಮುಂದಿನ ತಲೆಮಾರು ಜನಪರ ಕೆಲಸ ಕಾರ್ಯಗಳಲ್ಲಿ ತೊಡಗಿಕೊಳ್ಳುವಂತೆ ಮಾಡುವಲ್ಲಿ ಈ ದಾಖಲೆಗಳು ಸಹಕಾರಿಯಾಗಿವೆ ಎಂದು ಉಡುಪಿ ತಾಲ್ಲೂಕು ಭೂನ್ಯಾಯ ಮಂಡಳಿಯ ಸದಸ್ಯ ರೋಯ್ಸ್ ಮಾರ್ವಿನ್ ಫರ್ನಾಂಡಿಸ್ ಹೇಳಿದರು.</p>.<p>ಉದ್ಯಾವರ ಫ್ರೆಂಡ್ಸ್ ಸರ್ಕಲ್ನ ಆಶ್ರಯದಲ್ಲಿ ಉದ್ಯಾವರದಲ್ಲಿ ನಡೆದ ‘ಯು.ಎಫ್.ಸಿ. ಮಾತುಕತೆ - 2025’ ವಾರ್ಷಿಕ ಸಂಚಿಕೆ ಬಿಡುಗಡೆಗೊಳಿಸಿ ಅವರು ಮಾತನಾಡಿದರು. ಉದ್ಯಾವರ ಫ್ರೆಂಡ್ಸ್ ಸರ್ಕಲ್ ಆರೋಗ್ಯವಂತ ಮನಸ್ಸುಗಳನ್ನು ಕೂಡಿಸಿಕೊಂಡು ಸೌಹಾರ್ದದಿಂದ ಸಾಮಾಜಿಕ ಚಟುವಟಿಕೆ ನಡೆಸುವ ಮೂಲಕ ಮಾದರಿಯಾಗಿದೆ ಎಂದರು.</p>.<p>ಅಧ್ಯಕ್ಷತೆ ವಹಿಸಿದ್ದ ಗೌರವಾಧ್ಯಕ್ಷ ಉದ್ಯಾವರ ನಾಗೇಶ್ ಕುಮಾರ್ ಮಾತನಾಡಿ, ‘ಸಂಸ್ಥೆ ನಡೆಸಿರುವ ಕಾರ್ಯ ದಾಖಲಾಗಲಿ ಎಂಬ ಕಾರಣಕ್ಕೆ ಹತ್ತು ವರ್ಷಗಳಿಂದ ಈ ವಾರ್ಷಿಕ ಸಂಚಿಕೆ ಹೊರತರಲಾಗುತ್ತಿದೆ. ಯಾವುದೇ ಪ್ರಚಾರಕ್ಕಾಗಿ ಅಲ್ಲ ಎಂದರು. ಸಂಸ್ಥೆಯ ಮಾಜಿ ಅಧ್ಯಕ್ಷ ರಿಯಾಝ್ ಪಳ್ಳಿ ಮಾತನಾಡಿದರು.</p>.<p>ನಿರ್ದೇಶಕರಾದ ಚಂದ್ರಾವತಿ ಎಸ್. ಭಂಡಾರಿ, ಶರತ್ ಕುಮಾರ್, ಯು.ಪದ್ಮನಾಭ ಕಾಮತ್, ಕೋಶಾಧಿಕಾರಿ ಸತೀಶ್ ಡಿ. ಸಾಲ್ಯಾನ್, ಉಪಾಧ್ಯಕ್ಷ ಶ್ರೀಧರ ಮಾಬಿಯಾನ್, ಕಾರ್ಯದರ್ಶಿಗಳಾದ ಆಶಾ ವಾಸು, ಭಾಸ್ಕರ್ ಬಂಗೇರ, ಮಾಜಿ ಅಧ್ಯಕ್ಷ ಅನುಪ್ ಕುಮಾರ್, ಸದಸ್ಯರಾದ ಲೋಕನಾಥ್ ಬೊಳ್ಜೆ ಉಪಸ್ಥಿತರಿದ್ದರು.</p>.<p>ಅಧ್ಯಕ್ಷ ಗಿರೀಶ್ ಗುಡ್ಡೆಯಂಗಡಿ ಸ್ವಾಗತಿಸಿದರು. ಪ್ರಧಾನ ಕಾರ್ಯದರ್ಶಿ ಸುಹೇಲ್ ರಹಮತುಲ್ಲ ನಿರೂಪಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260519-28-388307597</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಶಿರ್ವ: ಒಂದು ಸಂಸ್ಥೆಯ ವಾರ್ಷಿಕ ಚಟುವಟಿಕೆಗಳ ದಾಖಲಾತಿ ಚರಿತ್ರೆಗೆ ಪ್ರಾಮುಖ್ಯವಾಗುತ್ತದೆ. ಸಂಸ್ಥೆಯ ಸಾಮಾಜಿಕ ಚಟುವಟಿಕೆಗಳನ್ನು ಮುಂದಿನ ತಲೆಮಾರಿಗೆ ದಾಟಿಸಬೇಕಾದ ಅನಿವಾರ್ಯತೆ ಇದೆ. ಮುಂದಿನ ತಲೆಮಾರು ಜನಪರ ಕೆಲಸ ಕಾರ್ಯಗಳಲ್ಲಿ ತೊಡಗಿಕೊಳ್ಳುವಂತೆ ಮಾಡುವಲ್ಲಿ ಈ ದಾಖಲೆಗಳು ಸಹಕಾರಿಯಾಗಿವೆ ಎಂದು ಉಡುಪಿ ತಾಲ್ಲೂಕು ಭೂನ್ಯಾಯ ಮಂಡಳಿಯ ಸದಸ್ಯ ರೋಯ್ಸ್ ಮಾರ್ವಿನ್ ಫರ್ನಾಂಡಿಸ್ ಹೇಳಿದರು.</p>.<p>ಉದ್ಯಾವರ ಫ್ರೆಂಡ್ಸ್ ಸರ್ಕಲ್ನ ಆಶ್ರಯದಲ್ಲಿ ಉದ್ಯಾವರದಲ್ಲಿ ನಡೆದ ‘ಯು.ಎಫ್.ಸಿ. ಮಾತುಕತೆ - 2025’ ವಾರ್ಷಿಕ ಸಂಚಿಕೆ ಬಿಡುಗಡೆಗೊಳಿಸಿ ಅವರು ಮಾತನಾಡಿದರು. ಉದ್ಯಾವರ ಫ್ರೆಂಡ್ಸ್ ಸರ್ಕಲ್ ಆರೋಗ್ಯವಂತ ಮನಸ್ಸುಗಳನ್ನು ಕೂಡಿಸಿಕೊಂಡು ಸೌಹಾರ್ದದಿಂದ ಸಾಮಾಜಿಕ ಚಟುವಟಿಕೆ ನಡೆಸುವ ಮೂಲಕ ಮಾದರಿಯಾಗಿದೆ ಎಂದರು.</p>.<p>ಅಧ್ಯಕ್ಷತೆ ವಹಿಸಿದ್ದ ಗೌರವಾಧ್ಯಕ್ಷ ಉದ್ಯಾವರ ನಾಗೇಶ್ ಕುಮಾರ್ ಮಾತನಾಡಿ, ‘ಸಂಸ್ಥೆ ನಡೆಸಿರುವ ಕಾರ್ಯ ದಾಖಲಾಗಲಿ ಎಂಬ ಕಾರಣಕ್ಕೆ ಹತ್ತು ವರ್ಷಗಳಿಂದ ಈ ವಾರ್ಷಿಕ ಸಂಚಿಕೆ ಹೊರತರಲಾಗುತ್ತಿದೆ. ಯಾವುದೇ ಪ್ರಚಾರಕ್ಕಾಗಿ ಅಲ್ಲ ಎಂದರು. ಸಂಸ್ಥೆಯ ಮಾಜಿ ಅಧ್ಯಕ್ಷ ರಿಯಾಝ್ ಪಳ್ಳಿ ಮಾತನಾಡಿದರು.</p>.<p>ನಿರ್ದೇಶಕರಾದ ಚಂದ್ರಾವತಿ ಎಸ್. ಭಂಡಾರಿ, ಶರತ್ ಕುಮಾರ್, ಯು.ಪದ್ಮನಾಭ ಕಾಮತ್, ಕೋಶಾಧಿಕಾರಿ ಸತೀಶ್ ಡಿ. ಸಾಲ್ಯಾನ್, ಉಪಾಧ್ಯಕ್ಷ ಶ್ರೀಧರ ಮಾಬಿಯಾನ್, ಕಾರ್ಯದರ್ಶಿಗಳಾದ ಆಶಾ ವಾಸು, ಭಾಸ್ಕರ್ ಬಂಗೇರ, ಮಾಜಿ ಅಧ್ಯಕ್ಷ ಅನುಪ್ ಕುಮಾರ್, ಸದಸ್ಯರಾದ ಲೋಕನಾಥ್ ಬೊಳ್ಜೆ ಉಪಸ್ಥಿತರಿದ್ದರು.</p>.<p>ಅಧ್ಯಕ್ಷ ಗಿರೀಶ್ ಗುಡ್ಡೆಯಂಗಡಿ ಸ್ವಾಗತಿಸಿದರು. ಪ್ರಧಾನ ಕಾರ್ಯದರ್ಶಿ ಸುಹೇಲ್ ರಹಮತುಲ್ಲ ನಿರೂಪಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260519-28-388307597</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>