<p><strong>ಉಡುಪಿ:</strong> ಮತದಾನ ಮಾಡುವುದು ಪ್ರತಿಯೊಬ್ಬ ನಾಗರಿಕರ ಹಕ್ಕು ಮತ್ತು ಕರ್ತವ್ಯ. 18 ವರ್ಷ ಮೇಲ್ಪಟ್ಟ ಎಲ್ಲ ಅರ್ಹ ಮತದಾರರು ಮತದಾನ ಪ್ರಕ್ರಿಯೆಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವುದರಿಂದ ಪ್ರಜಾಪ್ರಭುತ್ವವನ್ನು ಮತ್ತಷ್ಟು ಗಟ್ಟಿಗೊಳಿಸಲು ಸಾಧ್ಯ ಎಂದು ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ. ಹೇಳಿದರು.</p>.<p>ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸಂಯುಕ್ತ ಆಶ್ರಯದಲ್ಲಿ ಬ್ರಹ್ಮಗಿರಿಯ ಲಯನ್ಸ್ ಭವನದಲ್ಲಿ ಭಾನುವಾರ ನಡೆದ 16ನೇ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.</p>.<p>ಪಾರದರ್ಶಕ ಮತದಾನ ಪ್ರಕ್ರಿಯೆಗಾಗಿ ಚುನಾವಣಾ ಆಯೋಗವು ನಾಗರಿಕ ಸ್ನೇಹಿ ತಂತ್ರಜ್ಞಾನಗಳನ್ನು ಪರಿಚಯಿಸಿದೆ. ಮತದಾನವು ಐಚ್ಛಿಕವಾಗಿದ್ದು, ಹೆಚ್ಚು ಜನರು ಪ್ರಕ್ರಿಯೆಯಲ್ಲಿ ಭಾಗವಹಿಸಲು ಅರಿವು ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ ಎಂದರು.</p>.<p>ಜಿಲ್ಲಾ ಪಂಚಾಯಿತಿ ಸಿಇಒ ಪ್ರತೀಕ್ ಬಾಯಲ್ ಮಾತನಾಡಿ, ಸ್ವಾತಂತ್ರ್ಯ ಸೇನಾನಿಗಳ ಬಲಿದಾನದಿಂದ ದೇಶವು ಗುಲಾಮಗಿರಿಯಿಂದ ಮುಕ್ತವಾಯಿತು. ರಾಜಪ್ರಭುತ್ವದಿಂದ ಪ್ರಜಾಪ್ರಭುತ್ವವನ್ನು ಸಂವಿಧಾನದ ಮೂಲಕ ಪಡೆದುಕೊಂಡು ಮತದಾನದ ಅಧಿಕಾರವನ್ನು ಗಳಿಸಿದ್ದೇವೆ ಎಂದು ಹೇಳಿದರು.</p>.<p>ಜನ ಪ್ರತಿನಿಧಿಗಳು ಜವಾಬ್ದಾರಿಯಿಂದ ಕೆಲಸ ಮಾಡಲು ನಾವು ಜವಾಬ್ದಾರಿಯುತವಾಗಿ ಮತ ಚಲಾಯಿಸಬೇಕು. ನಮ್ಮ ಅಮೂಲ್ಯ ಮತವನ್ನು ಮಾರಾಟ ಮಾಡಬಾರದು ಎಂದರು.</p>.<p>ರಾಜು ಪೂಜಾರಿ ಮತದಾರರ ಪ್ರತಿಜ್ಞಾ ವಿಧಿ ಬೋಧಿಸಿದರು. ಶಿವಪ್ರಸಾದ್ ಶೆಟ್ಟಿ ಅವರು ಎಸ್.ಐ.ಆರ್ ಕುರಿತು ಮಾಹಿತಿ ನೀಡಿದರು.</p>.<p>ಉತ್ತಮವಾಗಿ ಕಾರ್ಯ ನಿರ್ವಹಿಸಿದ ಐವರು ಬಿಎಲ್ಒಗಳನ್ನು ಹಾಗೂ ಜಿಲ್ಲೆಯಲ್ಲಿ ಮತದಾರರ ಪಟ್ಟಿಯ ಮ್ಯಾಪಿಂಗ್ ಕಾರ್ಯವನ್ನು ನಿರ್ವಹಿಸಿದ ಸಿಬ್ಬಂದಿಯನ್ನು ಸನ್ಮಾನಿಸಲಾಯಿತು.</p>.<p>ಜಿಲ್ಲಾ ಕೌಟುಂಬಿಕ ನ್ಯಾಯಾಲಯದ ಪ್ರಧಾನ ನ್ಯಾಯಾಧೀಶೆ ಕೆ.ಎಸ್.ಜ್ಯೋತಿಶ್ರೀ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸುಧಾಕರ್ ನಾಯ್ಕ ಉಪಸ್ಥಿತರಿದ್ದರು. ಹೆಚ್ಚುವರಿ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ ಸ್ವಾಗತಿಸಿದರು. ಗಂಗಾಧರ್ ಕೆ. ನಿರೂಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಉಡುಪಿ:</strong> ಮತದಾನ ಮಾಡುವುದು ಪ್ರತಿಯೊಬ್ಬ ನಾಗರಿಕರ ಹಕ್ಕು ಮತ್ತು ಕರ್ತವ್ಯ. 18 ವರ್ಷ ಮೇಲ್ಪಟ್ಟ ಎಲ್ಲ ಅರ್ಹ ಮತದಾರರು ಮತದಾನ ಪ್ರಕ್ರಿಯೆಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವುದರಿಂದ ಪ್ರಜಾಪ್ರಭುತ್ವವನ್ನು ಮತ್ತಷ್ಟು ಗಟ್ಟಿಗೊಳಿಸಲು ಸಾಧ್ಯ ಎಂದು ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ. ಹೇಳಿದರು.</p>.<p>ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸಂಯುಕ್ತ ಆಶ್ರಯದಲ್ಲಿ ಬ್ರಹ್ಮಗಿರಿಯ ಲಯನ್ಸ್ ಭವನದಲ್ಲಿ ಭಾನುವಾರ ನಡೆದ 16ನೇ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.</p>.<p>ಪಾರದರ್ಶಕ ಮತದಾನ ಪ್ರಕ್ರಿಯೆಗಾಗಿ ಚುನಾವಣಾ ಆಯೋಗವು ನಾಗರಿಕ ಸ್ನೇಹಿ ತಂತ್ರಜ್ಞಾನಗಳನ್ನು ಪರಿಚಯಿಸಿದೆ. ಮತದಾನವು ಐಚ್ಛಿಕವಾಗಿದ್ದು, ಹೆಚ್ಚು ಜನರು ಪ್ರಕ್ರಿಯೆಯಲ್ಲಿ ಭಾಗವಹಿಸಲು ಅರಿವು ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ ಎಂದರು.</p>.<p>ಜಿಲ್ಲಾ ಪಂಚಾಯಿತಿ ಸಿಇಒ ಪ್ರತೀಕ್ ಬಾಯಲ್ ಮಾತನಾಡಿ, ಸ್ವಾತಂತ್ರ್ಯ ಸೇನಾನಿಗಳ ಬಲಿದಾನದಿಂದ ದೇಶವು ಗುಲಾಮಗಿರಿಯಿಂದ ಮುಕ್ತವಾಯಿತು. ರಾಜಪ್ರಭುತ್ವದಿಂದ ಪ್ರಜಾಪ್ರಭುತ್ವವನ್ನು ಸಂವಿಧಾನದ ಮೂಲಕ ಪಡೆದುಕೊಂಡು ಮತದಾನದ ಅಧಿಕಾರವನ್ನು ಗಳಿಸಿದ್ದೇವೆ ಎಂದು ಹೇಳಿದರು.</p>.<p>ಜನ ಪ್ರತಿನಿಧಿಗಳು ಜವಾಬ್ದಾರಿಯಿಂದ ಕೆಲಸ ಮಾಡಲು ನಾವು ಜವಾಬ್ದಾರಿಯುತವಾಗಿ ಮತ ಚಲಾಯಿಸಬೇಕು. ನಮ್ಮ ಅಮೂಲ್ಯ ಮತವನ್ನು ಮಾರಾಟ ಮಾಡಬಾರದು ಎಂದರು.</p>.<p>ರಾಜು ಪೂಜಾರಿ ಮತದಾರರ ಪ್ರತಿಜ್ಞಾ ವಿಧಿ ಬೋಧಿಸಿದರು. ಶಿವಪ್ರಸಾದ್ ಶೆಟ್ಟಿ ಅವರು ಎಸ್.ಐ.ಆರ್ ಕುರಿತು ಮಾಹಿತಿ ನೀಡಿದರು.</p>.<p>ಉತ್ತಮವಾಗಿ ಕಾರ್ಯ ನಿರ್ವಹಿಸಿದ ಐವರು ಬಿಎಲ್ಒಗಳನ್ನು ಹಾಗೂ ಜಿಲ್ಲೆಯಲ್ಲಿ ಮತದಾರರ ಪಟ್ಟಿಯ ಮ್ಯಾಪಿಂಗ್ ಕಾರ್ಯವನ್ನು ನಿರ್ವಹಿಸಿದ ಸಿಬ್ಬಂದಿಯನ್ನು ಸನ್ಮಾನಿಸಲಾಯಿತು.</p>.<p>ಜಿಲ್ಲಾ ಕೌಟುಂಬಿಕ ನ್ಯಾಯಾಲಯದ ಪ್ರಧಾನ ನ್ಯಾಯಾಧೀಶೆ ಕೆ.ಎಸ್.ಜ್ಯೋತಿಶ್ರೀ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸುಧಾಕರ್ ನಾಯ್ಕ ಉಪಸ್ಥಿತರಿದ್ದರು. ಹೆಚ್ಚುವರಿ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ ಸ್ವಾಗತಿಸಿದರು. ಗಂಗಾಧರ್ ಕೆ. ನಿರೂಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>