<p>ಉಡುಪಿ: ಕಾಮಗಾರಿ ವೇಳೆ ಬಾವಿ ಕುಸಿದ ಪರಿಣಾಮವಾಗಿ ಕಾರ್ಮಿಕರೊಬ್ಬರು ಮಣ್ಣಿನಡಿಯಲ್ಲಿ ಸಿಲುಕಿರುವ ಘಟನೆ ಕೊಡವೂರು ಸಮೀಪ ಶುಕ್ರವಾರ ನಡೆದಿದೆ.</p>.<p>ರಮೇಶ (25) ಮಣ್ಣಿನಡಿಯಲ್ಲಿ ನಿಲುಕಿಕೊಂಡವರು. ಕಾರ್ಕಳ ಸಾಣೂರು ನಿವಾಸಿ ಪ್ರಭಾತ್ ಶೆಟ್ಟಿ ಎಂಬುವವರು ಮಲ್ಪೆ ಉದ್ದಿನಹಿತ್ಲು ಎಂಬಲ್ಲಿ ಮಧ್ವನಗರ ನಿವಾಸಿ ಚೇತನ್ ಎಂಬುವವರ ಜಾಗದಲ್ಲಿ ಬಾವಿ ನಿರ್ಮಾಣ ಕೆಲಸಕ್ಕೆಂದು ಕೊಪ್ಪಳ ಜಿಲ್ಲೆಯ ಐವರು ಕೂಲಿ ಕಾರ್ಮಿಕರನ್ನು ಕರೆತಂದು ಬಾವಿಯಿಂದ ಮಣ್ಣು ತೆಗೆಸುತ್ತಿದ್ದರು.</p>.<p>ಕಾಮಗಾರಿ ನಡೆಯುತ್ತಿದ್ದಾಗ ಬಾವಿಯ ದಂಡೆಯ ಮಣ್ಣು ಒಮ್ಮೆಲೆ ಕುಸಿದು ರಮೇಶ ಅವರ ಮೈಮೇಲೆ ಬಿದ್ದು ಅವರು ಮಣ್ಣಿನಡಿಯಲ್ಲಿ ಸಿಲುಕಿಕೊಂಡಿದ್ದಾರೆ. ಮತ್ತೊಬ್ಬ ಕಾರ್ಮಿಕನನ್ನು ರಕ್ಷಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.</p>.<p>ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳೀಯರ ಸಹಕಾರದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ.</p>.<p>ಸುಮಾರು 7ರಿಂದ 8 ಅಡಿ ಆಳದ ಹೊಂಡದಲ್ಲಿ ಮಣ್ಣು ತುಂಬಿಕೊಂಡಿರುವುದರಿಂದ ರಕ್ಷಣಾ ಕಾರ್ಯಾಚರಣೆ ಕಷ್ಟಕರವಾಗಿದ್ದು, ಕಾರ್ಯಾಚರಣೆ ಮುಂದುವರಿದಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260523-28-1658982797</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಉಡುಪಿ: ಕಾಮಗಾರಿ ವೇಳೆ ಬಾವಿ ಕುಸಿದ ಪರಿಣಾಮವಾಗಿ ಕಾರ್ಮಿಕರೊಬ್ಬರು ಮಣ್ಣಿನಡಿಯಲ್ಲಿ ಸಿಲುಕಿರುವ ಘಟನೆ ಕೊಡವೂರು ಸಮೀಪ ಶುಕ್ರವಾರ ನಡೆದಿದೆ.</p>.<p>ರಮೇಶ (25) ಮಣ್ಣಿನಡಿಯಲ್ಲಿ ನಿಲುಕಿಕೊಂಡವರು. ಕಾರ್ಕಳ ಸಾಣೂರು ನಿವಾಸಿ ಪ್ರಭಾತ್ ಶೆಟ್ಟಿ ಎಂಬುವವರು ಮಲ್ಪೆ ಉದ್ದಿನಹಿತ್ಲು ಎಂಬಲ್ಲಿ ಮಧ್ವನಗರ ನಿವಾಸಿ ಚೇತನ್ ಎಂಬುವವರ ಜಾಗದಲ್ಲಿ ಬಾವಿ ನಿರ್ಮಾಣ ಕೆಲಸಕ್ಕೆಂದು ಕೊಪ್ಪಳ ಜಿಲ್ಲೆಯ ಐವರು ಕೂಲಿ ಕಾರ್ಮಿಕರನ್ನು ಕರೆತಂದು ಬಾವಿಯಿಂದ ಮಣ್ಣು ತೆಗೆಸುತ್ತಿದ್ದರು.</p>.<p>ಕಾಮಗಾರಿ ನಡೆಯುತ್ತಿದ್ದಾಗ ಬಾವಿಯ ದಂಡೆಯ ಮಣ್ಣು ಒಮ್ಮೆಲೆ ಕುಸಿದು ರಮೇಶ ಅವರ ಮೈಮೇಲೆ ಬಿದ್ದು ಅವರು ಮಣ್ಣಿನಡಿಯಲ್ಲಿ ಸಿಲುಕಿಕೊಂಡಿದ್ದಾರೆ. ಮತ್ತೊಬ್ಬ ಕಾರ್ಮಿಕನನ್ನು ರಕ್ಷಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.</p>.<p>ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳೀಯರ ಸಹಕಾರದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ.</p>.<p>ಸುಮಾರು 7ರಿಂದ 8 ಅಡಿ ಆಳದ ಹೊಂಡದಲ್ಲಿ ಮಣ್ಣು ತುಂಬಿಕೊಂಡಿರುವುದರಿಂದ ರಕ್ಷಣಾ ಕಾರ್ಯಾಚರಣೆ ಕಷ್ಟಕರವಾಗಿದ್ದು, ಕಾರ್ಯಾಚರಣೆ ಮುಂದುವರಿದಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260523-28-1658982797</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>