<p><strong>ಉಡುಪಿ:</strong> ಯಕ್ಷಶಿಕ್ಷಣ ಟ್ರಸ್ಟ್ ಉಡುಪಿ ವತಿಯಿಂದ ಯಕ್ಷಗಾನ ಕಲಾರಂಗದ ಐವೈಸಿಯಲ್ಲಿ ಆಯೋಜಿಸಿದ್ದ ನಾಲ್ಕು ದಿನಗಳ ಮುಖವರ್ಣಿಕೆ ಶಿಬಿರವು ಶುಕ್ರವಾರ ಸಮಾರೋಪಗೊಂಡಿತು.</p>.<p>ಗುರು ಸಂಜೀವ ಸುವರ್ಣರ ನಿರ್ದೇಶನದಲ್ಲಿ ಪ್ರಸಾಧನ ತಜ್ಞ ಮಿಥುನ್ ನಾಯಕ್ ಮಕ್ಕಳಿಗೆ ಮಾರ್ಗದರ್ಶನ ನೀಡಿದರು. ಸಂಸ್ಥೆಯ ಉಪಾಧ್ಯಕ್ಷ ವಿ.ಜಿ. ಶೆಟ್ಟಿ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಯು. ವಿಶ್ವನಾಥ ಶೆಣೈ, ತಾರಾದೇವಿ ಭಾಗವಹಿಸಿದ್ದರು.</p>.<p>ಸಂಸ್ಥೆಯ ಸದಸ್ಯರಾದ ನಿರಂಜನ ಭಟ್, ಯು. ಅನಂತರಾಜ ಉಪಾಧ್ಯ, ಎಚ್. ಎನ್. ವೆಂಕಟೇಶ್, ಎನ್. ರಾಮ ಭಟ್, ಪ್ರತಿಮಾ ಜೆ. ಆಚಾರ್ಯ, ರವಿರಾಜ್ ಎಚ್.ಪಿ., ಪ್ರಶಾಂತ್ ಕಾಮತ್ ಉಪಸ್ಥಿತರಿದ್ದರು.</p>.<p>ಸಂಸ್ಥೆಯ ಜತೆಕಾರ್ಯದರ್ಶಿ ನಾರಾಯಣ ಎಂ. ಹೆಗಡೆ ಸ್ವಾಗತಿಸಿದರು. ಕಾರ್ಯದರ್ಶಿ ಮುರಲಿ ಕಡೆಕಾರ್ ಕಾರ್ಯಕ್ರಮ ನಿರೂಪಿಸಿದರು.</p>.<p>ನಾಲ್ಕು ದಿನಗಳಲ್ಲಿ ಮಕ್ಕಳು ಸ್ವತಂತ್ರವಾಗಿ ವಿವಿಧ ವೇಷಗಳ ಮುಖವರ್ಣಿಕೆ, ಕಸೆ, ಗೆಜ್ಜೆ ಮತ್ತು ವೇಷಭೂಷಣ ಕಟ್ಟಿಕೊಳ್ಳುವುದನ್ನು ಕಲಿತುಕೊಂಡರು. ಎಲ್ಲಾ ಶಿಬಿರಾರ್ಥಿಗಳಿಗೆ ಪ್ರಮಾಣಪತ್ರ ಹಾಗೂ ಅಭ್ಯಾಸ ಮಾಡಲು ಪೂರಕವಾಗುವಂತೆ ಬಣ್ಣದ ಕಿಟ್ ವಿತರಿಸಲಾಯಿತು.</p>.<p>28 ಜನ ವಿದ್ಯಾರ್ಥಿಗಳು ಶಿಬಿರದಲ್ಲಿ ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ಕಪ್ಪೆಕೆರೆ ಸುಬ್ರಾಯ ಭಾಗವತರಿಗೆ ಶ್ರದ್ಧಾಂಜಲಿ ಸಮರ್ಪಿಸಲಾಯಿತು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260516-28-501597592</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಉಡುಪಿ:</strong> ಯಕ್ಷಶಿಕ್ಷಣ ಟ್ರಸ್ಟ್ ಉಡುಪಿ ವತಿಯಿಂದ ಯಕ್ಷಗಾನ ಕಲಾರಂಗದ ಐವೈಸಿಯಲ್ಲಿ ಆಯೋಜಿಸಿದ್ದ ನಾಲ್ಕು ದಿನಗಳ ಮುಖವರ್ಣಿಕೆ ಶಿಬಿರವು ಶುಕ್ರವಾರ ಸಮಾರೋಪಗೊಂಡಿತು.</p>.<p>ಗುರು ಸಂಜೀವ ಸುವರ್ಣರ ನಿರ್ದೇಶನದಲ್ಲಿ ಪ್ರಸಾಧನ ತಜ್ಞ ಮಿಥುನ್ ನಾಯಕ್ ಮಕ್ಕಳಿಗೆ ಮಾರ್ಗದರ್ಶನ ನೀಡಿದರು. ಸಂಸ್ಥೆಯ ಉಪಾಧ್ಯಕ್ಷ ವಿ.ಜಿ. ಶೆಟ್ಟಿ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಯು. ವಿಶ್ವನಾಥ ಶೆಣೈ, ತಾರಾದೇವಿ ಭಾಗವಹಿಸಿದ್ದರು.</p>.<p>ಸಂಸ್ಥೆಯ ಸದಸ್ಯರಾದ ನಿರಂಜನ ಭಟ್, ಯು. ಅನಂತರಾಜ ಉಪಾಧ್ಯ, ಎಚ್. ಎನ್. ವೆಂಕಟೇಶ್, ಎನ್. ರಾಮ ಭಟ್, ಪ್ರತಿಮಾ ಜೆ. ಆಚಾರ್ಯ, ರವಿರಾಜ್ ಎಚ್.ಪಿ., ಪ್ರಶಾಂತ್ ಕಾಮತ್ ಉಪಸ್ಥಿತರಿದ್ದರು.</p>.<p>ಸಂಸ್ಥೆಯ ಜತೆಕಾರ್ಯದರ್ಶಿ ನಾರಾಯಣ ಎಂ. ಹೆಗಡೆ ಸ್ವಾಗತಿಸಿದರು. ಕಾರ್ಯದರ್ಶಿ ಮುರಲಿ ಕಡೆಕಾರ್ ಕಾರ್ಯಕ್ರಮ ನಿರೂಪಿಸಿದರು.</p>.<p>ನಾಲ್ಕು ದಿನಗಳಲ್ಲಿ ಮಕ್ಕಳು ಸ್ವತಂತ್ರವಾಗಿ ವಿವಿಧ ವೇಷಗಳ ಮುಖವರ್ಣಿಕೆ, ಕಸೆ, ಗೆಜ್ಜೆ ಮತ್ತು ವೇಷಭೂಷಣ ಕಟ್ಟಿಕೊಳ್ಳುವುದನ್ನು ಕಲಿತುಕೊಂಡರು. ಎಲ್ಲಾ ಶಿಬಿರಾರ್ಥಿಗಳಿಗೆ ಪ್ರಮಾಣಪತ್ರ ಹಾಗೂ ಅಭ್ಯಾಸ ಮಾಡಲು ಪೂರಕವಾಗುವಂತೆ ಬಣ್ಣದ ಕಿಟ್ ವಿತರಿಸಲಾಯಿತು.</p>.<p>28 ಜನ ವಿದ್ಯಾರ್ಥಿಗಳು ಶಿಬಿರದಲ್ಲಿ ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ಕಪ್ಪೆಕೆರೆ ಸುಬ್ರಾಯ ಭಾಗವತರಿಗೆ ಶ್ರದ್ಧಾಂಜಲಿ ಸಮರ್ಪಿಸಲಾಯಿತು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260516-28-501597592</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>