ಉಡುಪಿ: ಜಿಲ್ಲಾ ಪಂಚಾಯಿತಿ ಸಿಇಒ ಡಾ.ವೈ.ನವೀನ್ ಭಟ್ ಅವರನ್ನು ಸರ್ಕಾರ ವರ್ಗಾವಣೆ ಮಾಡಿದೆ. ನೂತನ ಜಿಲ್ಲಾ ಪಂಚಾಯಿತಿ ಸಿಇಒ ಆಗಿ ದೆಹಲಿಯ ಕರ್ನಾಟಕ ಭವನದಲ್ಲಿ ಉಪ ರೆಸಿಡೆಂಟ್ ಕಮಿಷನರ್ ಆಗಿದ್ದ ಎಚ್.ಪ್ರಸನ್ನ ಅವರನ್ನು ನೇಮಿಸಲಾಗಿದೆ.
2020 ಅ.5ರಂದು ಜಿಲ್ಲಾ ಪಂಚಾಯಿತಿ ಸಿಇಒ ಆಗಿ ಅಧಿಕಾರ ಸ್ವೀಕರಿಸಿದ್ದ ನವೀನ್ ಭಟ್, ಜಿಲ್ಲೆಯಲ್ಲಿ ನರೇಗಾ ಅನುಷ್ಠಾನ, ಸ್ವಚ್ಛಭಾರತ್ ಮಿಷನ್ ಕಾರ್ಯಕ್ರಮಗಳ ಜಾರಿ, ಎಸ್ಎಲ್ಆರ್ಎಂ ಘಟಕಗಳ ಸ್ಥಾಪನೆ ಹಾಗೂ ಘಟಕಗಳ ನಿರ್ವಹಣೆಯಲ್ಲಿ ಉತ್ಮವಾಗಿ ಕಾರ್ಯ ನಿರ್ವಹಿಸಿದ್ದರು.
ಸ್ವಸಹಾಯ ಸಂಘಗಳ ಮಹಿಳಾ ಸದಸ್ಯರ ಸ್ವಾವಲಂಬನೆಗೆ ವಿಶೇಷ ಮುತುವರ್ಜಿ ವಹಿಸಿದ್ದರು. ಗ್ರಾಮ ಪಂಚಾಯಿತಿಗಳ ಸಬಲೀಕರಣ ಹಾಗೂ ಕೇಂದ್ರ ಸರ್ಕಾರದ ಕಾರ್ಯಕ್ರಮಗಳ ಅನುಷ್ಠಾನದಲ್ಲಿ ಜಿಲ್ಲಾ ಪಂಚಾಯಿತಿ ಸಾಧನೆಯ ಹಿಂದೆ ಡಾ.ವೈ.ನವೀನ್ ಭಟ್ ಶ್ರಮವಿತ್ತು.
ಎಂಬಿಬಿಎಸ್ ಪದವೀಧರರಾಗಿರುವ ನವೀನ್ ಭಟ್, ಯುಪಿಎಸ್ಸಿ ಪರೀಕ್ಷೆಯಲ್ಲಿ 37ನೇ ರ್ಯಾಂಕ್ ಪಡೆದು 2017ರ ಬ್ಯಾಚ್ನ ಐಎಎಸ್ ಅಧಿಕಾರಿಯಾಗಿ ಆಯ್ಕೆಯಾಗಿದ್ದರು.
ರಾಯಚೂರು ಜಿಲ್ಲೆಯಲ್ಲಿ ಪ್ರೊಬೆಷನರಿ ಅಧಿಕಾರಿಯಾಗಿ, ಆರೋಗ್ಯ ಮಂತ್ರಾಲಯದಲ್ಲಿ ಅಧಿಕಾರಿಯಾಗಿ, ಹಾಸನದಲ್ಲಿ ಉಪ ವಿಭಾಗಾಧಿಕಾರಿಯಾಗಿಯೂ ಕಾರ್ಯ ನಿರ್ವಹಿಸಿದ್ದರು. ಪ್ರಸ್ತುತ ಅವರನ್ನು ಕೆಎಸ್ಆರ್ಟಿಸಿ ನಿರ್ದೇಶಕರನ್ನಾಗಿ ನಿಯುಕ್ತಿಗೊಳಿಸಲಾಗಿದೆ.