<p><strong>ಉಡುಪಿ: </strong>ಹರಿದ್ವಾರದ ಮಧ್ವಾಶ್ರಮದಲ್ಲಿ ಶನಿವಾರ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಶ್ರೀಗಳಿಗೆ ಕೇಂದ್ರದ ಮಾಜಿ ಸಚಿವೆ ಉಮಾಭಾರತಿ ಗುರುಪೂಜೆ ಸಲ್ಲಿಸಿದರು.</p>.<p>ಪೇಜಾವರ ಖಾಶಾ ಮಠದ ಮಧ್ವಾಶ್ರಮದಲ್ಲಿರುವ ವಿಶ್ವೇಶತೀರ್ಥ ಶ್ರೀಗಳ ಭಾವಚಿತ್ರಕ್ಕೆ ವಿಶೇಷ ಪೂಜೆ ಸಲ್ಲಿಸಿ ಭಕ್ತಿ ಸಮರ್ಪಿಸಿದ ಉಮಾಭಾರತಿ, ವಿಶ್ವಪ್ರಸನ್ನ ತೀರ್ಥ ಶ್ರೀಗಳಿಗೆ ಪಾದಪೂಜೆ ಮಾಡಿ, ಫಲಪುಷ್ಪ ಸಹಿತ ಗುರುಪೂಜೆ ಸಲ್ಲಿಸಿ ಆಶೀರ್ವಾದ ಪಡೆದರು.</p>.<p>ಚಿತ್ರಕೂಟ ಆಶ್ರಮದ ರಾಮಕಿಶನ್ ಜೀ ಮಹಾರಾಜ್ ಅವರಿಗೂ ಗುರುನಮನ ಸಲ್ಲಿಸಿದರು. ಉಮಾಭಾರತಿ ಅವರ ಸಂಕಲ್ಪದಂತೆ ಆಶ್ರಮದಲ್ಲಿ ವಿದ್ವಾನ್ ಶಶಾಂಕ ಭಟ್ಟರ ನೇತೃತ್ವದಲ್ಲಿ ವಿಷ್ಣು ಸಹಸ್ರನಾಮ ಯಾಗ ನಡೆಯಿತು.</p>.<p>ಇದೇವೇಳೆ ಗುರುಪೂರ್ಣಿಮೆ ಅಂಗವಾಗಿ ವಿಶ್ವಪ್ರಸನ್ನ ತೀರ್ಥ ಶ್ರೀಗಳು ಆಶ್ರಮದಲ್ಲಿರುವ ಮಧ್ವಾಚಾರ್ಯರ ಶಿಲಾಪ್ರತಿಮೆಗೆ ವಿಶೇಷ ಅಭಿಷೇಕ ಮಾಡಿ ಪೂಜೆ ಸಲ್ಲಿಸಿದರು.</p>.<p>1992, ನ.17ರಂದು ನರ್ಮದಾ ನದಿಯ ಉಗಮಸ್ಥಳವಾದ ಮಧ್ಯಪ್ರದೇಶದ ಅಮರ ಕಂಟಕ್ನಲ್ಲಿ ಉಮಾಭಾರತಿ ವಿಶ್ವೇಶತೀರ್ಥ ಶ್ರೀಗಳಿಂದ ಮಂತ್ರದೀಕ್ಷೆ ಪಡೆದು ಸನ್ಯಾಸತ್ವ ಸ್ವೀಕರಿಸಿದ್ದರು. ವಿಶ್ವೇಶ ತೀರ್ಥ ಶ್ರೀಗಳು ಬದುಕಿದ್ದಷ್ಟು ಕಾಲ ಪ್ರತಿ ಆಷಾಢ ಪೂರ್ಣಿಮೆಯಂದು ವಿಶೇಷ ಕಾರ್ಯಕ್ರಮ ಆಯೋಜಿಸಿ ಗುರುಭಕ್ತಿ ಸಲ್ಲಿಸುತ್ತಿದ್ದರು.</p>.<p>ಹಿಂದುಳಿದ ಸಮುದಾಯದ ನಾಯಕಿಯಾಗಿ ಗುರುತಿಸಲ್ಪಟ್ಟಿದ್ದ ಹಾಗೂ ಹಿಂದೂ ವಿಚಾರಧಾರೆಗಳನ್ನು ಮೈಗೂಡಿಸಿಕೊಂಡಿದ್ದ ಉಮಾ ಭಾರತಿ, ಅಯೋಧ್ಯಾ ರಾಮಜನ್ಮಭೂಮಿ ಆಂದೋಲನದಲ್ಲಿ ಮಹತ್ವದ ಪಾತ್ರ ವಹಿಸಿದ್ದರು. ದೇಶದಾದ್ಯಂತ ಸಂಚರಿಸಿ ಹಿಂದೂ ಜನ ಜಾಗೃತಿಯ ಕೆಲಸ ಮಾಡಿದ್ದರು ಎಂದು ಪೇಜಾವರ ಶ್ರೀಗಳ ಆಪ್ತರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಉಡುಪಿ: </strong>ಹರಿದ್ವಾರದ ಮಧ್ವಾಶ್ರಮದಲ್ಲಿ ಶನಿವಾರ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಶ್ರೀಗಳಿಗೆ ಕೇಂದ್ರದ ಮಾಜಿ ಸಚಿವೆ ಉಮಾಭಾರತಿ ಗುರುಪೂಜೆ ಸಲ್ಲಿಸಿದರು.</p>.<p>ಪೇಜಾವರ ಖಾಶಾ ಮಠದ ಮಧ್ವಾಶ್ರಮದಲ್ಲಿರುವ ವಿಶ್ವೇಶತೀರ್ಥ ಶ್ರೀಗಳ ಭಾವಚಿತ್ರಕ್ಕೆ ವಿಶೇಷ ಪೂಜೆ ಸಲ್ಲಿಸಿ ಭಕ್ತಿ ಸಮರ್ಪಿಸಿದ ಉಮಾಭಾರತಿ, ವಿಶ್ವಪ್ರಸನ್ನ ತೀರ್ಥ ಶ್ರೀಗಳಿಗೆ ಪಾದಪೂಜೆ ಮಾಡಿ, ಫಲಪುಷ್ಪ ಸಹಿತ ಗುರುಪೂಜೆ ಸಲ್ಲಿಸಿ ಆಶೀರ್ವಾದ ಪಡೆದರು.</p>.<p>ಚಿತ್ರಕೂಟ ಆಶ್ರಮದ ರಾಮಕಿಶನ್ ಜೀ ಮಹಾರಾಜ್ ಅವರಿಗೂ ಗುರುನಮನ ಸಲ್ಲಿಸಿದರು. ಉಮಾಭಾರತಿ ಅವರ ಸಂಕಲ್ಪದಂತೆ ಆಶ್ರಮದಲ್ಲಿ ವಿದ್ವಾನ್ ಶಶಾಂಕ ಭಟ್ಟರ ನೇತೃತ್ವದಲ್ಲಿ ವಿಷ್ಣು ಸಹಸ್ರನಾಮ ಯಾಗ ನಡೆಯಿತು.</p>.<p>ಇದೇವೇಳೆ ಗುರುಪೂರ್ಣಿಮೆ ಅಂಗವಾಗಿ ವಿಶ್ವಪ್ರಸನ್ನ ತೀರ್ಥ ಶ್ರೀಗಳು ಆಶ್ರಮದಲ್ಲಿರುವ ಮಧ್ವಾಚಾರ್ಯರ ಶಿಲಾಪ್ರತಿಮೆಗೆ ವಿಶೇಷ ಅಭಿಷೇಕ ಮಾಡಿ ಪೂಜೆ ಸಲ್ಲಿಸಿದರು.</p>.<p>1992, ನ.17ರಂದು ನರ್ಮದಾ ನದಿಯ ಉಗಮಸ್ಥಳವಾದ ಮಧ್ಯಪ್ರದೇಶದ ಅಮರ ಕಂಟಕ್ನಲ್ಲಿ ಉಮಾಭಾರತಿ ವಿಶ್ವೇಶತೀರ್ಥ ಶ್ರೀಗಳಿಂದ ಮಂತ್ರದೀಕ್ಷೆ ಪಡೆದು ಸನ್ಯಾಸತ್ವ ಸ್ವೀಕರಿಸಿದ್ದರು. ವಿಶ್ವೇಶ ತೀರ್ಥ ಶ್ರೀಗಳು ಬದುಕಿದ್ದಷ್ಟು ಕಾಲ ಪ್ರತಿ ಆಷಾಢ ಪೂರ್ಣಿಮೆಯಂದು ವಿಶೇಷ ಕಾರ್ಯಕ್ರಮ ಆಯೋಜಿಸಿ ಗುರುಭಕ್ತಿ ಸಲ್ಲಿಸುತ್ತಿದ್ದರು.</p>.<p>ಹಿಂದುಳಿದ ಸಮುದಾಯದ ನಾಯಕಿಯಾಗಿ ಗುರುತಿಸಲ್ಪಟ್ಟಿದ್ದ ಹಾಗೂ ಹಿಂದೂ ವಿಚಾರಧಾರೆಗಳನ್ನು ಮೈಗೂಡಿಸಿಕೊಂಡಿದ್ದ ಉಮಾ ಭಾರತಿ, ಅಯೋಧ್ಯಾ ರಾಮಜನ್ಮಭೂಮಿ ಆಂದೋಲನದಲ್ಲಿ ಮಹತ್ವದ ಪಾತ್ರ ವಹಿಸಿದ್ದರು. ದೇಶದಾದ್ಯಂತ ಸಂಚರಿಸಿ ಹಿಂದೂ ಜನ ಜಾಗೃತಿಯ ಕೆಲಸ ಮಾಡಿದ್ದರು ಎಂದು ಪೇಜಾವರ ಶ್ರೀಗಳ ಆಪ್ತರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>