<p><strong>ಉಡುಪಿ:</strong> ಏಕ ವಿನ್ಯಾಸ ನಕ್ಷೆ ನೀಡುವಲ್ಲಿ ಉಂಟಾಗಿರುವ ಅವ್ಯವಸ್ಥೆಯನ್ನು ಖಂಡಿಸಿ ಜಿಲ್ಲಾ ಬಿಜೆಪಿ ಹಾಗೂ ಜಿಲ್ಲಾ ಒಬಿಸಿ ಮೋರ್ಚಾ ವತಿಯಿಂದ ಮಣಿಪಾಲದ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಸೋಮವಾರ ಪ್ರತಿಭಟನೆ ನಡೆಯಿತು.</p>.<p>ಶಾಸಕ ಯಶ್ಪಾಲ್ ಸುವರ್ಣ ಮಾತನಾಡಿ, ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯನ್ನು ಸರ್ಕಾರ ಗುರಿಯಾಗಿಸುತ್ತಿದೆ. ಬಡವರು ಮನೆ ಕಟ್ಟಲು ಹೋದರೆ 9/11, ಏಕವಿನ್ಯಾಸ ನಕ್ಷೆ ಹೆಸರಿನಲ್ಲಿ ಸಮಸ್ಯೆ ಅನುಭವಿಸುವಂತಾಗಿದೆ. ಇದರಿಂದ ಕಾರ್ಮಿಕರಿಗೂ ದುಡಿಮೆ ಇಲ್ಲದಂತಾಗಿದೆ ಎಂದರು.</p>.<p>ಇಲ್ಲಿನ ಜನರು ಎಷ್ಟೇ ಪ್ರತಿಭಟನೆ ಮಾಡಿದರೂ ಸಚಿವರು ಮೂಕ ಪ್ರೇಕ್ಷಕರಂತೆ ವರ್ತಿಸುತ್ತಿದ್ದಾರೆ. ಅವರ ಕಣ್ಣು ತೆರೆಸುವ ಕೆಲಸವನ್ನು ಬಿಜೆಪಿ ಮಾಡಲಿದೆ ಎಂದು ಹೇಳಿದರು.</p>.<p>9/11, ಏಕ ವಿನ್ಯಾಸ ನಕ್ಷೆ ಸಮಸ್ಯೆ ಪರಿಹರಿಸದಿದ್ದರೆ ಮುಂದಿನ ದಿನಗಳಲ್ಲಿ ಈ ಭಾಗದ ಐವರು ಶಾಸಕರು ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಲಿದ್ದೇವೆ. ಈ ಸಮಸ್ಯೆಯನ್ನು ತಕ್ಷಣ ಪರಿಹರಿಸಬೇಕು. 9/11 ನೀಡುವ ಅಧಿಕಾರವನ್ನು ಮತ್ತೆ ಪಂಚಾಯಿತಿಗಳಿಗೆ ನೀಡಬೇಕು ಎಂದು ಆಗ್ರಹಿಸಿದರು.</p>.<p>ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ಮಾತನಾಡಿ, ಬಡವರು ಮನೆ ಕಟ್ಟದಂತಹ ಪರಿಸ್ಥಿತಿ ನಿರ್ಮಾಣವಾಗಿರುವುದು ಸರ್ಕಾರದ ಬೇಜವಾಬ್ದಾರಿತನವನ್ನು ತೋರಿಸುತ್ತದೆ ಎಂದರು.</p>.<p>ಕಾಂಗ್ರೆಸ್ನವರು ಪಂಚ ಗ್ಯಾರಂಟಿಗಳನ್ನು ಬಿಟ್ಟು ಬೇರೆ ಯಾವುದರ ಬಗ್ಗೆಯೂ ಮಾತನಾಡುವುದಿಲ್ಲ. ಗ್ಯಾರಂಟಿ ಬಿಟ್ಟು ಬೇರೆ ಯಾವುದನ್ನೂ ಕೊಡುವ ಸ್ಥಿತಿಯಲ್ಲಿ ಸರ್ಕಾರ ಇಲ್ಲ ಎಂದೂ ಹೇಳಿದರು.</p>.<p>ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಬೊಟ್ಯಾಡಿ ಮಾತನಾಡಿ, ಏಕ ವಿನ್ಯಾಸ ನಕ್ಷೆ ವಿಚಾರದಲ್ಲಿ ಗ್ರಾಮೀಣ ಸ್ಥಳೀಯಾಡಳಿತದ ಹಕ್ಕನ್ನು ಸರ್ಕಾರವು ನಗರಾಡಳಿತಕ್ಕೆ ನೀಡಿದೆ. ಇದರಿಂದಾಗಿ ಜನಸಮಾನ್ಯರು ಐದಾರು ತಿಂಗಳು ಕಚೇರಿಗಳಿಗೆ ಅಲೆದಾಟ ನಡೆಸಬೇಕಾದ ಅನಿವಾರ್ಯತೆ ಎದುರಾಗಿದೆ ಎಂದು ಹೇಳಿದರು.</p>.<p>ಬಿಜೆಪಿ ಜಿಲ್ಲಾ ಘಟಕ ಅಧ್ಯಕ್ಷ ನವೀನ್ ಶೆಟ್ಟಿ ಕುತ್ಯಾರು, ನಗರಸಭೆ ಅಧ್ಯಕ್ಷ ಪ್ರಭಾಕರ ಪೂಜಾರಿ, ಪ್ರಮುಖರಾದ ಮಟ್ಟಾರು ರತ್ನಾಕರ ಹೆಗ್ಡೆ, ಉದಯ್ ಕುಮಾರ್ ಶೆಟ್ಟಿ, ದಿನಕರ ಶೆಟ್ಟಿ ಹೆರ್ಗ, ರೇಷ್ಮಾ ಉದಯ ಶೆಟ್ಟಿ, ವಿಜಯ್ ಕೊಡವೂರು ಉಪಸ್ಥಿತರಿದ್ದರು.</p>.<div><blockquote>ಕರಾವಳಿಯ ಮೂರು ಜಿಲ್ಲೆಗಳ ಹೆಚ್ಚಿನ ಜನರಲ್ಲಿ ತುಂಡು ಭೂಮಿಯಿದ್ದು 9/11 ಏಕ ವಿನ್ಯಾಸ ನಕ್ಷೆ ಸಿಗುವುದು ವಿಳಂಬವಾಗುತ್ತಿರುವುದರಿಂದ ಜನರಿಗೆ ಮನೆ ಕಟ್ಟಲು ಸಮಸ್ಯೆಯಾಗುತ್ತಿದೆ</blockquote><span class="attribution">– ಕಿರಣ್ ಕುಮಾರ್ ಕೊಡ್ಗಿ, ಕುಂದಾಪುರ ಶಾಸಕ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಉಡುಪಿ:</strong> ಏಕ ವಿನ್ಯಾಸ ನಕ್ಷೆ ನೀಡುವಲ್ಲಿ ಉಂಟಾಗಿರುವ ಅವ್ಯವಸ್ಥೆಯನ್ನು ಖಂಡಿಸಿ ಜಿಲ್ಲಾ ಬಿಜೆಪಿ ಹಾಗೂ ಜಿಲ್ಲಾ ಒಬಿಸಿ ಮೋರ್ಚಾ ವತಿಯಿಂದ ಮಣಿಪಾಲದ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಸೋಮವಾರ ಪ್ರತಿಭಟನೆ ನಡೆಯಿತು.</p>.<p>ಶಾಸಕ ಯಶ್ಪಾಲ್ ಸುವರ್ಣ ಮಾತನಾಡಿ, ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯನ್ನು ಸರ್ಕಾರ ಗುರಿಯಾಗಿಸುತ್ತಿದೆ. ಬಡವರು ಮನೆ ಕಟ್ಟಲು ಹೋದರೆ 9/11, ಏಕವಿನ್ಯಾಸ ನಕ್ಷೆ ಹೆಸರಿನಲ್ಲಿ ಸಮಸ್ಯೆ ಅನುಭವಿಸುವಂತಾಗಿದೆ. ಇದರಿಂದ ಕಾರ್ಮಿಕರಿಗೂ ದುಡಿಮೆ ಇಲ್ಲದಂತಾಗಿದೆ ಎಂದರು.</p>.<p>ಇಲ್ಲಿನ ಜನರು ಎಷ್ಟೇ ಪ್ರತಿಭಟನೆ ಮಾಡಿದರೂ ಸಚಿವರು ಮೂಕ ಪ್ರೇಕ್ಷಕರಂತೆ ವರ್ತಿಸುತ್ತಿದ್ದಾರೆ. ಅವರ ಕಣ್ಣು ತೆರೆಸುವ ಕೆಲಸವನ್ನು ಬಿಜೆಪಿ ಮಾಡಲಿದೆ ಎಂದು ಹೇಳಿದರು.</p>.<p>9/11, ಏಕ ವಿನ್ಯಾಸ ನಕ್ಷೆ ಸಮಸ್ಯೆ ಪರಿಹರಿಸದಿದ್ದರೆ ಮುಂದಿನ ದಿನಗಳಲ್ಲಿ ಈ ಭಾಗದ ಐವರು ಶಾಸಕರು ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಲಿದ್ದೇವೆ. ಈ ಸಮಸ್ಯೆಯನ್ನು ತಕ್ಷಣ ಪರಿಹರಿಸಬೇಕು. 9/11 ನೀಡುವ ಅಧಿಕಾರವನ್ನು ಮತ್ತೆ ಪಂಚಾಯಿತಿಗಳಿಗೆ ನೀಡಬೇಕು ಎಂದು ಆಗ್ರಹಿಸಿದರು.</p>.<p>ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ಮಾತನಾಡಿ, ಬಡವರು ಮನೆ ಕಟ್ಟದಂತಹ ಪರಿಸ್ಥಿತಿ ನಿರ್ಮಾಣವಾಗಿರುವುದು ಸರ್ಕಾರದ ಬೇಜವಾಬ್ದಾರಿತನವನ್ನು ತೋರಿಸುತ್ತದೆ ಎಂದರು.</p>.<p>ಕಾಂಗ್ರೆಸ್ನವರು ಪಂಚ ಗ್ಯಾರಂಟಿಗಳನ್ನು ಬಿಟ್ಟು ಬೇರೆ ಯಾವುದರ ಬಗ್ಗೆಯೂ ಮಾತನಾಡುವುದಿಲ್ಲ. ಗ್ಯಾರಂಟಿ ಬಿಟ್ಟು ಬೇರೆ ಯಾವುದನ್ನೂ ಕೊಡುವ ಸ್ಥಿತಿಯಲ್ಲಿ ಸರ್ಕಾರ ಇಲ್ಲ ಎಂದೂ ಹೇಳಿದರು.</p>.<p>ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಬೊಟ್ಯಾಡಿ ಮಾತನಾಡಿ, ಏಕ ವಿನ್ಯಾಸ ನಕ್ಷೆ ವಿಚಾರದಲ್ಲಿ ಗ್ರಾಮೀಣ ಸ್ಥಳೀಯಾಡಳಿತದ ಹಕ್ಕನ್ನು ಸರ್ಕಾರವು ನಗರಾಡಳಿತಕ್ಕೆ ನೀಡಿದೆ. ಇದರಿಂದಾಗಿ ಜನಸಮಾನ್ಯರು ಐದಾರು ತಿಂಗಳು ಕಚೇರಿಗಳಿಗೆ ಅಲೆದಾಟ ನಡೆಸಬೇಕಾದ ಅನಿವಾರ್ಯತೆ ಎದುರಾಗಿದೆ ಎಂದು ಹೇಳಿದರು.</p>.<p>ಬಿಜೆಪಿ ಜಿಲ್ಲಾ ಘಟಕ ಅಧ್ಯಕ್ಷ ನವೀನ್ ಶೆಟ್ಟಿ ಕುತ್ಯಾರು, ನಗರಸಭೆ ಅಧ್ಯಕ್ಷ ಪ್ರಭಾಕರ ಪೂಜಾರಿ, ಪ್ರಮುಖರಾದ ಮಟ್ಟಾರು ರತ್ನಾಕರ ಹೆಗ್ಡೆ, ಉದಯ್ ಕುಮಾರ್ ಶೆಟ್ಟಿ, ದಿನಕರ ಶೆಟ್ಟಿ ಹೆರ್ಗ, ರೇಷ್ಮಾ ಉದಯ ಶೆಟ್ಟಿ, ವಿಜಯ್ ಕೊಡವೂರು ಉಪಸ್ಥಿತರಿದ್ದರು.</p>.<div><blockquote>ಕರಾವಳಿಯ ಮೂರು ಜಿಲ್ಲೆಗಳ ಹೆಚ್ಚಿನ ಜನರಲ್ಲಿ ತುಂಡು ಭೂಮಿಯಿದ್ದು 9/11 ಏಕ ವಿನ್ಯಾಸ ನಕ್ಷೆ ಸಿಗುವುದು ವಿಳಂಬವಾಗುತ್ತಿರುವುದರಿಂದ ಜನರಿಗೆ ಮನೆ ಕಟ್ಟಲು ಸಮಸ್ಯೆಯಾಗುತ್ತಿದೆ</blockquote><span class="attribution">– ಕಿರಣ್ ಕುಮಾರ್ ಕೊಡ್ಗಿ, ಕುಂದಾಪುರ ಶಾಸಕ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>