<p><strong>ಉಡುಪಿ</strong>: ರಾಜ್ಯ ಉಪ ಲೋಕಾಯುಕ್ತ ನ್ಯಾಯಮೂರ್ತಿ ಬಿ.ವೀರಪ್ಪ ಅವರು ನಗರದ ನಿಟ್ಟೂರಿನ ತ್ಯಾಜ್ಯ ನೀರು ಸಂಸ್ಕರಣಾ ಘಟಕ, ಮಲ್ಪೆ ಬಂದರು ಸಮೀಪ ಪ್ರದೇಶಕ್ಕೆ ಶುಕ್ರವಾರ ದಿಢೀರ್ ಭೇಟಿ ನೀಡಿ ಪರಿಶೀಲಿಸಿ, ಅಲ್ಲಿನ ಅವ್ಯವಸ್ಥೆ ಕಂಡು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.</p><p>ನಿಟ್ಟೂರು ನೀರು ಸಂಸ್ಕರಣಾ ಘಟಕದಲ್ಲಿ ತ್ಯಾಜ್ಯ ನೀರು ಶುದ್ದೀಕರಣಕ್ಕೆ ಪ್ರತಿ ತಿಂಗಳು ₹3 ಲಕ್ಷ ಖರ್ಚಾದರೂ ತ್ಯಾಜ್ಯ ನೀರು ಸಮರ್ಪಕವಾಗಿ ಶುದ್ಧೀಕರಣವಾಗುತ್ತಿಲ್ಲ. ಗಬ್ಬು ವಾಸನೆ ಹರಡಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.</p><p>ಕೊಳಚೆ ನೀರು ಆರು ಹಂತಗಳಲ್ಲಿ ಶುದ್ಧೀಕರಣಗೊಂಡಿದೆ ಎಂದು ಹೇಳಲಾಗುತ್ತಿದ್ದರೂ ಘಟಕದಿಂದ ಕಪ್ಪುಬಣ್ಣದ ನೀರು ಹೊರಬರುತ್ತಿರುವುದು ಗಮನಿಸಿ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ (ಕೆಎಸ್ಪಿಸಿಬಿ) ಅಧಿಕಾರಿ ವಿರುದ್ಧ ನಿರ್ಲಕ್ಷ್ಯದ ಪ್ರಕರಣ ದಾಖಲಿಸಲು ಸೂಚಿಸಿದರು.</p><p>ಬಳಿಕ ಉಡುಪಿ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಈ ವೇಳೆ ಹೊರಗುತ್ತಿಗೆಯಲ್ಲಿ ನೇಮಕಗೊಂಡಿದ್ದ ಮಹಿಳಾ ಸ್ವಚ್ಛತಾ ಕಾರ್ಮಿಕರು ತಮಗೆ ಇಎಸ್ಐ ಸೌಲಭ್ಯ ನೀಡುತಿಲ್ಲ ಎಂದು ದೂರಿದರು.</p><p>ಕೂಡಲೇ ಇಎಸ್ ಐ ಕಾರ್ಡ್ ನೀಡುವಂತೆ ಉಪ ಲೋಕಾಯುಕ್ತರು ಸಂಬಂಧಪಟ್ಟವರಿಗೆ ಸೂಚಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಉಡುಪಿ</strong>: ರಾಜ್ಯ ಉಪ ಲೋಕಾಯುಕ್ತ ನ್ಯಾಯಮೂರ್ತಿ ಬಿ.ವೀರಪ್ಪ ಅವರು ನಗರದ ನಿಟ್ಟೂರಿನ ತ್ಯಾಜ್ಯ ನೀರು ಸಂಸ್ಕರಣಾ ಘಟಕ, ಮಲ್ಪೆ ಬಂದರು ಸಮೀಪ ಪ್ರದೇಶಕ್ಕೆ ಶುಕ್ರವಾರ ದಿಢೀರ್ ಭೇಟಿ ನೀಡಿ ಪರಿಶೀಲಿಸಿ, ಅಲ್ಲಿನ ಅವ್ಯವಸ್ಥೆ ಕಂಡು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.</p><p>ನಿಟ್ಟೂರು ನೀರು ಸಂಸ್ಕರಣಾ ಘಟಕದಲ್ಲಿ ತ್ಯಾಜ್ಯ ನೀರು ಶುದ್ದೀಕರಣಕ್ಕೆ ಪ್ರತಿ ತಿಂಗಳು ₹3 ಲಕ್ಷ ಖರ್ಚಾದರೂ ತ್ಯಾಜ್ಯ ನೀರು ಸಮರ್ಪಕವಾಗಿ ಶುದ್ಧೀಕರಣವಾಗುತ್ತಿಲ್ಲ. ಗಬ್ಬು ವಾಸನೆ ಹರಡಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.</p><p>ಕೊಳಚೆ ನೀರು ಆರು ಹಂತಗಳಲ್ಲಿ ಶುದ್ಧೀಕರಣಗೊಂಡಿದೆ ಎಂದು ಹೇಳಲಾಗುತ್ತಿದ್ದರೂ ಘಟಕದಿಂದ ಕಪ್ಪುಬಣ್ಣದ ನೀರು ಹೊರಬರುತ್ತಿರುವುದು ಗಮನಿಸಿ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ (ಕೆಎಸ್ಪಿಸಿಬಿ) ಅಧಿಕಾರಿ ವಿರುದ್ಧ ನಿರ್ಲಕ್ಷ್ಯದ ಪ್ರಕರಣ ದಾಖಲಿಸಲು ಸೂಚಿಸಿದರು.</p><p>ಬಳಿಕ ಉಡುಪಿ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಈ ವೇಳೆ ಹೊರಗುತ್ತಿಗೆಯಲ್ಲಿ ನೇಮಕಗೊಂಡಿದ್ದ ಮಹಿಳಾ ಸ್ವಚ್ಛತಾ ಕಾರ್ಮಿಕರು ತಮಗೆ ಇಎಸ್ಐ ಸೌಲಭ್ಯ ನೀಡುತಿಲ್ಲ ಎಂದು ದೂರಿದರು.</p><p>ಕೂಡಲೇ ಇಎಸ್ ಐ ಕಾರ್ಡ್ ನೀಡುವಂತೆ ಉಪ ಲೋಕಾಯುಕ್ತರು ಸಂಬಂಧಪಟ್ಟವರಿಗೆ ಸೂಚಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>