‘ದುಡ್ಡಿನಿಂದ ಎಲ್ಲವನ್ನು ಪಡೆದುಕೊಳ್ಳಬಹುದು ಎನ್ನುವುದು ಭ್ರಮೆ. ಶಾಂತಿ, ನೆಮ್ಮದಿ, ಪ್ರೀತಿ, ಆರೋಗ್ಯ ಸೇರಿದಂತೆ ಹಲವು ಪ್ರಮುಖ ಸಂಗತಿಗಳಿಗೆ ದುಡ್ಡು ಬೇಕಿಲ್ಲ. ನಿದ್ರೆ ಕೂಡ ಮನುಷ್ಯನ ಒಂದು ಸಂಪತ್ತು. ಎಲ್ಲ ಸಂಪತ್ತುಗಳಿದ್ದರೂ, ಅತ್ಯಮೂಲ್ಯವಾದ ನಿದ್ರೆಯ ಸಂಪತ್ತಿನಿಂದ ವಂಚಿತರಾದ ಹಲವರು ನಮಗೆ ಕಾಣ ಸಿಗುತ್ತಾರೆ. ಸರಿಯಾದ ಶಿಕ್ಷಣ ಹಾಗೂ ಭಾಷಾ ಜ್ಞಾನ ಇರುವವರು ಪ್ರಪಂಚದ ಎಲ್ಲಿಯೂ ಕೂಡ ನೆಮ್ಮದಿಯ ಬದುಕನ್ನು ಸಾಧಿಸುತ್ತಾರೆ. ಗುರುಗಳಿಂದ ಸರಿಯಾದ ರೀತಿಯಲ್ಲಿ ಜ್ಞಾನಾರ್ಜನೆ ಪಡೆದುಕೊಳ್ಳುವ ವಿದ್ಯಾರ್ಥಿಗಳು, ವಿದ್ಯೆ ಸಂಪನ್ನರಾಗಿ ಜೀವನವನ್ನು ಜಯಿಸುತ್ತಾರೆ’ ಎಂದರು.