ನಗರದ ಪುರಭವನದಲ್ಲಿ ಬುಧವಾರ ಕೂರ್ಮ ಬಳಗ ಹಮ್ಮಿಕೊಂಡಿದ್ದ ‘ಜಯೋಸ್ತುತೆ’ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಅಂಡಮಾನ್ ಜೈಲಿನಲ್ಲಿ ಸಾವರ್ಕರ್ಗೆ ಮಾನಸಿಕ ಚಿತ್ರಹಿಂಸೆ ನೀಡಲು, ಮನೋಬಲ ಕುಂದಿಸಲು ಅವರ ಎದುರಿಗೇ ಕೈದಿಗಳನ್ನು ನೇಣು ಹಾಕಲಾಗುತ್ತಿತ್ತು. ಕಳಪೆ ಗುಣಮಟ್ಟದ ಆಹಾರ ನೀಡಲಾಗುತ್ತಿತ್ತು. ಮತ್ತೊಂದೆಡೆ, ಹೊರಗೆ ಬ್ರಿಟಿಷರ ಅಟ್ಟಹಾಸ ಹೆಚ್ಚುತ್ತಿತ್ತು. ಸಮಾಜದಲ್ಲಿ ಜಾತಿ ದ್ವೇಷ, ಬೇಧ ಮಿತಿ ಮೀರುತ್ತಿತ್ತು. ಇಂತಹ ಪರಿಸ್ಥಿತಿಯಲ್ಲಿ ಬಂಧಿಯಾಗಿ ಏನನ್ನೂ ಸಾಧಿಸಲಾಗದು ಎಂಬುದನ್ನು ಅರಿತ ಸಾವರ್ಕರ್ ಅನ್ಯಮಾರ್ಗ ಕಾಣದೆ ಜೈಲಿನಿಂದ ಹೊರಬರಲು ತೀರ್ಮಾನಿಸಿದರು’ ಎಂದು ಸಾತ್ಯಕಿ ಸಾವರ್ಕರ್ ಹೇಳಿದರು.