ಅದಮಾರು ಹಿರಿಯ ಮಠಾಧೀಶರಾದ ವಿಶ್ವಪ್ರಿಯತೀರ್ಥ ಶ್ರೀಗಳು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ‘ಹೆತ್ತ ತಂದೆ–ತಾಯಿ ಮತ್ತು ಹೊತ್ತ ಗುರುಗಳ ಗುಣಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಬದುಕಬೇಕು. ವಿಭುದೇಶ ಗುರುಗಳು ಧೈರ್ಯವಂತರು, ಸಮಯಪ್ರಜ್ಞೆ ಹಾಗೂ ಅಪಾರ ದೇಶಭಕ್ತಿ ಹೊಂದಿದ್ದು, ಸದೃಢ ದೇಶ ಕಟ್ಟಲು ವಿದ್ಯಾಸಂಸ್ಥೆಗಳನ್ನು ಸ್ಥಾಪಿಸಿದರು. ಸಮಾಜಕ್ಕೆ ಉತ್ತಮ ವ್ಯಕ್ತಿಗಳನ್ನು ನೀಡಿ ಸೇವೆ ಸಲ್ಲಿಸಿದರು. ಅವರು ಹಾಕಿಕೊಟ್ಟ ಸನ್ಮಾರ್ಗದಲ್ಲಿ ಮುನ್ನಡೆಯುತ್ತಿರುವುದಾಗಿ ತಿಳಿಸಿದರು.