<p><strong>ಉಡುಪಿ: </strong>ಜಿಲ್ಲೆಯಲ್ಲಿ ಡಿ.10ರಂದು ನಡೆಯುವ ವಿಧಾನ ಪರಿಷತ್ ಚುನಾವಣೆ ಮುಕ್ತ, ಪಾರದರ್ಶಕ ಹಾಗೂ ನ್ಯಾಯಸಮ್ಮತವಾಗಿ ನಡೆಯುವ ನಿಟ್ಟಿನಲ್ಲಿ ಅಧಿಕಾರಿಗಳು ಜವಾಬ್ದಾರಿಯುತವಾಗಿ ಕಾರ್ಯ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಎಂ.ಕೂರ್ಮಾರಾವ್ ಸೂಚಿಸಿದರು.</p>.<p>ರಜತಾದ್ರಿಯ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ಸೋಮವಾರ ವಿಧಾನ ಪರಿಷತ್ ಚುನಾವಣಾ ಕರ್ತವಕ್ಕೆ ನಿಯೋಜಿಸಿರುವ ಮೈಕ್ರೋ ಅಬ್ಸರ್ವರ್ಗಳಿಗೆ ಹಮ್ಮಿಕೊಂಡಿದ್ದ ತರಬೇತಿ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>ಮತದಾನದ ದಿನ ಮತಗಟ್ಟೆಯಲ್ಲಿ ಚುನಾವಣಾ ಆಯೋಗ ಸೂಚಿಸಿರುವ ಮಾರ್ಗಸೂಚಿಗಳ ಅನ್ವಯ ಮತದಾನ ಪ್ರಕ್ರಿಯೆ ನಡೆಯುತ್ತಿದೆಯೇ ಎಂದು ಮೈಕ್ರೋ ಅಬ್ಸರ್ವರ್ಗಳು ಪರಿಶೀಲಿಸಬೇಕು. ಯಾವುದೇ ಲೋಪಗಳು ಕಂಡುಬಂದಲ್ಲಿ ಮತಗಟ್ಟೆ ಅಧಿಕಾರಿಯ ಗಮನಕ್ಕೆ ತಂದು ತಕ್ಷಣ ಸರಿಪಡಿಸಬೇಕು ಎಂದು ಸೂಚಿಸಿದರು.</p>.<p>ಮತದಾನ ಸಂಪೂರ್ಣ ಪಾರದರ್ಶಕ, ಮುಕ್ತ ಹಾಗೂ ನ್ಯಾಯ ಸಮ್ಮತವಾಗಿ ನಡೆಯಬೇಕು. ಮತದಾನದ ಪೂರ್ಣ ವಿವರಗಳನ್ನು ನೇರವಾಗಿ ಜಿಲ್ಲಾ ಚುನಾವಣಾ ವೀಕ್ಷಕರಿಗೆ ಸಲ್ಲಿಸಬೇಕು ಎಂದು ಜಿಲ್ಲಾಧಿಕಾರಿ ನಿರ್ದೇಶನ ನೀಡಿದರು.</p>.<p>ಮತದಾನ ಆರಂಭದಿಂದ ಮುಕ್ತಾಯದವರೆಗಿನ ಎಲ್ಲ ಘಟನಾವಳಿಗಳನ್ನು ಸೂಕ್ಷ್ಮವಾಗಿ ಅವಲೋಕಿಸಿ, ವರದಿಯನ್ನು ನಿಗದಿತ ಸಮೂನೆಯಲ್ಲಿ ದಾಖಲಿಸಿ ಚುನಾವಣಾ ವೀಕ್ಷಕರಿಗೆ ಸಲ್ಲಿಸಬೇಕು ಎಂದು ಸೂಚನೆ ನೀಡಿದರು.</p>.<p>ಪರಿಷತ್ ಚುನಾವಣೆಗೆ ಜಿಲ್ಲೆಯಲ್ಲಿ 158 ಮತಗಟ್ಟೆಗಳನ್ನು ತೆರೆಯಲಾಗಿದ್ದು, ಜಿಲ್ಲೆಯ ಗ್ರಾಮ ಪಂಚಾಯಿತಿ ಮತ್ತು ಸ್ಥಳೀಯಾಡಳಿತ ಸಂಸ್ಥೆಗಳ ಸದಸ್ಯರು ಸೇರಿ 2,505 ಮತದಾರರು ಮತ ಚಲಾಯಿಸಲು ಅರ್ಹರಾಗಿದ್ದು, ಎಲ್ಲ ಮತಗಟ್ಟೆಗಳಲ್ಲಿ ವೀಡಿಯೋಗ್ರಫಿ ವ್ಯವಸ್ಥೆ ಮಾಡಲಾಗಿದೆ. ಬೆಳಿಗ್ಗೆ 8 ರಿಂದ ಮಧ್ಯಾಹ್ನ 4 ರವರೆಗೆ ಮತದಾನ ನಡೆಯಲಿದೆ ಎಂದು ಮಾಹಿತಿ ನೀಡಿದರು.</p>.<p>ಜಿಲ್ಲಾ ನೋಡೆಲ್ ಅಧಿಕಾರಿ ಅಶೋಕ್ ಕಾಮತ್ ಮೈಕ್ರೋ ಅಬ್ಸರ್ವರ್ಗಳು ನಿರ್ವಹಿಸಬೇಕಾದ ಕಾರ್ಯಗಳು ಹಾಗೂ ದಾಖಲೆಗಳನ್ನು ನಿರ್ವಹಿಸುವ ಕುರಿತು ತರಬೇತಿ ನೀಡಿದರು. ಹೆಚ್ಚುವರಿ ಜಿಲ್ಲಾಧಿಕಾರಿ ಬಾಲಕೃಷ್ಣಪ್ಪ, ಲೀಡ್ ಬ್ಯಾಂಕ್ ವ್ಯವಸ್ಥಾಪಕ ಪಿಂಜಾರ, ಎನ್.ಐ.ಸಿ. ನಿರ್ದೇಶಕ ಮಂಜುನಾಥ್ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಉಡುಪಿ: </strong>ಜಿಲ್ಲೆಯಲ್ಲಿ ಡಿ.10ರಂದು ನಡೆಯುವ ವಿಧಾನ ಪರಿಷತ್ ಚುನಾವಣೆ ಮುಕ್ತ, ಪಾರದರ್ಶಕ ಹಾಗೂ ನ್ಯಾಯಸಮ್ಮತವಾಗಿ ನಡೆಯುವ ನಿಟ್ಟಿನಲ್ಲಿ ಅಧಿಕಾರಿಗಳು ಜವಾಬ್ದಾರಿಯುತವಾಗಿ ಕಾರ್ಯ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಎಂ.ಕೂರ್ಮಾರಾವ್ ಸೂಚಿಸಿದರು.</p>.<p>ರಜತಾದ್ರಿಯ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ಸೋಮವಾರ ವಿಧಾನ ಪರಿಷತ್ ಚುನಾವಣಾ ಕರ್ತವಕ್ಕೆ ನಿಯೋಜಿಸಿರುವ ಮೈಕ್ರೋ ಅಬ್ಸರ್ವರ್ಗಳಿಗೆ ಹಮ್ಮಿಕೊಂಡಿದ್ದ ತರಬೇತಿ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>ಮತದಾನದ ದಿನ ಮತಗಟ್ಟೆಯಲ್ಲಿ ಚುನಾವಣಾ ಆಯೋಗ ಸೂಚಿಸಿರುವ ಮಾರ್ಗಸೂಚಿಗಳ ಅನ್ವಯ ಮತದಾನ ಪ್ರಕ್ರಿಯೆ ನಡೆಯುತ್ತಿದೆಯೇ ಎಂದು ಮೈಕ್ರೋ ಅಬ್ಸರ್ವರ್ಗಳು ಪರಿಶೀಲಿಸಬೇಕು. ಯಾವುದೇ ಲೋಪಗಳು ಕಂಡುಬಂದಲ್ಲಿ ಮತಗಟ್ಟೆ ಅಧಿಕಾರಿಯ ಗಮನಕ್ಕೆ ತಂದು ತಕ್ಷಣ ಸರಿಪಡಿಸಬೇಕು ಎಂದು ಸೂಚಿಸಿದರು.</p>.<p>ಮತದಾನ ಸಂಪೂರ್ಣ ಪಾರದರ್ಶಕ, ಮುಕ್ತ ಹಾಗೂ ನ್ಯಾಯ ಸಮ್ಮತವಾಗಿ ನಡೆಯಬೇಕು. ಮತದಾನದ ಪೂರ್ಣ ವಿವರಗಳನ್ನು ನೇರವಾಗಿ ಜಿಲ್ಲಾ ಚುನಾವಣಾ ವೀಕ್ಷಕರಿಗೆ ಸಲ್ಲಿಸಬೇಕು ಎಂದು ಜಿಲ್ಲಾಧಿಕಾರಿ ನಿರ್ದೇಶನ ನೀಡಿದರು.</p>.<p>ಮತದಾನ ಆರಂಭದಿಂದ ಮುಕ್ತಾಯದವರೆಗಿನ ಎಲ್ಲ ಘಟನಾವಳಿಗಳನ್ನು ಸೂಕ್ಷ್ಮವಾಗಿ ಅವಲೋಕಿಸಿ, ವರದಿಯನ್ನು ನಿಗದಿತ ಸಮೂನೆಯಲ್ಲಿ ದಾಖಲಿಸಿ ಚುನಾವಣಾ ವೀಕ್ಷಕರಿಗೆ ಸಲ್ಲಿಸಬೇಕು ಎಂದು ಸೂಚನೆ ನೀಡಿದರು.</p>.<p>ಪರಿಷತ್ ಚುನಾವಣೆಗೆ ಜಿಲ್ಲೆಯಲ್ಲಿ 158 ಮತಗಟ್ಟೆಗಳನ್ನು ತೆರೆಯಲಾಗಿದ್ದು, ಜಿಲ್ಲೆಯ ಗ್ರಾಮ ಪಂಚಾಯಿತಿ ಮತ್ತು ಸ್ಥಳೀಯಾಡಳಿತ ಸಂಸ್ಥೆಗಳ ಸದಸ್ಯರು ಸೇರಿ 2,505 ಮತದಾರರು ಮತ ಚಲಾಯಿಸಲು ಅರ್ಹರಾಗಿದ್ದು, ಎಲ್ಲ ಮತಗಟ್ಟೆಗಳಲ್ಲಿ ವೀಡಿಯೋಗ್ರಫಿ ವ್ಯವಸ್ಥೆ ಮಾಡಲಾಗಿದೆ. ಬೆಳಿಗ್ಗೆ 8 ರಿಂದ ಮಧ್ಯಾಹ್ನ 4 ರವರೆಗೆ ಮತದಾನ ನಡೆಯಲಿದೆ ಎಂದು ಮಾಹಿತಿ ನೀಡಿದರು.</p>.<p>ಜಿಲ್ಲಾ ನೋಡೆಲ್ ಅಧಿಕಾರಿ ಅಶೋಕ್ ಕಾಮತ್ ಮೈಕ್ರೋ ಅಬ್ಸರ್ವರ್ಗಳು ನಿರ್ವಹಿಸಬೇಕಾದ ಕಾರ್ಯಗಳು ಹಾಗೂ ದಾಖಲೆಗಳನ್ನು ನಿರ್ವಹಿಸುವ ಕುರಿತು ತರಬೇತಿ ನೀಡಿದರು. ಹೆಚ್ಚುವರಿ ಜಿಲ್ಲಾಧಿಕಾರಿ ಬಾಲಕೃಷ್ಣಪ್ಪ, ಲೀಡ್ ಬ್ಯಾಂಕ್ ವ್ಯವಸ್ಥಾಪಕ ಪಿಂಜಾರ, ಎನ್.ಐ.ಸಿ. ನಿರ್ದೇಶಕ ಮಂಜುನಾಥ್ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>