ಭಾನುವಾರ, 19 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಡಿಯೊ ಚಿತ್ರೀಕರಣ ಪ್ರಕರಣ; ವಿಚಾರಣೆ ನಡೆಸಲು ಉಡುಪಿಗೆ ಬಂದ ಖುಷ್ಬೂ

Published 26 ಜುಲೈ 2023, 16:59 IST
Last Updated 26 ಜುಲೈ 2023, 16:59 IST
ಅಕ್ಷರ ಗಾತ್ರ

ಉಡುಪಿ: ನೇತ್ರಜ್ಯೋತಿ ಪ್ಯಾರಾ ಮೆಡಿಕಲ್‌ ಕಾಲೇಜಿನ ಶೌಚಾಲಯದಲ್ಲಿ ಯುವತಿಯ ವಿಡಿಯೋ ಚಿತ್ರೀಕರಣ ಮಾಡಿರುವ ಘಟನೆ ಸಂಬಂಧ ವಿಚಾರಣೆ ನಡೆಸಲು ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ ಖುಷ್ಬೂ ಸುಂದರ್ ಬುಧವಾರ ಉಡುಪಿಗೆ ಆಗಮಿಸಿದರು.

ಬಳಿಕ ಸುದ್ದಿಗಾರರ ಜತೆ ಮಾತನಾಡಿ, ವಿದ್ಯಾರ್ಥಿನಿಯ ಸಮಸ್ಯೆ ವಿಚಾರಣೆ ಮಾಡಲು ಬಂದಿದ್ದೇನೆ. ಗುರುವಾರ ಪೊಲೀಸ್ ಅಧಿಕಾರಿಗಳನ್ನು ಭೇಟಿಯಾಗಿ ಮಾಹಿತಿ ಪಡೆದು, ಬಳಿಕ ಕಾಲೇಜು ‌ಆಡಳಿತ ಮಂಡಳಿ ಹಾಗೂ ವಿದ್ಯಾರ್ಥಿಗಳನ್ನು ಭೇಟಿ ಮಾಡುತ್ತೇನೆ ಎಂದು ತಿಳಿಸಿದರು.

ಪ್ರಕರಣದ ಸ್ವರೂಪವನ್ನು ಮೊದಲು ಅರಿಯಬೇಕಾಗಿದ್ದು ಎರಡು ದಿನ ಉಡುಪಿಯಲ್ಲಿದ್ದುಕೊಂಡು ಪ್ರಕರಣಕ್ಕೆ ಸಂಬಂಧಪಟ್ಟ ಎಲ್ಲರ ಜತೆ ಮಾತನಾಡುತ್ತೇನೆ ಎಂದು ಖುಷ್ಬೂ ಸುಂದರ್ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT