ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಡಿ.5ರಂದು ಸಂಜೆ 4ಕ್ಕೆ ‘ವಿಶ್ವಾರ್ಪಣಮ್’ ಉದ್ಘಾಟನೆಯಾಗಲಿದ್ದು ಅದಮಾರು ಮಠದ ವಿಶ್ವಪ್ರಿಯ ತೀರ್ಥರು ಉದ್ಘಾಟಿಸಿ ಆಶೀರ್ವಚನ ನೀಡಲಿದ್ದಾರೆ. ಈಶಪ್ರಿಯ ತೀರ್ಥರು, ಚಿತ್ರಾಪುರ ಮಠದ ವಿದ್ಯೇಂದ್ರ ತೀರ್ಥರು ಅನುಗ್ರಹ ಸಂದೇಶ ನೀಡಲಿದ್ದಾರೆ. ಶಾಸಕ ರಘುಪತಿ ಭಟ್, ನಗರಸಭೆ ಅಧ್ಯಕ್ಷೆ ಸುಮಿತ್ರಾ ನಾಯಕ್, ಕೆನರಾ ಬ್ಯಾಂಕ್ ಕಾರ್ಯ ನಿರ್ವಾಹಕ ನಿರ್ದೇಶಕ ಮಣಿಮೇಖಲೈ, ಕರ್ನಾಟಕ ಬ್ಯಾಂಕ್ ಆಡಳಿತ ನಿರ್ದೇಶಕರಾದ ಎಂ.ಎಸ್.ಮಹಾಬಲೇಶ್ವರ, ನಟ, ಚಿಂತಕ ಎಸ್.ಎನ್.ಸೇತುರಾಂ ಉಪಸ್ಥಿತರಿರಲಿದ್ದಾರೆ ಎಂದು ವಿವರ ನೀಡಿದರು.