ಸೋಮವಾರ ಮಧ್ಯರಾತ್ರಿ 12.17ಕ್ಕೆ ಕೃಷ್ಣ ದೇವರಿಗೆ ತುಳಸಿ ಅರ್ಚನೆ ಹಾಗೂ ಮಹಾಪೂಜೆ ನೆರವೇರಿಸಿದ ಈಶಪ್ರಿಯ ತೀರ್ಥ ಸ್ವಾಮೀಜಿ, ಕೃಷ್ಣಾಪುರ ಮಠದ ವಿದ್ಯಾಸಾಗರತೀರ್ಥ ಸ್ವಾಮೀಜಿ, ಅದಮಾರು ಮಠದ ವಿಶ್ವಪ್ರಿಯತೀರ್ಥ ಸ್ವಾಮೀಜಿ, ಕಾಣಿಯೂರು ಮಠದ ವಿದ್ಯಾವಲ್ಲಭ ತೀರ್ಥ ಸ್ವಾಮೀಜಿ ಗರ್ಭಗುಡಿಯಲ್ಲಿ ಕೃಷ್ಣನಿಗೆ ಅರ್ಘ್ಯ ನೀಡಿದರು. ಬಳಿಕ ಚಂದ್ರೋದಯ ಸಮಯದಲ್ಲಿ ತುಳಸೀಕಟ್ಟೆಯಲ್ಲಿ ಚಂದ್ರನಿಗೆ ಅರ್ಘ್ಯ ನೀಡಿದರು. ಬಳಿಕ ಭಕ್ತರಿಂದಲೂ ಅರ್ಘ್ಯ ಸಮರ್ಪಿಸಲಾಯಿತು.