<p><strong>ಉಡುಪಿ</strong>: ಸೌರ ಶ್ರೀಕೃಷ್ಣ ಜನ್ಮಾಷ್ಟಮಿಯ ಅಂಗವಾಗಿ ಉಡುಪಿಯ ಕೃಷ್ಣಮಠದಲ್ಲಿ ಸೋಮವಾರ ವಿಟ್ಲಪಿಂಡಿ ಮಹೋತ್ಸವವು ವಿಜೃಂಭಣೆಯಿಂದ ನಡೆಯಿತು.</p>.<p>ಪರ್ಯಾಯ ಪುತ್ತಿಗೆ ಮಠಾಧೀಶ ಸುಗುಣೇಂದ್ರತೀರ್ಥ ಸ್ವಾಮೀಜಿ ಕೃಷ್ಣನ ಮೃಣ್ಮಯ (ಮಣ್ಣಿನ) ಮೂರ್ತಿಗೆ ಷೋಡಷೋಪಚಾರ ಪೂಜೆ ಮಾಡಿ, ನಂತರ ಮಹಾಪೂಜೆ ನೆರವೇರಿಸಿದರು. ಮಧ್ಯಾಹ್ನ ಮೃಣ್ಮಯ ಉತ್ಸವ ಮೂರ್ತಿಯನ್ನು ಚಿನ್ನದ ಪಲ್ಲಕ್ಕಿಯಲ್ಲಿ ಕೂರಿಸಿ, ರಥಬೀದಿಗೆ ತರಲಾಯಿತು. ಬಳಿಕ ಸ್ವರ್ಣ ರಥದಲ್ಲಿರಿಸಲಾಯಿತು.</p>.<p>ಅದಕ್ಕೂ ಮುನ್ನ ಅನಂತೇಶ್ವರ ಮತ್ತು ಚಂದ್ರೇಶ್ವರ ದೇವಾಲಯಗಳ ಉತ್ಸವ ಮೂರ್ತಿಗಳನ್ನು ನವರತ್ನ ರಥದಲ್ಲಿರಿಸಲಾಗಿತ್ತು. ಪರ್ಯಾಯ ಶ್ರೀಪಾದರು ಆರತಿ ಬೆಳಗಿ ರಥೋತ್ಸವಕ್ಕೆ ಚಾಲನೆ ನೀಡಿದರು. ಇದೇ ವೇಳೆ ಗೊಲ್ಲ ವೇಷಧಾರಿಗಳು ರಥಬೀದಿಯ ಗುರ್ಜಿಗಳಲ್ಲಿ ಕಟ್ಟಿದ್ದ ಮೊಸರು ಕುಡಿಕೆಗಳನ್ನು ಒಡೆದರು. </p>.<p>ಮೆರವಣಿಗೆಯಲ್ಲಿ ಜನಪದ ಹುಲಿವೇಷಗಳು ಹಾಗೂ ಇತರ ವೇಷಗಳು ಗಮನ ಸೆಳೆದವು. ಸಾವಿರಾರು ಭಕ್ತರು ರಥೋತ್ಸವಕ್ಕೆ ಸಾಕ್ಷಿಯಾದರು. ಅದಮಾರು ಮಠಾಧೀಶ ವಿಶ್ವಪ್ರಿಯತೀರ್ಥ ಸ್ವಾಮೀಜಿ ರಥೋತ್ಸವದಲ್ಲಿ ಪಾಲ್ಗೊಂಡರು. </p>.<p>ಮೆರವಣಿಗೆ ನಡುವೆ ಪುತ್ತಿಗೆ ಶ್ರೀಗಳು ರಥಬೀದಿಯಲ್ಲಿ ಭಕ್ತರತ್ತ ಪ್ರಸಾದ ರೂಪದಲ್ಲಿ ಉಂಡೆ, ಚಕ್ಕುಲಿ ಎಸೆದರು. ‘ಗೋವಿಂದ’ ಎನ್ನುತ್ತ ಭಕ್ತರು ಅದನ್ನು ಹಿಡಿಯಲು ಯತ್ನಿಸಿದರು. </p>.<p>ಮೆರವಣಿಗೆ ಬಳಿಕ ಮೃಣ್ಮಯ ಮೂರ್ತಿಯನ್ನು ಮಧ್ವಸರೋವರದಲ್ಲಿ ಜಲಸ್ಥಂಭನಗೊಳಿಸ<br />ಲಾಯಿತು. ಬಳಿಕ ಕೃಷ್ಣ ಮಠದ ರಾಜಾಂಗಣದಲ್ಲಿ ಹುಲಿವೇಷ ಸ್ಪರ್ಧೆ ನಡೆಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಉಡುಪಿ</strong>: ಸೌರ ಶ್ರೀಕೃಷ್ಣ ಜನ್ಮಾಷ್ಟಮಿಯ ಅಂಗವಾಗಿ ಉಡುಪಿಯ ಕೃಷ್ಣಮಠದಲ್ಲಿ ಸೋಮವಾರ ವಿಟ್ಲಪಿಂಡಿ ಮಹೋತ್ಸವವು ವಿಜೃಂಭಣೆಯಿಂದ ನಡೆಯಿತು.</p>.<p>ಪರ್ಯಾಯ ಪುತ್ತಿಗೆ ಮಠಾಧೀಶ ಸುಗುಣೇಂದ್ರತೀರ್ಥ ಸ್ವಾಮೀಜಿ ಕೃಷ್ಣನ ಮೃಣ್ಮಯ (ಮಣ್ಣಿನ) ಮೂರ್ತಿಗೆ ಷೋಡಷೋಪಚಾರ ಪೂಜೆ ಮಾಡಿ, ನಂತರ ಮಹಾಪೂಜೆ ನೆರವೇರಿಸಿದರು. ಮಧ್ಯಾಹ್ನ ಮೃಣ್ಮಯ ಉತ್ಸವ ಮೂರ್ತಿಯನ್ನು ಚಿನ್ನದ ಪಲ್ಲಕ್ಕಿಯಲ್ಲಿ ಕೂರಿಸಿ, ರಥಬೀದಿಗೆ ತರಲಾಯಿತು. ಬಳಿಕ ಸ್ವರ್ಣ ರಥದಲ್ಲಿರಿಸಲಾಯಿತು.</p>.<p>ಅದಕ್ಕೂ ಮುನ್ನ ಅನಂತೇಶ್ವರ ಮತ್ತು ಚಂದ್ರೇಶ್ವರ ದೇವಾಲಯಗಳ ಉತ್ಸವ ಮೂರ್ತಿಗಳನ್ನು ನವರತ್ನ ರಥದಲ್ಲಿರಿಸಲಾಗಿತ್ತು. ಪರ್ಯಾಯ ಶ್ರೀಪಾದರು ಆರತಿ ಬೆಳಗಿ ರಥೋತ್ಸವಕ್ಕೆ ಚಾಲನೆ ನೀಡಿದರು. ಇದೇ ವೇಳೆ ಗೊಲ್ಲ ವೇಷಧಾರಿಗಳು ರಥಬೀದಿಯ ಗುರ್ಜಿಗಳಲ್ಲಿ ಕಟ್ಟಿದ್ದ ಮೊಸರು ಕುಡಿಕೆಗಳನ್ನು ಒಡೆದರು. </p>.<p>ಮೆರವಣಿಗೆಯಲ್ಲಿ ಜನಪದ ಹುಲಿವೇಷಗಳು ಹಾಗೂ ಇತರ ವೇಷಗಳು ಗಮನ ಸೆಳೆದವು. ಸಾವಿರಾರು ಭಕ್ತರು ರಥೋತ್ಸವಕ್ಕೆ ಸಾಕ್ಷಿಯಾದರು. ಅದಮಾರು ಮಠಾಧೀಶ ವಿಶ್ವಪ್ರಿಯತೀರ್ಥ ಸ್ವಾಮೀಜಿ ರಥೋತ್ಸವದಲ್ಲಿ ಪಾಲ್ಗೊಂಡರು. </p>.<p>ಮೆರವಣಿಗೆ ನಡುವೆ ಪುತ್ತಿಗೆ ಶ್ರೀಗಳು ರಥಬೀದಿಯಲ್ಲಿ ಭಕ್ತರತ್ತ ಪ್ರಸಾದ ರೂಪದಲ್ಲಿ ಉಂಡೆ, ಚಕ್ಕುಲಿ ಎಸೆದರು. ‘ಗೋವಿಂದ’ ಎನ್ನುತ್ತ ಭಕ್ತರು ಅದನ್ನು ಹಿಡಿಯಲು ಯತ್ನಿಸಿದರು. </p>.<p>ಮೆರವಣಿಗೆ ಬಳಿಕ ಮೃಣ್ಮಯ ಮೂರ್ತಿಯನ್ನು ಮಧ್ವಸರೋವರದಲ್ಲಿ ಜಲಸ್ಥಂಭನಗೊಳಿಸ<br />ಲಾಯಿತು. ಬಳಿಕ ಕೃಷ್ಣ ಮಠದ ರಾಜಾಂಗಣದಲ್ಲಿ ಹುಲಿವೇಷ ಸ್ಪರ್ಧೆ ನಡೆಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>