ರಥಬೀದಿಯಲ್ಲಿ ಅರ್ಧ ದೂರ ಕ್ರಮಿಸುತ್ತಿದ್ದಂತೆ ಅದಮಾರು ಮಠದ ಹಿರಿಯ ಯತಿ ವಿಶ್ವಪ್ರಿಯ ತೀರ್ಥರು, ಕೃಷ್ಣಾಪುರ ಮಠದ ವಿದ್ಯಾಸಾಗರ ತೀರ್ಥರು,ಪಲಿಮಾರು ಮಠದ ವಿದ್ಯಾಧೀಶ ತೀರ್ಥರು, ವಿದ್ಯಾರಾಜೇಶ್ವರ ತೀರ್ಥರು, ಕಾಣಿಯೂರು ಮಠದ ವಿದ್ಯಾವಲ್ಲಭ ತೀರ್ಥರು ಭಕ್ತರತ್ತ ಚಕ್ಕುಲಿ, ಉಂಡೆಗಳನ್ನು ತೂರಿದರು. ದೇವರ ಪ್ರಸಾದವನ್ನು ಪಡೆಯಲು ಭಕ್ತರು ಮುಗಿಬಿದ್ದ ದೃಶ್ಯ ಕಂಡುಬಂತು.