ಬಳಿಕ ಮಾತನಾಡಿದ ಅವರು, ಈಚೆಗೆ ಬೆಂಗಳೂರಿನಲ್ಲಿ ಆದಿ ಚುಂಚನಗಿರಿ ಮಠದ ಪೀಠಾಧಿಪತಿಗಳಾದ ನಿರ್ಮಲಾನಂದ ನಾಥ ಸ್ವಾಮೀಜಿ ಅವರನ್ನು ಭೇಟಿಯಾಗಿ, ಉಡುಪಿಯಲ್ಲಿ ಒಕ್ಕಲಿಗ ಸೇವಾ ಸಂಘದ ಕಚೇರಿಗೆ ನಿವೇಶನ ಪಡೆಯುವ ವಿಚಾರವನ್ನು ಪ್ರಸ್ತಾಪಿಸಲಾಯಿತು. ಜಿಲ್ಲೆಯಲ್ಲಿ ಸಂಘದ ಬೆಳವಣಿಗೆಗೆ ಪೂರಕವಾಗಿ ಹಲವು ವಿಚಾರಗಳನ್ನು ಸ್ವಾಮೀಜಿ ಗಮನಕ್ಕೆ ತರಲಾಯಿತು ಎಂದು ತಿಳಿಸಿದರು.