<p><strong>ಬ್ರಹ್ಮಾವರ</strong>: ಶಿರಿಯಾರ ಕಲ್ಮರ್ಗಿ ಶ್ರೀರಾಮ ಮಂದಿರದಿಂದ ಭಾನುವಾರ ಸಂಕೀರ್ತನಾ ಪಾದಯಾತ್ರೆಗೆ, ಸಾಮಾಜಿಕ ಕಾರ್ಯಕರ್ತ ರಾಮಾಂಜನೇಯ ಸೇವಾ ಟ್ರಸ್ಟ್ನ ಅಧ್ಯಕ್ಷ ಶಿರಿಯಾರ ಕಲ್ಮರ್ಗಿ ಪ್ರಭಾಕರ ನಾಯಕ್ ವ್ಯಾಸ ಧ್ವಜಕ್ಕೆ ಹಾರ ಹಾಕಿ, ಭಜನೆ ಮೂಲಕ ಚಾಲನೆ ನೀಡಿದರು.</p>.<p>ಕೋಟ ಹೋಬಳಿ ವ್ಯಾಪ್ತಿಯ ಶಿರಿಯಾರ ಕಲ್ಮರ್ಗಿ ಶ್ರೀರಾಮ ಮಂದಿರದಿಂದ ಆರಂಭಗೊಂಡು ತಾಂಗಾಡಿ, ಎತ್ತಿನಟ್ಟಿ, ಸಾಹೇಬರಕಟ್ಟೆ, ಗಿರಿಕೆಮಠ, ಮಧುವನ, ವಡ್ಡರ್ಸೆ ಮಾರ್ಗವಾಗಿ ಕೋಟ ಮೂರುಕ್ಕೆ ಮೂಲಕ ಚೇಂಪಿ ಲಕ್ಷ್ಮೀ ವೆಂಕಟರಮಣ ದೇವಸ್ಥಾನಕ್ಕೆ ತಲುಪಿತು.</p>.<p>ರಾಮಾಂಜನೇಯ ಸೇವಾ ಟ್ರಸ್ಟ್ನ ಕಾರ್ಯದರ್ಶಿ ರವೀಂದ್ರ ಹೆಗ್ಡೆ, ಕೋಶಾಧಿಕಾರಿ ದಾಮೋದರ್ ನಾಯಕ್ ಕಲ್ಮರ್ಗಿ, ಜಿಎಸ್ಬಿ ಮುಖಂಡರಾದ ಶಿವಾನಂದ, ಪ್ರಖ್ಯಾತ್, ಪ್ರಕಾಶ್, ನಿತ್ಯಾನಂದ ಇದ್ದರು.</p>.<p>ಚೇಂಪಿ ಲಕ್ಷ್ಮೀ ವೆಂಕಟರಮಣ ದೇವಸ್ಥಾನದ ವೇದಮೂರ್ತಿ ಅನಂತ ಭಟ್ ಅವರು, ಸುಧೀಂದ್ರ ತೀರ್ಥ ಸ್ವಾಮೀಜಿ ಅವರ ಗುರುವಂದನೆ ಸಲ್ಲಿಸಿ ಪ್ರಸಾದ ವಿತರಿಸಿದರು.</p>.<p>ಸುಧೀಂದ್ರ ತೀರ್ಥ ಸ್ವಾಮೀಜಿ ಅವರ ಜನ್ಮ ಶತಮಾನೋತ್ಸವ, ಮಂಗಲೋತ್ಸವ ಪ್ರಯುಕ್ತ ವ್ಯಾಸ ಧ್ವಜ ಸಂಕೀರ್ತನಾ ಪಾದಯಾತ್ರೆ ಆಯೋಜಿಸಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬ್ರಹ್ಮಾವರ</strong>: ಶಿರಿಯಾರ ಕಲ್ಮರ್ಗಿ ಶ್ರೀರಾಮ ಮಂದಿರದಿಂದ ಭಾನುವಾರ ಸಂಕೀರ್ತನಾ ಪಾದಯಾತ್ರೆಗೆ, ಸಾಮಾಜಿಕ ಕಾರ್ಯಕರ್ತ ರಾಮಾಂಜನೇಯ ಸೇವಾ ಟ್ರಸ್ಟ್ನ ಅಧ್ಯಕ್ಷ ಶಿರಿಯಾರ ಕಲ್ಮರ್ಗಿ ಪ್ರಭಾಕರ ನಾಯಕ್ ವ್ಯಾಸ ಧ್ವಜಕ್ಕೆ ಹಾರ ಹಾಕಿ, ಭಜನೆ ಮೂಲಕ ಚಾಲನೆ ನೀಡಿದರು.</p>.<p>ಕೋಟ ಹೋಬಳಿ ವ್ಯಾಪ್ತಿಯ ಶಿರಿಯಾರ ಕಲ್ಮರ್ಗಿ ಶ್ರೀರಾಮ ಮಂದಿರದಿಂದ ಆರಂಭಗೊಂಡು ತಾಂಗಾಡಿ, ಎತ್ತಿನಟ್ಟಿ, ಸಾಹೇಬರಕಟ್ಟೆ, ಗಿರಿಕೆಮಠ, ಮಧುವನ, ವಡ್ಡರ್ಸೆ ಮಾರ್ಗವಾಗಿ ಕೋಟ ಮೂರುಕ್ಕೆ ಮೂಲಕ ಚೇಂಪಿ ಲಕ್ಷ್ಮೀ ವೆಂಕಟರಮಣ ದೇವಸ್ಥಾನಕ್ಕೆ ತಲುಪಿತು.</p>.<p>ರಾಮಾಂಜನೇಯ ಸೇವಾ ಟ್ರಸ್ಟ್ನ ಕಾರ್ಯದರ್ಶಿ ರವೀಂದ್ರ ಹೆಗ್ಡೆ, ಕೋಶಾಧಿಕಾರಿ ದಾಮೋದರ್ ನಾಯಕ್ ಕಲ್ಮರ್ಗಿ, ಜಿಎಸ್ಬಿ ಮುಖಂಡರಾದ ಶಿವಾನಂದ, ಪ್ರಖ್ಯಾತ್, ಪ್ರಕಾಶ್, ನಿತ್ಯಾನಂದ ಇದ್ದರು.</p>.<p>ಚೇಂಪಿ ಲಕ್ಷ್ಮೀ ವೆಂಕಟರಮಣ ದೇವಸ್ಥಾನದ ವೇದಮೂರ್ತಿ ಅನಂತ ಭಟ್ ಅವರು, ಸುಧೀಂದ್ರ ತೀರ್ಥ ಸ್ವಾಮೀಜಿ ಅವರ ಗುರುವಂದನೆ ಸಲ್ಲಿಸಿ ಪ್ರಸಾದ ವಿತರಿಸಿದರು.</p>.<p>ಸುಧೀಂದ್ರ ತೀರ್ಥ ಸ್ವಾಮೀಜಿ ಅವರ ಜನ್ಮ ಶತಮಾನೋತ್ಸವ, ಮಂಗಲೋತ್ಸವ ಪ್ರಯುಕ್ತ ವ್ಯಾಸ ಧ್ವಜ ಸಂಕೀರ್ತನಾ ಪಾದಯಾತ್ರೆ ಆಯೋಜಿಸಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>