<p><strong>ಉಡುಪಿ: </strong>ಹವಾನಿಯಂತ್ರಿತ ಕೋಣೆಯಲ್ಲಿ ಕುಳಿತು ಬರೆಯುವವರ ಸಾಹಿತ್ಯ ಅಕಾಡೆಮಿಗೆ ₹ 1 ಕೋಟಿ ವಾರ್ಷಿಕ ಅನುದಾನ ಸಿಗುತ್ತದೆ. ಊರೂರು ಸುತ್ತಿ ರಾತ್ರಿ ಹಗಲು ಕೆಲಸ ಮಾಡುವ ನಾಟಕ ಅಕಾಡೆಮಿಗೂ ₹1 ಕೋಟಿ ಅನುದಾನವನ್ನು ರಾಜ್ಯ ಸರ್ಕಾರ ನೀಡುತ್ತಿದೆ ಎಂದು ಅಕಾಡೆಮಿ ಅಧ್ಯಕ್ಷ ಲೋಕೇಶ್ ಅಸಮಾಧಾನ ವ್ಯಕ್ತಪಡಿಸಿದರು.</p>.<p>₹1 ಕೋಟಿಯಲ್ಲಿ ₹ 35 ಲಕ್ಷ ಸಿಬ್ಬಂದಿಯ ವೇತನಕ್ಕೆ ವ್ಯಯವಾಗುತ್ತದೆ. ಉಳಿದ ₹ 65 ಲಕ್ಷದಲ್ಲಿ ರಂಗಚಟುವಟಿಕೆಗಳನ್ನು ನಡೆಸಲು ಸಾಧ್ಯವೇ ಎಂದು ಪ್ರಶ್ನಿಸಿದ ಅವರು ಸರ್ಕಾರ ಅನುದಾನವನ್ನು ಹೆಚ್ಚಿಸಬೇಕು ಎಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಒತ್ತಾಯಿಸಿದರು.</p>.<p>ಅನುದಾನ ಬಿಡುಗಡೆಗೂ ಮೊದಲೇ ಕ್ರಿಯಾಯೋಜನೆ ಸಲ್ಲಿಸಬೇಕು ಎಂಬ ನಿಯಮವನ್ನು ಜಾರಿಗೆ ತರಲಾಗಿದೆ. ಅದರಂತೆ 2 ವರ್ಷಗಳಿಂದ ಕ್ರಿಯಾಯೋಜನೆ ಸಲ್ಲಿಸುತ್ತಾ ಬಂದರೂ ಯಾವುದೇ ಪ್ರಯೋಜನವಾಗಿಲ್ಲ. ನಾಟಕ ಅಕಾಡೆಮಿಗೆ ಸ್ವಾಯತ್ತತೆ ನೀಡುವಂತೆ ಸಾಹಿತಿ ಬರಗೂರು ರಾಮಚಂದ್ರಪ್ಪ ಅವರು ಸರ್ಕಾರಕ್ಕೆ ವರದಿ ಸಲ್ಲಿಸಿದ್ದು, ಅದರ ಬಗ್ಗೆಯೂ ಸರ್ಕಾರ ತಲೆಕೆಡಿಸಿಕೊಂಡಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.</p>.<p>ಅಕಾಡೆಮಿಗಳಿಗೆ ಅರ್ಹರ ನೇಮಕವಾಗುವ ಬದಲು,ಅನರ್ಹರ ನೇಮಕ ನಡೆಯುತ್ತಿದೆ. ಇದನ್ನು ನೋಡಿದರೆ ಅಕಾಡೆಮಿಗಳು ಅರ್ಥ ಕಳೆದುಕೊಳ್ಳುತ್ತಿವೆ ಎಂದೆನಿಸುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು.</p>.<p>ಕೋಟ್ಯಂತರ ರೂಪಾಯಿ ಖರ್ಚುಮಾಡಿ 1000 ಮಂದಿ ಕುಳಿತುಕೊಳ್ಳುವ ಜಿಲ್ಲಾ ರಂಗಮಂದಿರಗಳನ್ನು ನಿರ್ಮಿಸುವ ಬದಲು 200 ಮಂದಿ ಸಾಮರ್ಥ್ಯದ ತಾಲ್ಲೂಕಿಗೊಂದು ರಂಗಮಂದಿರಗಳನ್ನು ನಿರ್ಮಾಣ ಮಾಡಿದರೆ ಸೂಕ್ತ ಎಂದು ಅಭಿಪ್ರಾಯಪಟ್ಟರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಉಡುಪಿ: </strong>ಹವಾನಿಯಂತ್ರಿತ ಕೋಣೆಯಲ್ಲಿ ಕುಳಿತು ಬರೆಯುವವರ ಸಾಹಿತ್ಯ ಅಕಾಡೆಮಿಗೆ ₹ 1 ಕೋಟಿ ವಾರ್ಷಿಕ ಅನುದಾನ ಸಿಗುತ್ತದೆ. ಊರೂರು ಸುತ್ತಿ ರಾತ್ರಿ ಹಗಲು ಕೆಲಸ ಮಾಡುವ ನಾಟಕ ಅಕಾಡೆಮಿಗೂ ₹1 ಕೋಟಿ ಅನುದಾನವನ್ನು ರಾಜ್ಯ ಸರ್ಕಾರ ನೀಡುತ್ತಿದೆ ಎಂದು ಅಕಾಡೆಮಿ ಅಧ್ಯಕ್ಷ ಲೋಕೇಶ್ ಅಸಮಾಧಾನ ವ್ಯಕ್ತಪಡಿಸಿದರು.</p>.<p>₹1 ಕೋಟಿಯಲ್ಲಿ ₹ 35 ಲಕ್ಷ ಸಿಬ್ಬಂದಿಯ ವೇತನಕ್ಕೆ ವ್ಯಯವಾಗುತ್ತದೆ. ಉಳಿದ ₹ 65 ಲಕ್ಷದಲ್ಲಿ ರಂಗಚಟುವಟಿಕೆಗಳನ್ನು ನಡೆಸಲು ಸಾಧ್ಯವೇ ಎಂದು ಪ್ರಶ್ನಿಸಿದ ಅವರು ಸರ್ಕಾರ ಅನುದಾನವನ್ನು ಹೆಚ್ಚಿಸಬೇಕು ಎಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಒತ್ತಾಯಿಸಿದರು.</p>.<p>ಅನುದಾನ ಬಿಡುಗಡೆಗೂ ಮೊದಲೇ ಕ್ರಿಯಾಯೋಜನೆ ಸಲ್ಲಿಸಬೇಕು ಎಂಬ ನಿಯಮವನ್ನು ಜಾರಿಗೆ ತರಲಾಗಿದೆ. ಅದರಂತೆ 2 ವರ್ಷಗಳಿಂದ ಕ್ರಿಯಾಯೋಜನೆ ಸಲ್ಲಿಸುತ್ತಾ ಬಂದರೂ ಯಾವುದೇ ಪ್ರಯೋಜನವಾಗಿಲ್ಲ. ನಾಟಕ ಅಕಾಡೆಮಿಗೆ ಸ್ವಾಯತ್ತತೆ ನೀಡುವಂತೆ ಸಾಹಿತಿ ಬರಗೂರು ರಾಮಚಂದ್ರಪ್ಪ ಅವರು ಸರ್ಕಾರಕ್ಕೆ ವರದಿ ಸಲ್ಲಿಸಿದ್ದು, ಅದರ ಬಗ್ಗೆಯೂ ಸರ್ಕಾರ ತಲೆಕೆಡಿಸಿಕೊಂಡಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.</p>.<p>ಅಕಾಡೆಮಿಗಳಿಗೆ ಅರ್ಹರ ನೇಮಕವಾಗುವ ಬದಲು,ಅನರ್ಹರ ನೇಮಕ ನಡೆಯುತ್ತಿದೆ. ಇದನ್ನು ನೋಡಿದರೆ ಅಕಾಡೆಮಿಗಳು ಅರ್ಥ ಕಳೆದುಕೊಳ್ಳುತ್ತಿವೆ ಎಂದೆನಿಸುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು.</p>.<p>ಕೋಟ್ಯಂತರ ರೂಪಾಯಿ ಖರ್ಚುಮಾಡಿ 1000 ಮಂದಿ ಕುಳಿತುಕೊಳ್ಳುವ ಜಿಲ್ಲಾ ರಂಗಮಂದಿರಗಳನ್ನು ನಿರ್ಮಿಸುವ ಬದಲು 200 ಮಂದಿ ಸಾಮರ್ಥ್ಯದ ತಾಲ್ಲೂಕಿಗೊಂದು ರಂಗಮಂದಿರಗಳನ್ನು ನಿರ್ಮಾಣ ಮಾಡಿದರೆ ಸೂಕ್ತ ಎಂದು ಅಭಿಪ್ರಾಯಪಟ್ಟರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>