<p><strong>ಪಡುಬಿದ್ರಿ:</strong> ಪಲಿಮಾರು ಅಣೆಕಟ್ಟೆ ಅಸಮರ್ಪಕ ನಿರ್ವಹಣೆಯಿಂದ ಹೊಯಿಗೆ ಗ್ರಾಮಕ್ಕೆ ನೀರು ಪೂರೈಕೆಯಾಗದೆ ತೊಂದರೆಯಾಗುತ್ತಿದೆ ಎಂದು ಆರೋಪಿಸಿ ಹೊಯಿಗೆ ಗ್ರಾಮಸ್ಥರು ಶನಿವಾರ ಪಲಿಮಾರು ಗ್ರಾಮ ಪಂಚಾಯಿತಿಗೆ ಮನವಿ ಸಲ್ಲಿಸಿದರು.</p>.<p>ಹೊಯಿಗೆ, ಅವರಾಲು ಮಟ್ಟು ಪ್ರದೇಶಗಳಿಗೆ ಎರಡು ವರ್ಷಗಳಿಂದ ಸಮರ್ಪಕವಾಗಿ ನೀರು ಹರಿಯದೆ ಕೃಷಿಕರು, ಜಾನುವಾರುಗಳಿಗೆ ಸಮಸ್ಯೆಗಳಾಗಿವೆ. ಅಂತರ್ಜಲ ಮಟ್ಟ ಕುಸಿತಕ್ಕೊಳಗಾಗಿದೆ ಎಂದು ಗ್ರಾಮಸ್ಥರು ದೂರಿದರು. ಈ ಬಗ್ಗೆ ಗ್ರಾಮ ಪಂಚಾಯಿತಿ ಹಾಗೂ ಇಲಾಖೆ ತುರ್ತು ಗಮನಹರಿಸಿ ಕ್ರಮವಹಿಸುವಂತೆ ಅವರು ಆಗ್ರಹಿಸಿದರು.</p>.<p>ಪಲಿಮಾರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಗಾಯತ್ರಿ ಡಿ. ಪ್ರಭು ಹಾಗೂ ಪಿಡಿಒ ಶಶಿಧರ ಆಚಾರ್ಯ ಅವರು ಮನವಿ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಗಾಯತ್ರಿ ಪ್ರಭು, ಅಣೆಕಟ್ಟೆ ನೀರಿನ ಪ್ರಮಾಣ ಹೆಚ್ಚಳದಿಂದ ಸುತ್ತಲಿನ ಗ್ರಾಮಕ್ಕೆ ತೊಂದರೆಯಾಗುವ ಬಗ್ಗೆ ದೂರು ಬಂದ ಹಿನ್ನಲೆಯಲ್ಲಿ ಇಲಾಖೆ ಗೇಟ್ ತೆರವು ಮಾಡಿ ತೊಂದರೆಯಾಗಿತ್ತು. ಇದೀಗ ಮತ್ತೆ ಗೇಟ್ ಹಾಕಲಾಗಿದ್ದು, ಗ್ರಾಮಸ್ಥರಿಗೆ ತೊಂದರೆಯಾಗದಂತೆ ಎಚ್ಚರವಹಿಸಲಾಗುವುದು ಎಂದು ಭರವಸೆ ನೀಡಿದರು.</p>.<p>ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷರಾದ ಜಿತೇಂದ್ರ ಪುರ್ಟಾಡೊ, ಗಿರಿಯಪ್ಪ ಪೂಜಾರಿ, ಮಧುಕರ ಸುವರ್ಣ, ಗ್ರಾಮ ಪಂಚಾಯಿತಿ ಸದಸ್ಯರಾದ ಜಯಂತಿ, ಯೋಗಾನಂದ, ಯಶವಂತ್ ಸ್ಥಳೀಯರಾದ ರಾಘವೇಂದ್ರ ಸುವರ್ಣ, ಜೇಮ್ಸ್ ಡಿಸೋಜ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪಡುಬಿದ್ರಿ:</strong> ಪಲಿಮಾರು ಅಣೆಕಟ್ಟೆ ಅಸಮರ್ಪಕ ನಿರ್ವಹಣೆಯಿಂದ ಹೊಯಿಗೆ ಗ್ರಾಮಕ್ಕೆ ನೀರು ಪೂರೈಕೆಯಾಗದೆ ತೊಂದರೆಯಾಗುತ್ತಿದೆ ಎಂದು ಆರೋಪಿಸಿ ಹೊಯಿಗೆ ಗ್ರಾಮಸ್ಥರು ಶನಿವಾರ ಪಲಿಮಾರು ಗ್ರಾಮ ಪಂಚಾಯಿತಿಗೆ ಮನವಿ ಸಲ್ಲಿಸಿದರು.</p>.<p>ಹೊಯಿಗೆ, ಅವರಾಲು ಮಟ್ಟು ಪ್ರದೇಶಗಳಿಗೆ ಎರಡು ವರ್ಷಗಳಿಂದ ಸಮರ್ಪಕವಾಗಿ ನೀರು ಹರಿಯದೆ ಕೃಷಿಕರು, ಜಾನುವಾರುಗಳಿಗೆ ಸಮಸ್ಯೆಗಳಾಗಿವೆ. ಅಂತರ್ಜಲ ಮಟ್ಟ ಕುಸಿತಕ್ಕೊಳಗಾಗಿದೆ ಎಂದು ಗ್ರಾಮಸ್ಥರು ದೂರಿದರು. ಈ ಬಗ್ಗೆ ಗ್ರಾಮ ಪಂಚಾಯಿತಿ ಹಾಗೂ ಇಲಾಖೆ ತುರ್ತು ಗಮನಹರಿಸಿ ಕ್ರಮವಹಿಸುವಂತೆ ಅವರು ಆಗ್ರಹಿಸಿದರು.</p>.<p>ಪಲಿಮಾರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಗಾಯತ್ರಿ ಡಿ. ಪ್ರಭು ಹಾಗೂ ಪಿಡಿಒ ಶಶಿಧರ ಆಚಾರ್ಯ ಅವರು ಮನವಿ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಗಾಯತ್ರಿ ಪ್ರಭು, ಅಣೆಕಟ್ಟೆ ನೀರಿನ ಪ್ರಮಾಣ ಹೆಚ್ಚಳದಿಂದ ಸುತ್ತಲಿನ ಗ್ರಾಮಕ್ಕೆ ತೊಂದರೆಯಾಗುವ ಬಗ್ಗೆ ದೂರು ಬಂದ ಹಿನ್ನಲೆಯಲ್ಲಿ ಇಲಾಖೆ ಗೇಟ್ ತೆರವು ಮಾಡಿ ತೊಂದರೆಯಾಗಿತ್ತು. ಇದೀಗ ಮತ್ತೆ ಗೇಟ್ ಹಾಕಲಾಗಿದ್ದು, ಗ್ರಾಮಸ್ಥರಿಗೆ ತೊಂದರೆಯಾಗದಂತೆ ಎಚ್ಚರವಹಿಸಲಾಗುವುದು ಎಂದು ಭರವಸೆ ನೀಡಿದರು.</p>.<p>ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷರಾದ ಜಿತೇಂದ್ರ ಪುರ್ಟಾಡೊ, ಗಿರಿಯಪ್ಪ ಪೂಜಾರಿ, ಮಧುಕರ ಸುವರ್ಣ, ಗ್ರಾಮ ಪಂಚಾಯಿತಿ ಸದಸ್ಯರಾದ ಜಯಂತಿ, ಯೋಗಾನಂದ, ಯಶವಂತ್ ಸ್ಥಳೀಯರಾದ ರಾಘವೇಂದ್ರ ಸುವರ್ಣ, ಜೇಮ್ಸ್ ಡಿಸೋಜ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>