ಅಹಿಂದ ಮರೆತ ಸಿದ್ದರಾಮಯ್ಯ:ಅಹಿಂದ ಹೋರಾಟದ ಮೂಲಕ ಮುಖ್ಯಮಂತ್ರಿಯಾದ ಸಿದ್ದರಾಮಯ್ಯ, ಅಧಿಕಾರ ಸಿಕ್ಕ ಬಳಿಕ ಅಹಿಂದ ಮರೆತರು. ಹಿಂದುಳಿದ ವರ್ಗಗಳ ಉದ್ಧಾರಕ್ಕೆ ಶ್ರಮಿಸಲಿಲ್ಲ. ಕಾಂಗ್ರೆಸ್ನಲ್ಲಿ ದಲಿತ ಮುಖ್ಯಮಂತ್ರಿ ಚರ್ಚೆ ಮುನ್ನಲೆಗೆ ಬಂದಾಗ ಪಕ್ಷಕ್ಕೆ ಹಗಲು ರಾತ್ರಿ ದುಡಿದ ಪರಮೇಶ್ವರ್ ಹಾಗೂ ಮಲ್ಲಿಕಾರ್ಜುನ ಖರ್ಗೆ ಅವರನ್ನು ಸೋಲಿಸಿದರು. ಈಗ ತಾಕತ್ತಿದ್ದರೆ ಬಿಜೆಪಿ ದಲಿತರನ್ನು ಮುಖ್ಯಮಂತ್ರಿ ಮಾಡಲಿ ಎಂದು ಸವಾಲು ಹಾಕಿರುವುದು ಹಾಸ್ಯಾಸ್ಪದ ಎಂದರು.