<p><strong>ಉಡುಪಿ</strong>: ಸಾರ್ವರ್ಕರ್ ಭಾವಚಿತ್ರ ಅಳವಡಿಕೆಗೆ ಆಕ್ಷೇಪ ಸಲ್ಲಿಸಿದರೆ ಸ್ವಾತಂತ್ರ್ಯಕ್ಕೆ ಆಕ್ಷೇಪ ಸಲ್ಲಿಸಿದಂತೆ ಎಂದು ಇಂಧನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ.ಸುನಿಲ್ ಕುಮಾರ್ ಹೇಳಿದರು.</p>.<p>ಉಡುಪಿಯಲ್ಲಿ ಸೋಮವಾರ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿ, ಪಿಎಫ್ಐ ಸಂಘಟನೆ ಟಿಪ್ಪು ಹಾಗೂ ಸಾವರ್ಕರ್ ನಡುವೆ ಹೋಲಿಕೆ ಮಾಡಿ ಸಮಾಜದಲ್ಲಿ ಅಶಾಂತಿ ಸೃಷ್ಟಿಸುತ್ತಿದೆ. ಶಾಂತಿ ಕದಡುವವರನ್ನು ಸರ್ಕಾರ ಹದ್ದುಬಸ್ತಿನಲ್ಲಿ ಇಡಲಿದೆ ಎಂದು ತಿಳಿಸಿದರು.</p>.<p>ಸಾರ್ವಕರ್ ದೇಶಭಕ್ತ ಹಾಗೂ ಸ್ವಾತಂತ್ರ್ಯ ಸೇನಾನಿಯಾಗಿದ್ದು ಸಮಾಜ ಪುರಸ್ಕರಿಸಿ ಗೌರವಿಸಬೇಕು. ಪಿಎಫ್ಐ ಸಂಘಟನೆ ಸಾವರ್ಕರ್ ಅವರನ್ನು ವಿರೋಧಿಸುತ್ತದೆ ಎಂಬ ಕಾರಣಕ್ಕೆ ರಾಜ್ಯದಾದ್ಯಂತ ಅಳವಡಿಸಿರುವ ಅವರ ಭಾವಚಿತ್ರಗಳನ್ನು ತೆಗೆಯಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದರು.</p>.<p>ಸ್ವಾತಂತ್ರ್ಯ ಹೋರಾಟದ ಸಂದರ್ಭದಲ್ಲಿ ಎರಡು ಕರಿನೀರಿನ ಶಿಕ್ಷೆ ಅನುಭವಿಸಿರುವ ಸಾವರ್ಕರ್ ಬಗ್ಗೆ ತಿಳಿಯಬೇಕಾದರೆ ಅಂಡಮಾನ್ ಜೈಲಿಗೆ ಭೇಟಿನೀಡಬೇಕು. ಅವರ ಬಗ್ಗೆ ಆಕ್ಷೇಪ ಸಹಿಸಲು ಸಾಧ್ಯವಿಲ್ಲ ಎಂದು ಸಚಿವ ಸುನಿಲ್ ಕುಮಾರ್ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಉಡುಪಿ</strong>: ಸಾರ್ವರ್ಕರ್ ಭಾವಚಿತ್ರ ಅಳವಡಿಕೆಗೆ ಆಕ್ಷೇಪ ಸಲ್ಲಿಸಿದರೆ ಸ್ವಾತಂತ್ರ್ಯಕ್ಕೆ ಆಕ್ಷೇಪ ಸಲ್ಲಿಸಿದಂತೆ ಎಂದು ಇಂಧನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ.ಸುನಿಲ್ ಕುಮಾರ್ ಹೇಳಿದರು.</p>.<p>ಉಡುಪಿಯಲ್ಲಿ ಸೋಮವಾರ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿ, ಪಿಎಫ್ಐ ಸಂಘಟನೆ ಟಿಪ್ಪು ಹಾಗೂ ಸಾವರ್ಕರ್ ನಡುವೆ ಹೋಲಿಕೆ ಮಾಡಿ ಸಮಾಜದಲ್ಲಿ ಅಶಾಂತಿ ಸೃಷ್ಟಿಸುತ್ತಿದೆ. ಶಾಂತಿ ಕದಡುವವರನ್ನು ಸರ್ಕಾರ ಹದ್ದುಬಸ್ತಿನಲ್ಲಿ ಇಡಲಿದೆ ಎಂದು ತಿಳಿಸಿದರು.</p>.<p>ಸಾರ್ವಕರ್ ದೇಶಭಕ್ತ ಹಾಗೂ ಸ್ವಾತಂತ್ರ್ಯ ಸೇನಾನಿಯಾಗಿದ್ದು ಸಮಾಜ ಪುರಸ್ಕರಿಸಿ ಗೌರವಿಸಬೇಕು. ಪಿಎಫ್ಐ ಸಂಘಟನೆ ಸಾವರ್ಕರ್ ಅವರನ್ನು ವಿರೋಧಿಸುತ್ತದೆ ಎಂಬ ಕಾರಣಕ್ಕೆ ರಾಜ್ಯದಾದ್ಯಂತ ಅಳವಡಿಸಿರುವ ಅವರ ಭಾವಚಿತ್ರಗಳನ್ನು ತೆಗೆಯಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದರು.</p>.<p>ಸ್ವಾತಂತ್ರ್ಯ ಹೋರಾಟದ ಸಂದರ್ಭದಲ್ಲಿ ಎರಡು ಕರಿನೀರಿನ ಶಿಕ್ಷೆ ಅನುಭವಿಸಿರುವ ಸಾವರ್ಕರ್ ಬಗ್ಗೆ ತಿಳಿಯಬೇಕಾದರೆ ಅಂಡಮಾನ್ ಜೈಲಿಗೆ ಭೇಟಿನೀಡಬೇಕು. ಅವರ ಬಗ್ಗೆ ಆಕ್ಷೇಪ ಸಹಿಸಲು ಸಾಧ್ಯವಿಲ್ಲ ಎಂದು ಸಚಿವ ಸುನಿಲ್ ಕುಮಾರ್ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>