ಮಂಗಳವಾರ ಮಣಿಪಾಲದ ಕಂಟ್ರಿ ಇನ್ ಹೋಟೆಲ್ನಲ್ಲಿ ಹಮ್ಮಿಕೊಂಡಿದ್ದ ರಾಜ್ಯ ಯುವ ಮೋರ್ಚಾ ಕಾರ್ಯಕಾರಿಣಿಯಲ್ಲಿ ಭಾಗವಹಿಸಲು ಆಗಮಿಸಿದ್ದ ವೇಳೆ ಮಾತನಾಡಿ, ಕರಾವಳಿಯು ವಿಚ್ಛಿದ್ರಕಾರಿ ಶಕ್ತಿಗಳ ಕೇಂದ್ರವಾಗುತ್ತಿದ್ದು, ಎನ್ಐಎ ಕೇಂದ್ರ ಸ್ಥಾಪನೆ ಸಂಬಂಧ ಅಮಿತ್ ಶಾ ಅವರ ಬಳಿ ಮಾತನಾಡುತ್ತೇನೆ. ಪೊಲೀಸ್ ಇಲಾಖೆ, ಇಂಟೆಲಿಜೆನ್ಸ್ ಹಾಗೂ ಎನ್ಐಎ ಜೊತೆಯಾಗಿ ಕೆಲಸ ಮಾಡಿದರೆ ಭಯೋತ್ಪಾದನಾ ಚಟುವಟಿಕೆಗಳಿಗೆ ಬ್ರೇಕ್ ಹಾಕಬಹುದು ಎಂದರು.