ಉಡುಪಿ: ರಾಜ್ಯ ಮುಕ್ತ ವಿಶ್ವವಿದ್ಯಾಲಯದ ವತಿಯಿಂದ 2023-24ನೇ ಸಾಲಿನ ಶೈಕ್ಷಣಿಕ ಪ್ರಚಾರ ಕಾರ್ಯ ರಾಜ್ಯದಾದ್ಯಂತ ನಡೆಯುತ್ತಿದ್ದು, ಬುಧವಾರ ಉಡುಪಿ ನಗರಕ್ಕೆ ಬಂದ ಪ್ರಚಾರ ವಾಹನಕ್ಕೆ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾ ಕುಮಾರಿ ಹಾಗೂ ಶಾಸಕ ಯಶ್ಪಾಲ್ ಸುವರ್ಣ ಸ್ವಾಗತಕೋರಿ ಜಿಲ್ಲೆಯಲ್ಲಿ ಶೈಕ್ಷಣಿಕ ಪ್ರಚಾರ ಕಾರ್ಯಕ್ಕೆ ಚಾಲನೆ ನೀಡಿದರು.