ಬಂದು ಬೇಸಾಯ ಮಾಡಲು ಸಿದ್ಧ ಮಾಡಿರುವ ನೇಜಿ, ದನಗಳಿಗೆ ಮೇಯಲು ಬೆಳೆಸಿರುವ ಹುಲ್ಲು, ಬೆಳೆದ ಭತ್ತದ ಪೈರು ಎಲ್ಲವನ್ನೂ ಜಿಂಕೆಗಳು ತಿಂದು ನಾಶ ಮಾಡುತ್ತವೆ. ಕಡವೆಗಳು ಹಿಂಡಾಗಿ ಬಂದು ಭತ್ತ, ಅಡಿಕೆ, ತೆಂಗು, ಬಾಳೆ ಗಿಡಗಳನ್ನೇ ತಿಂದು ನಾಶಪಡಿಸುತ್ತಿವೆ. ಕಾಡುಕೋಣಗಳು ಬಹುತೇಕ ಕಡೆಗಳಲ್ಲಿ ದೊಡ್ಡ ಪ್ರಮಾಣದಲ್ಲಿ ಹಾನಿ ಮಾಡುತ್ತಿವೆ. ಕಾಡುಕೋಣಗಳು ಗಿಡಗಳನ್ನು ತುಳಿದು ಹಾಳು ಮಾಡುತ್ತವೆ. ಕಾಡುಕೋಣಗಳನ್ನು ಓಡಿಸುವುದೇ ಕಷ್ಟ. ನೋಡುವಾಗಲೇ ಭಯಹುಟ್ಟುತ್ತದೆ. ಇತ್ತೀಚೆಗೆ ಚಿರತೆ, ಹುಲಿಗಳು ಕೂಡ ಅಲ್ಲಲ್ಲಿ ಕಾಣುತ್ತಿವೆ. ಸಾಕುನಾಯಿ, ದನಕರುಗಳನ್ನು ಹಿಡಿದು ತಿನ್ನುತ್ತಿವೆ. ಮನುಷ್ಯರ ಮೇಲೂ ದಾಳಿ ಮಾಡುವ ಭೀತಿಯಿದೆ ಎಂದು ಆತಂಕ ವ್ಯಕ್ತಪಡಿಸಿದರು.