<p><strong>ಉಡುಪಿ: </strong>ಅರಬ್ಬಿಸಮುದ್ರದಲ್ಲಿ ವಾಯುಭಾರ ಕುಸಿತದಿಂದ ಲಕ್ಷದ್ವೀಪದಲ್ಲಿ ‘ಮಹಾ’ ಚಂಡಮಾರುತ ಎದ್ದಿದ್ದು ವಾಯವ್ಯ ದಿಕ್ಕಿನೆಡೆಗೆ ಬರುತ್ತಿದೆ. ರಾಜ್ಯದ ಕರಾವಳಿ ಭಾಗದಲ್ಲಿನ.1ರಂದು ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಹೆಚ್ಚಾಗಿದೆ ಎಂದುಹವಾಮಾನ ಇಲಾಖೆ,ರಾಜ್ಯ ನೈಸರ್ಗಿಕ ವಿಕೋಪ ಕೇಂದ್ರದ ಮುನ್ಸೂಚನೆ ನೀಡಿದೆ.</p>.<p>ಸಮುದ್ರ ಪ್ರಕ್ಷುಬ್ಧಗೊಂಡಿರುವ ಹಿನ್ನೆಲೆಯಲ್ಲಿ ಮೀನುಗಾರರು, ಪ್ರವಾಸಿಗರು ಸಮುದ್ರಕ್ಕೆ ಇಳಿಯಬಾರದು. ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿ ಇರಬೇಕು. ಸಾರ್ವಜನಿಕರು ಸುರಕ್ಷಿತ ಸ್ಥಳಗಳಿಗೆ ತೆರಬೇಕು ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದ್ದಾರೆ.</p>.<p>ತುರ್ತು ಸೇವೆಗೆ ಟೋಲ್ ಫ್ರೀ ನಂ:1077, ದೂರವಾಣಿ: 0820-2574802 / 2574360 ಸಂಪರ್ಕಿಸಬಹುದು.</p>.<p>ಕೊಮೊರಿನ್ ಮಾಲ್ಡಿವ್ಸ್, ಕೇರಳ ಹಾಗೂ ಕರ್ನಾಟಕ ಕರಾವಳಿಯಲ್ಲಿ ಕಡಲು ಪ್ರಕ್ಷುಬ್ಧಗೊಂಡಿದೆ. ಪೂರ್ವ ಮಧ್ಯ ಅರಬ್ಬಿ ಸಮುದ್ರ ಹಾಗೂ ಲಕ್ಷ ದ್ವೀಪದಲ್ಲಿ ಒಂದು ಮೀಟರ್ಗಿಂತ ಎತ್ತರದ ಅಲೆಗಳು ಏಳುತ್ತಿವೆ. ಚಂಡಮಾರುತ ಪ್ರಭಾವದಿಂದ ಕರಾವಳಿಯಾದ್ಯಂತ ಬಿರುಸಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.</p>.<p><strong>ಬೆಳಿಗ್ಗೆ ಬಿಸಿಲು; ಮಧ್ಯಾಹ್ನ ಮಳೆ: </strong>ಗುರುವಾರ ಬೆಳಿಗ್ಗೆ ನಗರದಲ್ಲಿ ಬೇಸಗೆಯ ವಾತಾವರಣ ಇತ್ತು. ಮಧ್ಯಾಹ್ನವಾಗುತ್ತಲೇ ದಟ್ಟವಾದ ಮೋಡ ಕವಿಯಿತು. ಕೆಲವೇ ಕ್ಷಣಗಳಲ್ಲಿ ಬಿರುಸಾಗಿ ಮಳೆ ಸುರಿಯಿತು. ಮಧ್ಯಾಹ್ನದಿಂದ ರಾತ್ರಿಯವರೆಗೂ ಜಿಟಿಜಿಟಿ ಮಳೆ ಸುರಿಯುತ್ತಲೇ ಇತ್ತು. ಜತೆಗೆ, ತಂಪಾದ ವಾತಾವರಣ ನಿರ್ಮಾಣವಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಉಡುಪಿ: </strong>ಅರಬ್ಬಿಸಮುದ್ರದಲ್ಲಿ ವಾಯುಭಾರ ಕುಸಿತದಿಂದ ಲಕ್ಷದ್ವೀಪದಲ್ಲಿ ‘ಮಹಾ’ ಚಂಡಮಾರುತ ಎದ್ದಿದ್ದು ವಾಯವ್ಯ ದಿಕ್ಕಿನೆಡೆಗೆ ಬರುತ್ತಿದೆ. ರಾಜ್ಯದ ಕರಾವಳಿ ಭಾಗದಲ್ಲಿನ.1ರಂದು ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಹೆಚ್ಚಾಗಿದೆ ಎಂದುಹವಾಮಾನ ಇಲಾಖೆ,ರಾಜ್ಯ ನೈಸರ್ಗಿಕ ವಿಕೋಪ ಕೇಂದ್ರದ ಮುನ್ಸೂಚನೆ ನೀಡಿದೆ.</p>.<p>ಸಮುದ್ರ ಪ್ರಕ್ಷುಬ್ಧಗೊಂಡಿರುವ ಹಿನ್ನೆಲೆಯಲ್ಲಿ ಮೀನುಗಾರರು, ಪ್ರವಾಸಿಗರು ಸಮುದ್ರಕ್ಕೆ ಇಳಿಯಬಾರದು. ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿ ಇರಬೇಕು. ಸಾರ್ವಜನಿಕರು ಸುರಕ್ಷಿತ ಸ್ಥಳಗಳಿಗೆ ತೆರಬೇಕು ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದ್ದಾರೆ.</p>.<p>ತುರ್ತು ಸೇವೆಗೆ ಟೋಲ್ ಫ್ರೀ ನಂ:1077, ದೂರವಾಣಿ: 0820-2574802 / 2574360 ಸಂಪರ್ಕಿಸಬಹುದು.</p>.<p>ಕೊಮೊರಿನ್ ಮಾಲ್ಡಿವ್ಸ್, ಕೇರಳ ಹಾಗೂ ಕರ್ನಾಟಕ ಕರಾವಳಿಯಲ್ಲಿ ಕಡಲು ಪ್ರಕ್ಷುಬ್ಧಗೊಂಡಿದೆ. ಪೂರ್ವ ಮಧ್ಯ ಅರಬ್ಬಿ ಸಮುದ್ರ ಹಾಗೂ ಲಕ್ಷ ದ್ವೀಪದಲ್ಲಿ ಒಂದು ಮೀಟರ್ಗಿಂತ ಎತ್ತರದ ಅಲೆಗಳು ಏಳುತ್ತಿವೆ. ಚಂಡಮಾರುತ ಪ್ರಭಾವದಿಂದ ಕರಾವಳಿಯಾದ್ಯಂತ ಬಿರುಸಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.</p>.<p><strong>ಬೆಳಿಗ್ಗೆ ಬಿಸಿಲು; ಮಧ್ಯಾಹ್ನ ಮಳೆ: </strong>ಗುರುವಾರ ಬೆಳಿಗ್ಗೆ ನಗರದಲ್ಲಿ ಬೇಸಗೆಯ ವಾತಾವರಣ ಇತ್ತು. ಮಧ್ಯಾಹ್ನವಾಗುತ್ತಲೇ ದಟ್ಟವಾದ ಮೋಡ ಕವಿಯಿತು. ಕೆಲವೇ ಕ್ಷಣಗಳಲ್ಲಿ ಬಿರುಸಾಗಿ ಮಳೆ ಸುರಿಯಿತು. ಮಧ್ಯಾಹ್ನದಿಂದ ರಾತ್ರಿಯವರೆಗೂ ಜಿಟಿಜಿಟಿ ಮಳೆ ಸುರಿಯುತ್ತಲೇ ಇತ್ತು. ಜತೆಗೆ, ತಂಪಾದ ವಾತಾವರಣ ನಿರ್ಮಾಣವಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>