ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಲ್ಲು ಕ್ವಾರಿಗೆ ಬಿದ್ದು ಮಹಿಳೆ ಸಾವು

Last Updated 4 ಜುಲೈ 2022, 15:26 IST
ಅಕ್ಷರ ಗಾತ್ರ

ಉಡುಪಿ: ಮಲ್ಪೆ ಠಾಣೆ ವ್ಯಾಪ್ತಿಯ ಕೆಳಾರ್ಕಳಬೆಟ್ಟು ಬಳಿಯ ಕಲ್ಲು ಕ್ವಾರಿಗೆ ಬಿದ್ದು ಮಹಿಳೆ ಮೃತಪಟ್ಟಿದ್ದಾರೆ.

ರಾಧಾ (65) ಮೃತರು. ಭಾನುವಾರ ಸಂಜೆ ಮನೆಯಿಂದ ಹೊರಹೋಗಿದ್ದ ಅವರು ಮರಳಿ ಮನೆಗೆ ಬಂದಿರಲಿಲ್ಲ. ಬಳಿಕ ಶೋಧ ನಡೆಸಿದಾಗ ಮನೆಯ ಪಕ್ಕದಲ್ಲಿದ್ದ ಕೆಂಪು ಕ್ವಾರಿಯ ನೀರಿನಲ್ಲಿ ಬಿದ್ದಿರುವುದು ಗಮನಕ್ಕೆ ಬಂತು. ಕೂಡಲೇ ರಾಧಾ ಅವರನ್ನು ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಬದುಕುಳಿದಿರಲಿಲ್ಲ.

ಗಾಂಜಾ ಸೇವನೆ: ಆರೋಪಿಗಳು ವಶ

ಉಡುಪಿ: ಪುತ್ತೂರು ಗ್ರಾಮದ ರಾಜೀವ್‌ ನಗರದ ಕೊರಗ ಭವನದ ಬಳಿ ಗಾಂಜಾ ಸೇವನೆ ಮಾಡುತ್ತಿದ್ದ ತಿರುಪತಿ, ಕೌಶಿಕ್‌ ದೇವಾಡಿಗ ಎಂಬುವರನ್ನು ವಶಕ್ಕೆ ಪಡೆದು ಎನ್‌ಡಿಪಿಎಸ್‌ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.

ಆರೋಪಿಗಳನ್ನು ಕೆ.ಎಂ.ಸಿ ಫೊರೆನ್ಸಿಕ್‌ ಮೆಡಿಸಿನ್‌ ವಿಭಾಗದಲ್ಲಿ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದಾಗ ಗಾಂಜಾ ಸೇವನೆ ದೃಢಪಟ್ಟಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT