<p><strong>ಉಡುಪಿ:</strong> ಮಹಿಳೆಯರು ಯಾವುದೇ ಕೀಳರಿಮೆ ಇಲ್ಲದೆ ಜೀವನದಲ್ಲಿ ಮುನ್ನುಗ್ಗಿದರೆ ಯಶಸ್ಸು ಸಾಧಿಸಲು ಸಾಧ್ಯ ಎಂದು ಕಸ್ತೂರ್ಬಾ ಮೆಡಿಕಲ್ ಕಾಲೇಜಿನ ನೇತ್ರ ವಿಜ್ಞಾನ ವಿಭಾಗದ ಮುಖ್ಯಸ್ಥೆ ಡಾ. ಸವಿತಾ ಭಂಡಾರಿ ಹೇಳಿದರು.</p>.<p>ಉಡುಪಿಯ ನೇತ್ರ ಜ್ಯೋತಿ ಕಾಲೇಜು ಮತ್ತು ಪ್ರಸಾದ್ ನೇತ್ರಾಲಯದ ಸಹಯೋಗದಲ್ಲಿ ಕಾಲೇಜಿನಲ್ಲಿ ಶನಿವಾರ ಹಮ್ಮಿಕೊಂಡಿದ್ದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ಅಧ್ಯಕ್ಷತೆ ವಹಿಸಿದ್ದ ನೇತ್ರ ಜ್ಯೋತಿ ಕಾಲೇಜಿನ ಸಂಸ್ಥಾಪಕ ಅಧ್ಯಕ್ಷ ಡಾ. ಕೃಷ್ಣಪ್ರಸಾದ್ ಕೂಡ್ಲು ಮಾತನಾಡಿ, ಮಹಿಳೆಯರು ಈಗ ಅಬಲೆಯರಲ್ಲ. ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಅವರ ಸಾಧನೆ ಅಮೋಘವಾದುದು. ಪುರುಷರ ಏಳಿಗೆಯಲ್ಲಿ ಮಹಿಳೆಯ ಪಾತ್ರ ಯಾವತ್ತೂ ಇರುತ್ತದೆ ಎಂದರು.</p>.<p>ಪ್ರಾಸ್ತಾವಿಕವಾಗಿ ಮಾತನಾಡಿದ ನೇತ್ರ ಜ್ಯೋತಿ ಕಾಲೇಜಿನ ಅಧ್ಯಕ್ಷೆ ರಶ್ಮಿ ಕೃಷ್ಣಪ್ರಸಾದ್, ಮಹಿಳಾ ದಿನಾಚರಣೆ ಒಂದು ದಿನಕ್ಕೆ ಸೀಮಿತವಾಗಬಾರದು, ಪ್ರತಿ ದಿನವೂ ಮಹಿಳೆಯರಿಗೆ ಗೌರವ ನೀಡುವಂತಾಗಬೇಕು ಎಂದರು.</p>.<p>ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಅಮೃತ ಕೃಷ್ಣಮೂರ್ತಿ, ಅರುಣಾಕಲ, ಅನಿತಾ ಬಾಳಿಗ, ಡಾ. ಕಾಂತಿ ಹರೀಶ್, ಡಾ. ಅರ್ಚನಾ ಎಂ.ವಿ., ಡಾ. ಶ್ರುತಿ ಬಲ್ಲಾಳ್ ಅವರನ್ನು ಸನ್ಮಾನಿಸಲಾಯಿತು.</p>.<p>ಕಾಲೇಜಿನ ಸಿಒಒ ಡಾ. ಗೌರಿ ಪ್ರಭು ಇದ್ದರು. ಶ್ರಾವ್ಯ ಸಂಗಡಿಗರು ಪ್ರಾರ್ಥಿಸಿದರು. ಮಾಧವ ಪೂಜಾರಿ ಸ್ವಾಗತಿಸಿದರು. ಚರಣರಾಜ್ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಉಡುಪಿ:</strong> ಮಹಿಳೆಯರು ಯಾವುದೇ ಕೀಳರಿಮೆ ಇಲ್ಲದೆ ಜೀವನದಲ್ಲಿ ಮುನ್ನುಗ್ಗಿದರೆ ಯಶಸ್ಸು ಸಾಧಿಸಲು ಸಾಧ್ಯ ಎಂದು ಕಸ್ತೂರ್ಬಾ ಮೆಡಿಕಲ್ ಕಾಲೇಜಿನ ನೇತ್ರ ವಿಜ್ಞಾನ ವಿಭಾಗದ ಮುಖ್ಯಸ್ಥೆ ಡಾ. ಸವಿತಾ ಭಂಡಾರಿ ಹೇಳಿದರು.</p>.<p>ಉಡುಪಿಯ ನೇತ್ರ ಜ್ಯೋತಿ ಕಾಲೇಜು ಮತ್ತು ಪ್ರಸಾದ್ ನೇತ್ರಾಲಯದ ಸಹಯೋಗದಲ್ಲಿ ಕಾಲೇಜಿನಲ್ಲಿ ಶನಿವಾರ ಹಮ್ಮಿಕೊಂಡಿದ್ದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ಅಧ್ಯಕ್ಷತೆ ವಹಿಸಿದ್ದ ನೇತ್ರ ಜ್ಯೋತಿ ಕಾಲೇಜಿನ ಸಂಸ್ಥಾಪಕ ಅಧ್ಯಕ್ಷ ಡಾ. ಕೃಷ್ಣಪ್ರಸಾದ್ ಕೂಡ್ಲು ಮಾತನಾಡಿ, ಮಹಿಳೆಯರು ಈಗ ಅಬಲೆಯರಲ್ಲ. ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಅವರ ಸಾಧನೆ ಅಮೋಘವಾದುದು. ಪುರುಷರ ಏಳಿಗೆಯಲ್ಲಿ ಮಹಿಳೆಯ ಪಾತ್ರ ಯಾವತ್ತೂ ಇರುತ್ತದೆ ಎಂದರು.</p>.<p>ಪ್ರಾಸ್ತಾವಿಕವಾಗಿ ಮಾತನಾಡಿದ ನೇತ್ರ ಜ್ಯೋತಿ ಕಾಲೇಜಿನ ಅಧ್ಯಕ್ಷೆ ರಶ್ಮಿ ಕೃಷ್ಣಪ್ರಸಾದ್, ಮಹಿಳಾ ದಿನಾಚರಣೆ ಒಂದು ದಿನಕ್ಕೆ ಸೀಮಿತವಾಗಬಾರದು, ಪ್ರತಿ ದಿನವೂ ಮಹಿಳೆಯರಿಗೆ ಗೌರವ ನೀಡುವಂತಾಗಬೇಕು ಎಂದರು.</p>.<p>ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಅಮೃತ ಕೃಷ್ಣಮೂರ್ತಿ, ಅರುಣಾಕಲ, ಅನಿತಾ ಬಾಳಿಗ, ಡಾ. ಕಾಂತಿ ಹರೀಶ್, ಡಾ. ಅರ್ಚನಾ ಎಂ.ವಿ., ಡಾ. ಶ್ರುತಿ ಬಲ್ಲಾಳ್ ಅವರನ್ನು ಸನ್ಮಾನಿಸಲಾಯಿತು.</p>.<p>ಕಾಲೇಜಿನ ಸಿಒಒ ಡಾ. ಗೌರಿ ಪ್ರಭು ಇದ್ದರು. ಶ್ರಾವ್ಯ ಸಂಗಡಿಗರು ಪ್ರಾರ್ಥಿಸಿದರು. ಮಾಧವ ಪೂಜಾರಿ ಸ್ವಾಗತಿಸಿದರು. ಚರಣರಾಜ್ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>