<p><strong>ಉಡುಪಿ</strong>: ಮಣಿಪಾಲದ ಕಸ್ತೂರ್ಬಾ ಮೆಡಿಕಲ್ ಕಾಲೇಜಿನ ಸೆಂಟರ್ ಆಫ್ ಎಕ್ಸಲೆನ್ಸ್ ಇನ್ ಕ್ಲಿನಿಕಲ್ ಬಯೋಲಜಿ ಮತ್ತು ಸಂತಾನೋತ್ಪತ್ತಿ ವಿಜ್ಞಾನ ವಿಭಾಗಗಳ ವತಿಯಿಂದ ವಿಶ್ವ ಭ್ರೂಣಶಾಸ್ತ್ರಜ್ಞರ ದಿನಾಚರಣೆ ಅಂಗವಾಗಿ ಓಪನ್ ಡೇ ಕಾರ್ಯಕ್ರಮ ನಡೆಯಿತು.</p>.<p>ಉದ್ಘಾಟಿಸಿದ ಮಣಿಪಾಲ ಮಾಹೆಯ ಆರೋಗ್ಯ ವಿಜ್ಞಾನ ವಿಭಾಗದ ಸಹ ಕುಲಪತಿ ಡಾ.ಶರತ್ ರಾವ್, ಸಂತಾನೋತ್ಪತ್ತಿ ಔಷಧದ ಭವಿಷ್ಯವು ಕ್ಲಿನಿಕಲ್ ಭ್ರೂಣಶಾಸ್ತ್ರಜ್ಞರ ಪರಿಣತಿ, ಸಮರ್ಪಣೆಯ ಮೇಲೆ ಹೆಚ್ಚು ಅವಲಂಬಿತವಾಗಿದೆ. ಈ ವೃತ್ತಿಪರರು ದಂಪತಿಗಳಿಗೆ ಬಂಜೆತನದ ಸವಾಲುಗಳನ್ನು ಜಯಿಸಲು, ಅವರ ಕನಸುಗಳನ್ನು ನನಸಾಗಿಸಲು ಸಹಾಯ ಮಾಡಲಿದ್ದಾರೆ ಎಂದರು.</p>.<p>ಕೆಎಂಸಿ ಡೀನ್ ಡಾ.ಪದ್ಮರಾಜ್ ಹೆಗ್ಡೆ ಮಾತನಾಡಿ, ಸಂತಾನೋತ್ಪತ್ತಿ ವಿಜ್ಞಾನದಲ್ಲಿ ಸುಧಾರಿತ ತರಬೇತಿ, ಸಂಶೋಧನೆಯ ಮಹತ್ವದ ಬಗ್ಗೆ ತಿಳಿಸಿದರು.</p>.<p>ವಿದ್ಯಾರ್ಥಿಗಳಿಗೆ ಪ್ರನಾಳ ಶಿಶು ಸೃಷ್ಟಿಯ (ಐವಿಎಫ್) ಪ್ರಕ್ರಿಯೆ ಸನಿಹದಿಂದ ಅವಲೋಕಿಸುವ, ಭ್ರೂಣಶಾಸ್ತ್ರದ ತಜ್ಞರೊಂದಿಗೆ ಸಂವಾದ ನಡೆಸುವ ಅವಕಾಶ ನೀಡಲಾಯಿತು.</p>.<p>‘ವಿಶ್ವ ಭ್ರೂಣಶಾಸ್ತ್ರಜ್ಞರ ದಿನ’ವನ್ನು ಜಗತ್ತಿನ ಪ್ರಥಮ ಪ್ರಣಾಳ ಶಿಶುವಾದ ಲೂಯಿಸ್ ಜಾಯ್ ಬ್ರೌನ್ನ ಜನ್ಮದಿನದಂದು ಆಚರಿಸಲಾಗುತ್ತಿದ್ದು, ಮಣಿಪಾಲದ ಸುತ್ತಮುತ್ತಲಿನ ಕಾಲೇಜುಗಳ ಜೀವವಿಜ್ಞಾನದ ವಿದ್ಯಾರ್ಥಿಗಳಲ್ಲಿ ಈ ಬಗ್ಗೆ ಅರಿವು ಮೂಡಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಉಡುಪಿ</strong>: ಮಣಿಪಾಲದ ಕಸ್ತೂರ್ಬಾ ಮೆಡಿಕಲ್ ಕಾಲೇಜಿನ ಸೆಂಟರ್ ಆಫ್ ಎಕ್ಸಲೆನ್ಸ್ ಇನ್ ಕ್ಲಿನಿಕಲ್ ಬಯೋಲಜಿ ಮತ್ತು ಸಂತಾನೋತ್ಪತ್ತಿ ವಿಜ್ಞಾನ ವಿಭಾಗಗಳ ವತಿಯಿಂದ ವಿಶ್ವ ಭ್ರೂಣಶಾಸ್ತ್ರಜ್ಞರ ದಿನಾಚರಣೆ ಅಂಗವಾಗಿ ಓಪನ್ ಡೇ ಕಾರ್ಯಕ್ರಮ ನಡೆಯಿತು.</p>.<p>ಉದ್ಘಾಟಿಸಿದ ಮಣಿಪಾಲ ಮಾಹೆಯ ಆರೋಗ್ಯ ವಿಜ್ಞಾನ ವಿಭಾಗದ ಸಹ ಕುಲಪತಿ ಡಾ.ಶರತ್ ರಾವ್, ಸಂತಾನೋತ್ಪತ್ತಿ ಔಷಧದ ಭವಿಷ್ಯವು ಕ್ಲಿನಿಕಲ್ ಭ್ರೂಣಶಾಸ್ತ್ರಜ್ಞರ ಪರಿಣತಿ, ಸಮರ್ಪಣೆಯ ಮೇಲೆ ಹೆಚ್ಚು ಅವಲಂಬಿತವಾಗಿದೆ. ಈ ವೃತ್ತಿಪರರು ದಂಪತಿಗಳಿಗೆ ಬಂಜೆತನದ ಸವಾಲುಗಳನ್ನು ಜಯಿಸಲು, ಅವರ ಕನಸುಗಳನ್ನು ನನಸಾಗಿಸಲು ಸಹಾಯ ಮಾಡಲಿದ್ದಾರೆ ಎಂದರು.</p>.<p>ಕೆಎಂಸಿ ಡೀನ್ ಡಾ.ಪದ್ಮರಾಜ್ ಹೆಗ್ಡೆ ಮಾತನಾಡಿ, ಸಂತಾನೋತ್ಪತ್ತಿ ವಿಜ್ಞಾನದಲ್ಲಿ ಸುಧಾರಿತ ತರಬೇತಿ, ಸಂಶೋಧನೆಯ ಮಹತ್ವದ ಬಗ್ಗೆ ತಿಳಿಸಿದರು.</p>.<p>ವಿದ್ಯಾರ್ಥಿಗಳಿಗೆ ಪ್ರನಾಳ ಶಿಶು ಸೃಷ್ಟಿಯ (ಐವಿಎಫ್) ಪ್ರಕ್ರಿಯೆ ಸನಿಹದಿಂದ ಅವಲೋಕಿಸುವ, ಭ್ರೂಣಶಾಸ್ತ್ರದ ತಜ್ಞರೊಂದಿಗೆ ಸಂವಾದ ನಡೆಸುವ ಅವಕಾಶ ನೀಡಲಾಯಿತು.</p>.<p>‘ವಿಶ್ವ ಭ್ರೂಣಶಾಸ್ತ್ರಜ್ಞರ ದಿನ’ವನ್ನು ಜಗತ್ತಿನ ಪ್ರಥಮ ಪ್ರಣಾಳ ಶಿಶುವಾದ ಲೂಯಿಸ್ ಜಾಯ್ ಬ್ರೌನ್ನ ಜನ್ಮದಿನದಂದು ಆಚರಿಸಲಾಗುತ್ತಿದ್ದು, ಮಣಿಪಾಲದ ಸುತ್ತಮುತ್ತಲಿನ ಕಾಲೇಜುಗಳ ಜೀವವಿಜ್ಞಾನದ ವಿದ್ಯಾರ್ಥಿಗಳಲ್ಲಿ ಈ ಬಗ್ಗೆ ಅರಿವು ಮೂಡಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>