ಉಡುಪಿ: ‘ವಿಶ್ವ ಅಂಗಾಂಗ ದಾನದ ದಿನದಂದು ಅಂಗಾಂಗ ದಾನ ಮಾಡುವ ಸಂಕಲ್ಪ ಮಾಡೋಣ, ನಾನು ಕೂಡ ಅಂಗಾಂಗ ದಾನಕ್ಕೆ ಸಹಿ ಮಾಡುತ್ತೇನೆ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕರೆ ನೀಡಿದರು.
ಶುಕ್ರವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿ, ‘ಹೃದಯ, ಯಕೃತ್ತು, ಮೂತ್ರಪಿಂಡ ಸೇರಿದಂತೆ ದೇಹದ ಹಲವು ಅಂಗಾಂಗಗಳನ್ನು ಯಶಸ್ವಿಯಾಗಿ ಕಸಿ ಮಾಡಲಾಗುತ್ತಿದೆ. ಮರಣಾ ನಂತರ ದೇಹವನ್ನು ಮಣ್ಣಾಗಿಸದೆ ಅಂಗಾಂಗ ದಾನದ ಮೂಲಕ ಮತ್ತೊಬ್ಬರ ಬಾಳಿಗೆ ಬೆಳಕಾಗೋಣ’ ಎಂದು ಮುಖ್ಯಮಂತ್ರಿ ಬೊಮ್ಮಾಯಿ ಹೇಳಿದರು.