ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಂಗಾಂಗ ದಾನ ಸಂಕಲ್ಪ ಮಾಡೋಣ: ಬೊಮ್ಮಾಯಿ

Last Updated 13 ಆಗಸ್ಟ್ 2021, 14:07 IST
ಅಕ್ಷರ ಗಾತ್ರ

ಉಡುಪಿ: ‘ವಿಶ್ವ ಅಂಗಾಂಗ ದಾನದ ದಿನದಂದು ಅಂಗಾಂಗ ದಾನ ಮಾಡುವ ಸಂಕಲ್ಪ ಮಾಡೋಣ, ನಾನು ಕೂಡ ಅಂಗಾಂಗ ದಾನಕ್ಕೆ ಸಹಿ ಮಾಡುತ್ತೇನೆ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕರೆ ನೀಡಿದರು.

ಶುಕ್ರವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿ, ‘ಹೃದಯ, ಯಕೃತ್ತು, ಮೂತ್ರಪಿಂಡ ಸೇರಿದಂತೆ ದೇಹದ ಹಲವು ಅಂಗಾಂಗಗಳನ್ನು ಯಶಸ್ವಿಯಾಗಿ ಕಸಿ ಮಾಡಲಾಗುತ್ತಿದೆ. ಮರಣಾ ನಂತರ ದೇಹವನ್ನು ಮಣ್ಣಾಗಿಸದೆ ಅಂಗಾಂಗ ದಾನದ ಮೂಲಕ ಮತ್ತೊಬ್ಬರ ಬಾಳಿಗೆ ಬೆಳಕಾಗೋಣ’ ಎಂದು ಮುಖ್ಯಮಂತ್ರಿ ಬೊಮ್ಮಾಯಿ ಹೇಳಿದರು.

ರಾಜ್ಯದಲ್ಲಿ ಶಾಲೆಗಳನ್ನು ಆರಂಭಿಸುವ ಕುರಿತು ತಜ್ಞರ ಸಮಿತಿಯ ವರದಿ ಆಧರಿಸಿ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸ್ಪಷ್ಟಪಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT