ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕುಂದಾಪುರದಲ್ಲಿ ವಿಶ್ವ ಛಾಯಾಗ್ರಾಹಕ ದಿನಾಚರಣೆ

Published 20 ಆಗಸ್ಟ್ 2023, 12:28 IST
Last Updated 20 ಆಗಸ್ಟ್ 2023, 12:28 IST
ಅಕ್ಷರ ಗಾತ್ರ

ಕುಂದಾಪುರ: ಸೌತ್ ಕೆನರಾ ಫೋಟೊಗ್ರಾಫರ್ಸ್‌ ಅಸೋಸಿಯೇಷನ್ ದ.ಕ-ಉಡುಪಿ ಇದರ ಕುಂದಾಪುರ, ಬೈಂದೂರು ವಲಯದ ಆಶ್ರಯದಲ್ಲಿ ಶನಿವಾರ ವಿಶ್ವ ಛಾಯಾಗ್ರಾಹಕ ದಿನ ಆಚರಿಸಲಾಯಿತು.

ಸಂಘಟನೆಯ ಅಧ್ಯಕ್ಷ ದೊಟ್ಟಯ್ಯ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು.

ಶ್ರೀರಾಮ್ ಕ್ರಡಿಟ್ ಕೋ ಆಪರೇಟಿವ್ ಸೊಸೈಟಿ ನಿರ್ದೇಶಕ ಶ್ರೀಧರ್ ಪಿ.ಎಸ್. ಅವರು, ಅಸೋಸಿಯೇಷನ್‌ನ ಹಿರಿಯ ಸದಸ್ಯ, ಕುಂದಾಪುರ ರೈನಬೋ ಸ್ಟುಡಿಯೋ ಮಾಲಿಕ ಶಿವಶಂಕರ ಐತಾಳ ಅವರನ್ನು ಸನ್ಮಾನಿಸಿದರು.

ಸಂಸ್ಥೆಯ ಸಲಹಾ ಸಮಿತಿ ಅಧ್ಯಕ್ಷ ನಾಗರಾಜ್ ರಾಯಪ್ಪನಮಠ, ಜಿಲ್ಲಾ ಕಾರ್ಯದರ್ಶಿ ಅಮೃತ ಬೀಜಾಡಿ, ಜಿಲ್ಲಾ ಕಟ್ಟಡ ಸಮಿತಿ ಸದಸ್ಯ ಗಣೇಶ ಕೆ, ಉಪಾಧ್ಯಕ್ಷರಾದ ರಾಘವೇಂದ್ರ ಭಟ್, ಚಂದ್ರಕಾಂತ, ಶೀನ ದೇವಾಡಿಗ, ನಿಕಟಪೂರ್ವ ಅಧ್ಯಕ್ಷ ರಾಜಾ ಮಠದಬೆಟ್ಟು, ಕೋಶಾಧಿಕಾರಿ ವಿಠಲ್ ನಾಗೂರು ಇದ್ದರು.

ಸಂಘಟನೆ ಕಾರ್ಯದರ್ಶಿ ಪ್ರಮೋದ್ ಚಂದನ ನಿರೂಪಿಸಿದರು. ದಿನೇಶ್ ಗೋಡೆ ಸ್ವಾಗತಿಸಿದರು. ಸುರೇಶ್ ಜಮದಗ್ನಿ ವಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT