ಹಳ್ಳಿಬಿಟ್ಟು ಪಟ್ಟಣಕ್ಕೆ ವಲಸೆ ಬಂದು ಹೋಟೆಲ್ಗಳಲ್ಲಿ ದುಡಿಯುತ್ತಿದ್ದ ಮಕ್ಕಳ ಹಕ್ಕುಗಳ ರಕ್ಷಣೆಗೆ ದಾಮೋದರ ಆಚಾರ್ಯ ಅವರು ಬೆಂಗಳೂರಿನಲ್ಲಿ ‘ಗ್ರಾಮಾಶ್ರಮ’ ಸಂಸ್ಥೆ ಆರಂಭಿಸಿದ್ದರು. ಕುಂದಾಪುರದ ಕನ್ಯಾನದಲ್ಲಿ ‘ನಮ್ಮ ಭೂಮಿ’ ಸಂಸ್ಥೆ ಹುಟ್ಟುಹಾಕಿ ಬಡ ಹಾಗೂ ವಲಸೆ ಕಾರ್ಮಿಕರ ಮಕ್ಕಳಿಗೆ ಸ್ವಉದ್ಯೋಗ ತರಬೇತಿ ನೀಡುತ್ತಿದ್ದರು. ಇದುವರೆಗೂ ಈ ಸಂಸ್ಥೆಯಲ್ಲಿ 1,500ಕ್ಕೂ ಹೆಚ್ಚು ಮಕ್ಕಳು ತರಬೇತಿ ಪಡೆದು ಭವಿಷ್ಯ ರೂಪಿಸಿಕೊಂಡಿದ್ದಾರೆ.