<p><strong>ಉಡುಪಿ:</strong> ಅಂಬಲಪಾಡಿಯ ಶ್ರೀ ಲಕ್ಷ್ಮೀಜನಾರ್ದನ ಯಕ್ಷಗಾನ ಕಲಾಮಂಡಳಿಯ 68ನೇ ವಾರ್ಷಿಕೋತ್ಸವವು ಅಂಬಲಪಾಡಿ ದೇವಳದ ಧರ್ಮದರ್ಶಿ ಡಾ. ನಿ.ಬಿ. ವಿಜಯ ಬಲ್ಲಾಳರ ಅಧ್ಯಕ್ಷತೆಯಲ್ಲಿ ಈಚೆಗೆ ಅಂಬಲಪಾಡಿ ದೇವಸ್ಥಾನದ ವಠಾರದಲ್ಲಿ ಜರುಗಿತು.</p>.<p>ಕಡೆಕಾರು ಶ್ರೀನಿವಾಸ ಹೆಗ್ಡೆ ಅವರಿಗೆ ನಿಡಂಬೂರು ಬೀಡು ಶ್ರೀ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು. ಹಿರಿಯ ಯಕ್ಷಗಾನ ಮಂಡಳಿಗೆ ನೀಡುವ ನಿಡಂಬೂರು ಬೀಡು ಬಲ್ಲಾಳ ಪ್ರಶಸ್ತಿಯನ್ನು ಉದ್ಯಾವರ ಬೊಳ್ಜೆಯ ಶ್ರೀಬ್ರಹ್ಮಬೈದರ್ಕಳ ಯಕ್ಷಗಾನ ಕಲಾ ಮಂಡಳಿಗೆ ಪ್ರದಾನ ಮಾಡಲಾಯಿತು.</p>.<p>ಕಲಾವಿದ ಬೇಳಂಜೆ ಜಯಂತ ನಾಯ್ಕ ಅವರಿಗೆ ಕಿದಿಯೂರು ಜನಾರ್ದನ ಆಚಾರ್ಯ ಪ್ರಶಸ್ತಿ, ಯಕ್ಷಗಾನ ಕಲಾವಿದ ಶಿವಪಾಲನ್ ಅವರಿಗೆ ಕಪ್ಪೆಟ್ಟು ಬಾಬು ಶೆಟ್ಟಿಗಾರ ಪ್ರಶಸ್ತಿ ಹಾಗೂ ಕುತ್ಪಾಡಿ ಆನಂದ ಗಾಣಿಗ ಪ್ರಶಸ್ತಿಯನ್ನು ಸ್ತ್ರೀ ವೇಷಧಾರಿ ಹಾರಾಡಿ ರಮೇಶ ಗಾಣಿಗ ಇವರಿಗೆ ನೀಡಿ ಗೌರವಿಸಲಾಯಿತು.</p>.<p>ನಿವೃತ್ತ ಶಿಕ್ಷಕ ಯು. ರಾಜಗೋಪಾಲ ಆಚಾರ್ಯ, ಉದ್ಯಮಿ ಪ್ರಸಾದ್ರಾಜ್ ಕಾಂಚನ್, ಹವ್ಯಾಸಿ ಯಕ್ಷಗಾನ ಕಲಾವಿದ ಸುಬ್ರಾಯ ಖಾಡಿಲ್ಕರ್ ಮುಖ್ಯ ಅತಿಥಿಗಳಾಗಿದ್ದರು.</p>.<p>ಮಂಡಳಿಯ ಅಧ್ಯಕ್ಷ ಅಜಿತ್ ಕುಮಾರ್ ಸ್ವಾಗತಿಸಿದರು. ಕಾರ್ಯದರ್ಶಿ ಪ್ರಕಾಶ್ ಹೆಬ್ಬಾರ್ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಎ. ಪ್ರವೀಣ ಉಪಾಧ್ಯ ಧನ್ಯವಾದ ಸಮರ್ಪಿಸಿದರು. ಬಳಿಕ ಮಂಡಳಿಯ ಬಾಲ ಕಲಾವಿದರಿಂದ ‘ದ್ರೌಪದಿ ಪ್ರತಾಪ’ ಮತ್ತು ಮಂಡಳಿಯ ಸದಸ್ಯರಿಂದ ‘ಭಸ್ಮಾಸುರ ಮೋಹಿನಿ’ ಯಕ್ಷಗಾನ ಪ್ರದರ್ಶನಗೊಂಡಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಉಡುಪಿ:</strong> ಅಂಬಲಪಾಡಿಯ ಶ್ರೀ ಲಕ್ಷ್ಮೀಜನಾರ್ದನ ಯಕ್ಷಗಾನ ಕಲಾಮಂಡಳಿಯ 68ನೇ ವಾರ್ಷಿಕೋತ್ಸವವು ಅಂಬಲಪಾಡಿ ದೇವಳದ ಧರ್ಮದರ್ಶಿ ಡಾ. ನಿ.ಬಿ. ವಿಜಯ ಬಲ್ಲಾಳರ ಅಧ್ಯಕ್ಷತೆಯಲ್ಲಿ ಈಚೆಗೆ ಅಂಬಲಪಾಡಿ ದೇವಸ್ಥಾನದ ವಠಾರದಲ್ಲಿ ಜರುಗಿತು.</p>.<p>ಕಡೆಕಾರು ಶ್ರೀನಿವಾಸ ಹೆಗ್ಡೆ ಅವರಿಗೆ ನಿಡಂಬೂರು ಬೀಡು ಶ್ರೀ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು. ಹಿರಿಯ ಯಕ್ಷಗಾನ ಮಂಡಳಿಗೆ ನೀಡುವ ನಿಡಂಬೂರು ಬೀಡು ಬಲ್ಲಾಳ ಪ್ರಶಸ್ತಿಯನ್ನು ಉದ್ಯಾವರ ಬೊಳ್ಜೆಯ ಶ್ರೀಬ್ರಹ್ಮಬೈದರ್ಕಳ ಯಕ್ಷಗಾನ ಕಲಾ ಮಂಡಳಿಗೆ ಪ್ರದಾನ ಮಾಡಲಾಯಿತು.</p>.<p>ಕಲಾವಿದ ಬೇಳಂಜೆ ಜಯಂತ ನಾಯ್ಕ ಅವರಿಗೆ ಕಿದಿಯೂರು ಜನಾರ್ದನ ಆಚಾರ್ಯ ಪ್ರಶಸ್ತಿ, ಯಕ್ಷಗಾನ ಕಲಾವಿದ ಶಿವಪಾಲನ್ ಅವರಿಗೆ ಕಪ್ಪೆಟ್ಟು ಬಾಬು ಶೆಟ್ಟಿಗಾರ ಪ್ರಶಸ್ತಿ ಹಾಗೂ ಕುತ್ಪಾಡಿ ಆನಂದ ಗಾಣಿಗ ಪ್ರಶಸ್ತಿಯನ್ನು ಸ್ತ್ರೀ ವೇಷಧಾರಿ ಹಾರಾಡಿ ರಮೇಶ ಗಾಣಿಗ ಇವರಿಗೆ ನೀಡಿ ಗೌರವಿಸಲಾಯಿತು.</p>.<p>ನಿವೃತ್ತ ಶಿಕ್ಷಕ ಯು. ರಾಜಗೋಪಾಲ ಆಚಾರ್ಯ, ಉದ್ಯಮಿ ಪ್ರಸಾದ್ರಾಜ್ ಕಾಂಚನ್, ಹವ್ಯಾಸಿ ಯಕ್ಷಗಾನ ಕಲಾವಿದ ಸುಬ್ರಾಯ ಖಾಡಿಲ್ಕರ್ ಮುಖ್ಯ ಅತಿಥಿಗಳಾಗಿದ್ದರು.</p>.<p>ಮಂಡಳಿಯ ಅಧ್ಯಕ್ಷ ಅಜಿತ್ ಕುಮಾರ್ ಸ್ವಾಗತಿಸಿದರು. ಕಾರ್ಯದರ್ಶಿ ಪ್ರಕಾಶ್ ಹೆಬ್ಬಾರ್ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಎ. ಪ್ರವೀಣ ಉಪಾಧ್ಯ ಧನ್ಯವಾದ ಸಮರ್ಪಿಸಿದರು. ಬಳಿಕ ಮಂಡಳಿಯ ಬಾಲ ಕಲಾವಿದರಿಂದ ‘ದ್ರೌಪದಿ ಪ್ರತಾಪ’ ಮತ್ತು ಮಂಡಳಿಯ ಸದಸ್ಯರಿಂದ ‘ಭಸ್ಮಾಸುರ ಮೋಹಿನಿ’ ಯಕ್ಷಗಾನ ಪ್ರದರ್ಶನಗೊಂಡಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>